ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ತೀವ್ರ ನೊಂದಿರುವ ಮಾಜಿ ಸಚಿವ ಅನಾರೋಗ್ಯದಿಂದಲೂ ಕಂಗಾಲು

Team Udayavani, May 8, 2024, 11:29 PM IST

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಬೆಂಗಳೂರು: ಅಪಹರಣ ಪ್ರಕರಣದ ಸಂಬಂಧ ಎಸ್‌ಐಟಿಯಿಂದ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಅವರನ್ನು ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ಅವರು ಕಣ್ಣೀರು ಹಾಕಿದರು.

4 ದಿನಗಳಿಂದ ಎಸ್‌ಐಟಿ ವಶದಲ್ಲಿದ್ದ ರೇವಣ್ಣ ಮಾನಸಿಕವಾಗಿ ನೊಂದಿದ್ದು,ಮತ್ತೊಂದೆಡೆ ಅನಾರೋಗ್ಯದಿಂದಲೂ ಬಳಲಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಪ್ರಕರಣದ ಸಂಬಂಧ ಪ್ರಶ್ನೆಗಳ ಸುರಿಮಳೆಗಳನ್ನೇ ಕೇಳಿರುವ ಹಿನ್ನೆಲೆಯಲ್ಲಿ ಜರ್ಝರಿತರಾಗಿದ್ದಾರೆ.

ಇದೆಲ್ಲದರಿಂದ ಕುಗ್ಗಿ ಹೋಗಿದ್ದ ಅವರನ್ನು 17ನೇ ಎಸಿಎಂಎಂ ನ್ಯಾಯಾ ಲಯ ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುತ್ತಿದ್ದಂತೆ ಕಣ್ಣೀರು ಹಾಕಿ ಭಾವುಕರಾದರು.

ಕೋರ್ಟ್‌ ಕಟ್ಟಡದಿಂದ ಎಸ್‌ಐಟಿ ಅಧಿಕಾರಿಗಳು ಕರೆ ತರುವ ವೇಳೆ ರೇವಣ್ಣ ಕಣ್ಣೀರು ಹಾಕುತ್ತ ಹೊರ ಬಂದರು. ಇತ್ತ ಅವರನ್ನು ಕೋರ್ಟ್‌ ಆವರಣದಿಂದ ಕರೆದು ಕೊಂಡು ಹೋಗುತ್ತಿದ್ದಾಗ ಕೋರ್ಟ್‌ ಕಟ್ಟಡದ ಸುತ್ತಲೂ ಇಲ್ಲಿನ ಸಿಬಂದಿ ಕಿಕ್ಕಿರಿದು ನಿಂತು ನೋಡುತ್ತಿದ್ದರು. ಪೊಲೀಸ್‌ ವಾಹನದಲ್ಲಿ ಕರೆದೊಯ್ಯುವವರೆಗೂ ಕೋರ್ಟ್‌ ಆವರಣದಲ್ಲಿ ನೆರೆದಿದ್ದವರು ಕುತೂಹಲದಿಂದ ವೀಕ್ಷಿಸಿದರು.

3 ದಿನಗಳಿಂದ ನಿದ್ದೆ ಮಾಡಿಲ್ಲ
ನ್ಯಾಯಾಧೀಶರು ರೇವಣ್ಣ ಬಳಿ ನಿಮಗೆ ಪೊಲೀಸರಿಂದ ತೊಂದರೆ ಆಗಿದೆಯಾ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ರೇವಣ್ಣ, ನಾನು ಮೂರು ದಿನಗಳಿಂದ ಸರಿಯಾಗಿ ನಿದ್ದೆ ಮಾಡಲಿಲ್ಲ. ನನಗೆ ಆರೋಗ್ಯ ಸಮಸ್ಯೆ ಇದೆ. ಎಸ್‌ಐಟಿಯವರು 3 ದಿನದಿಂದ ವಿಚಾರಣೆ ನಡೆಸುತ್ತಿದ್ದಾರೆ. ಅನಾರೋಗ್ಯ ಇದ್ದರೂ ವಿಚಾರಣೆಗೆ ಸಹಕರಿಸಿದ್ದೇನೆ. ನನಗೆ ಎಷ್ಟು ಸಾಧ್ಯವೋ ಅಷ್ಟು ಸಹಕಾರ ನೀಡಿದ್ದೇನೆ. ಮೂರು ರಾತ್ರಿ ನಿದ್ರೆ ಮಾಡಲು ಬಿಟ್ಟಿಲ್ಲ. ನಾನು ಎಲ್ಲೂ ಹೋಗಿರಲಿಲ್ಲ. ನಮ್ಮ ತಂದೆ ಮನೆಯಲ್ಲೇ ಇದ್ದೆ. ನನಗೆ ಈ ಕೇಸ್‌ ಬಗ್ಗೆ ಏನೂ ಗೊತ್ತಿಲ್ಲ. ಪ್ರಕರಣ ದಾಖಲಾಗಿದ್ದೂ ಗೊತ್ತಿಲ್ಲ. ನನ್ನದೇನೂ ತಪ್ಪಿಲ್ಲ ಎಂದು ನ್ಯಾಯಾಧೀಶರ ಮುಂದೆ ರೇವಣ್ಣ ಹೇಳಿದರು.

ಚಿಕಿತ್ಸೆ ಬಗ್ಗೆ ಕೇಳಿದ ಪ್ರಶ್ನೆಗೆ, ಮಂಗಳವಾರ ಚಿಕಿತ್ಸೆ ನಡೆದಿದೆ. ಇವತ್ತು ವೈದ್ಯರು ಕರೆದಿದ್ದಾರೆ. ತುಂಬ ಹೊಟ್ಟೆ ನೋವು ಇದೆ ಸರ್‌. ಈ ಬಗ್ಗೆ ವೈದ್ಯರಿಗೆ ಹೇಳಿದ್ದೇನೆ. ಹುಷಾರಿಲ್ಲ ಎಂದರೂ ವಿಚಾರಣೆ ಮಾಡುತ್ತಿದ್ದಾರೆ. ನನಗೆ ಹೊಟ್ಟೆ ಉರಿ ಇದೆ. ಆಸ್ಪತ್ರೆಗೆ ಸೇರಿಸುತ್ತಿಲ್ಲ. ತಪ್ಪೇ ಮಾಡಿಲ್ಲ ಅಂದರೂ ಹೇಗೆ ಒಪ್ಪಿಕೊಳ್ಳಲಿ. ನನ್ನ 25 ವರ್ಷದ ಅವಧಿಯಲ್ಲಿ ಯಾವುದೇ ತಪ್ಪು ಮಾಡಿಲ್ಲ. ನನ್ನ ವಿರುದ್ಧ ಒಂದೇ ಒಂದು ಕೇಸಿಲ್ಲ. ಬೇಕು ಎಂದೇ ನನ್ನ ಮೇಲೆ ಈ ರೀತಿ ಮಾಡುತ್ತಿದ್ದಾರೆ ಎಂದು ರೇವಣ್ಣ ಉತ್ತರಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.