Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್


Team Udayavani, May 7, 2024, 3:47 PM IST

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

ನವದೆಹಲಿ: ನ್ಯೂಯಾರ್ಕ್ ನಲ್ಲಿ ನಡೆಯುವ ಜಗತ್ತಿನ ಶ್ರೇಷ್ಠ ಫ್ಯಾಷನ್‌ ಇವೆಂಟ್‌  ಮೆಟ್​ ಗಾಲಾ ಈ ಬಾರಿ ಅದ್ಧೂರಿಯಾಗಿ ಆಯೋಜನೆಗೊಂಡಿದೆ.

ಪ್ರತಿ ವರ್ಷದ ವಿಶಿಷ್ಠ ಥೀಮ್‌ ನಲ್ಲಿ ಮೆಟ್‌ ಗಾಲಾ ನಡೆಯುತ್ತದೆ. ಈ ಫ್ಯಾಷನ್‌ ಹಬ್ಬದಲ್ಲಿ ಜಗತ್ತಿನ ಖ್ಯಾತ ಸೆಲೆಬ್ರಿಟಿಗಳು ಭಾಗವಹಿಸುತ್ತಾರೆ. ಈ ಬಾರಿ ಭಾರತದ ಆಲಿಯಾ ಭಟ್‌ ಟ್ರೆಡಿಷನಲ್ ಲುಕ್​ನಲ್ಲಿ ಎಂಟ್ರಿ ಕೊಟ್ಟಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಅವರ ಬ್ಯೂಟಿ ಲುಕ್‌ ವೈರಲ್‌ ಆಗಿದೆ.

ಈ ನಡುವೆ ಮೆಟ್‌ ಗಾಲಾದಲ್ಲಿ ಭಾಗಿಯಾಗಿದ್ದಾರೆ ಎಂದು ಖ್ಯಾತ ಸೆಲೆಬ್ರಿಟಿಗಳ ಫೋಟೋವನ್ನು ಡೀಪ್‌ ಫೇಕ್‌ ಮಾಡಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದುಬಿಡಲಾಗಿದೆ.

ಬಾರ್ಬಡಿಯನ್ ಗಾಯಕಿ, ಪಾಪ್‌ ವರ್ಲ್ಡ್‌ ನಲ್ಲಿ ಖ್ಯಾತ ಹೆಸರಾಗಿರುವ  ರಿಹಾನ್ನಾ, ಅಮೆರಿಕಾದ ಗಾಯಕಿ ಕೇಟಿ ಪೆರ್ರಿ, ಹಾಲಿವುಡ್‌ ನಟಿ ಲೇಡಿ ಗಾಗಾ ಅವರ ಎಐ ರಚಿತ ಡೀಪ್‌ ಫೇಕ್‌ ಫೋಟೋಗಳು ವೈರಲ್‌ ಆಗಿದೆ.

ರಿಹಾನ್ನಾ ಮೆಟ್‌ ಗಾಲದಲ್ಲಿ ಭಾಗಿಯಾಗಬೇಕಿದ್ದ ಪ್ರಮುಖ ಸೆಲೆಬ್ರಿಟಿ ಆಗಿದ್ದರು. ಅವರು ಭಾಗಿಯಾಗುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಅವರು ಇವೆಂಟ್‌ ಗೆ ಬಂದಿಲ್ಲ. ಆದರೆ ಹಸಿರು ಬಣ್ಣದ ಗೌನ್‌ ತೊಟ್ಟು, ಕಮಾನಿನಂತಿರುವ  ವಿಸ್ತಾರವಾದ ಬಟ್ಟೆಯನ್ನು ಹಾಕಿರುವ ರಿಹಾನ್ನಾ ಅವರ ಫೋಟೋ ವೈರಲ್‌ ಆಗಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ಗಾಯಕಿ ರಿಹಾನ್ನಾ ಜ್ವರದಿಂದ ಬಳಲುತ್ತಿರುವ ಕಾರಣ ವಾರ್ಷಿಕ ಮೆಟ್‌ ಗಾಲಾ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎಂದು ಪೀಪಲ್ಸ್ ಮ್ಯಾಗ್‌ ಜಿನ್‌ ವರದಿ ತಿಳಿಸಿದೆ.

ಇದಲ್ಲದೆ ಗಾಯಕಿ ಕೇಟಿ ಪೆರ್ರಿ, ಅವರು ರೆಡ್‌ ಕಾರ್ಪೆಟ್‌ ಗೆ ಬಂದಿರುವ ಎಐ ರಚಿತ ಡೀಪ್‌ ಫೇಕ್‌ ಫೋಟೋ ವೈರಲ್‌ ಆಗಿದೆ. ಇದನ್ನು ನೋಡಿ ಸ್ವತಃ ಕೇಟಿ ಅವರೇ ಶಾಕ್‌ ಆಗಿದ್ದಾರೆ. ಅವರ ಎಐ ಫೋಟೋವನ್ನು ಕೇಟಿ ಇನ್ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ಅವರ ತಾಯಿ ಮೆಟ್‌ ಗಾಲಾದಲ್ಲಿ ಮಗಳು ಭಾಗಿಯಾಗಿದ್ದಾಳೆ ಅಂದುಕೊಂಡಿದ್ದಾರೆ. ಆದರೆ ಇದು ಎಐ ಫೋಟೋವೆಂದು ಕೇಟಿ ಅವರೇ ತಾಯಿಗೆ ಸ್ಪಷ್ಟನೆ ನೀಡಿದ್ದಾರೆ.

ಇನ್ನು ನಟಿ ಲೇಡಿ ಗಾಗಾ ಅವರ ಸ್ಟೈಲಿಸ್ಟ್‌ ಉಡುಗೆಯ ಫೋಟೋ ಕೂಡ ಎಐನಿಂದ ರಚಿಸಿ ಮೆಟ್‌ ಗಾಲಾ ಇವೆಂಟ್‌ ನಲ್ಲಿ ಭಾಗಿಯಾದ ಫೋಟೋವೆಂದು ವೈರಲ್‌ ಮಾಡಲಾಗಿದೆ.

ವರ್ಷದ ಮೆಟ್ ಗಾಲಾದ ಥೀಮ್ ‘ಸ್ಲೀಪಿಂಗ್ ಬ್ಯೂಟೀಸ್: ರೀವೇಕನಿಂಗ್ ಫ್ಯಾಶನ್’ ಮತ್ತು ಡ್ರೆಸ್ ಕೋಡ್ ‘ದಿ ಗಾರ್ಡನ್ ಆಫ್ ಟೈಮ್ ಆಗಿದೆ.

 

View this post on Instagram

 

A post shared by KATY PERRY (@katyperry)

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.