ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಪ್ರಧಾನಿ ಸಮಿತಿಯಿಂದ 65 ವರ್ಷದ ಜನಸಂಖ್ಯಾ ವರದಿ

Team Udayavani, May 9, 2024, 7:25 AM IST

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಹೊಸದಿಲ್ಲಿ: 1950ರಿಂದ 2015ರ ಅವಧಿಯಲ್ಲಿ ಭಾರತದಲ್ಲಿ ಬಹು ಸಂಖ್ಯಾಕರಾಗಿರುವ ಹಿಂದೂಜನಸಂಖ್ಯೆಯಲ್ಲಿ ಶೇ.7.8 ರಷ್ಟು ಕುಸಿತವಾಗಿದ್ದರೆ, ಅಲ್ಪ ಸಂಖ್ಯಾಕರ ಜನಸಂಖ್ಯೆ ಹೆಚ್ಚಳವಾಗಿದೆ. ಈ ಬಗ್ಗೆ ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿ (ಇಎಸಿ-ಪಿಎಂ)ಯ ಅಧ್ಯಯನ ವರದಿ ತಿಳಿಸಿದೆ.

ಭಾರತದಲ್ಲಿ ಬಹುಸಂಖ್ಯಾಕರ ಜನಸಂಖ್ಯೆಯಲ್ಲಿ ಕುಸಿತ ವಾಗಿದ್ದರೆ, ಇದಕ್ಕೆ ವಿರುದ್ಧವಾಗಿ ನೆರೆಯ ಬಾಂಗ್ಲಾದೇಶ ಮತ್ತು ಪಾಕಿಸ್ಥಾನದಲ್ಲಿರುವ ಬಹುಸಂಖ್ಯಾಕರ ಜನಸಂಖ್ಯೆಯಲ್ಲಿ ಹೆಚ್ಚಳವಾಗಿದೆ. 1950-2015ರ ಅವಧಿಯಲ್ಲಿ ಭಾರತದ ಮುಸ್ಲಿಮರ ಪಾಲು ಶೇ.43.15, ಕ್ರೈಸ್ತರು 5.38, ಸಿಕ್ಖರ ಪಾಲು ಶೇ.6.58 ರಷ್ಟು ಏರಿಕೆಯಾಗಿದೆ. ಬೌದ್ಧರ ಸಂಖ್ಯೆಯಲ್ಲಿ ತುಸು ಏರಿಕೆಯಾದ್ದರೆ, ಜೈನ ಮತ್ತು ಪಾರ್ಸಿ ಸಂಖ್ಯೆ ಕುಸಿತವಾಗಿದೆ.

ಭಾರತದ ಜನಸಂಖ್ಯೆಯಲ್ಲಿ ಹಿಂದೂಗಳ ಪಾಲು 1950ರಲ್ಲಿ ಶೇ.84ರಿಂದ 2015ರಲ್ಲಿ ಶೇ.78 ಕ್ಕೆ ಕಡಿಮೆಯಾಗಿದೆ, ಆದರೆ ಮುಸ್ಲಿಮರ ಸಂಖ್ಯೆ ಅದೇ ಅವಧಿಯಲ್ಲಿ (65 ವರ್ಷಗಳಲ್ಲಿ) ಶೇ.9.84ರಿಂದ ಶೇ.14.09 ಏರಿಕೆ ಕಂಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಒಟ್ಟಾರೆ ಜಾಗತಿಕ ಪ್ರವೃತ್ತಿಯನ್ನು ಪರಿಗಣಿಸು ವುದಾದರೆ, ವಿಶ್ವದ 167 ರಾಷ್ಟ್ರ ಗಳಲ್ಲೂ ಬಹುಸಂಖ್ಯಾಕರ ಜನ ಸಂಖ್ಯೆಯಲ್ಲಿ ಕುಸಿತವಾಗಿದೆ ಎಂದು ವರದಿ ತಿಳಿಸಿದೆ.

ಸಿಎಎಗೆ ಬಲ
ನೀಡಿದ ವರದಿ?
ಪ್ರಧಾನಿಗಳ ಆರ್ಥಿಕ ಸಲಹಾ ಸಮಿತಿಯ ಅಧ್ಯಯನ ವರದಿಯ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಲ ನೀಡಲಿದೆ. ಯಾಕೆಂದರೆ ನೆರೆಯ ರಾಷ್ಟ್ರಗಳಲ್ಲಿ ಬಹುಸಂಖ್ಯಾಕರ ಜನಸಂಖ್ಯೆಯ ಪಾಲು ಹೆಚ್ಚುತ್ತಿರುವ ಪರಿಣಾಮ, ಅಲ್ಪಸಂಖ್ಯಾಕರಾದ ಹಿಂದೂಗಳು, ಸಿಕ್ಖರು ಮತ್ತು ಕ್ರೈಸ್ತರು ಆಶ್ರಯಕ್ಕಾಗಿ ಭಾರತಕ್ಕೆ ವಲಸೆ ಬರುತ್ತಿದ್ದಾರೆ. ಅವರಿಗೆ ತ್ವರಿತವಾಗಿ ಪೌರತ್ವ ನೀಡುವುದು ಅತ್ಯಗತ್ಯವಾಗಿದೆ. 2019ರಲ್ಲಿ ಜಾರಿಗೆ ತಂದ ಸಿಎಎಗೆ ಎರಡು ತಿಂಗಳ ಹಿಂದೆಯಷ್ಟೇ ಮಾರ್ಗಸೂಚಿ ಪ್ರಕಟಿಸಲಾಗಿದೆ.

ಪ್ರಮುಖ ಅಂಶಗಳೇನು?
-ಭಾರತದಲ್ಲಿ ಹಿಂದೂಗಳ ಪ್ರಮಾಣ ಶೇ.7.8 ರಷ್ಟು ಕುಸಿತ
-1950ರಿಂದ 2015ರ ಅವಧಿಯಲ್ಲಿ ಮುಸ್ಲಿಮರ ಪ್ರಮಾಣ ಶೇ.43 ಏರಿಕೆ
-123 ದೇಶಗಳಲ್ಲಿ ಬಹುಸಂಖ್ಯಾಕರ ಸಂಖ್ಯೆ ಇಳಿಕೆ; ಅಲ್ಪಸಂಖ್ಯಾಕರ ವೃದ್ಧಿ
-ಜಗತ್ತಿನ 44 ರಾಷ್ಟ್ರಗಳಲ್ಲಿ ಮಾತ್ರ ಬಹುಸಂಖ್ಯಾಕರ ಸಂಖ್ಯೆ ಹೆಚ್ಚಳ
-ಬಾಂಗ್ಲಾದಲ್ಲಿ ಶೇ.18.5, ಪಾಕಿಸ್ಥಾನದಲ್ಲಿ ಮುಸ್ಲಿಮರ ಸಂಖ್ಯೆ ಶೇ.3.7ರಷ್ಟು ವೃದ್ಧಿ

ಅಲ್ಪಸಂಖ್ಯಾಕರ
ಏರಿಕೆಗೆ ಏನು ಕಾರಣ?
-ಸರಕಾರ ಜಾರಿಗೆ ತಂದ ನೀತಿಗಳು
-ಕೈಗೊಳ್ಳಲಾದ ರಾಜಕೀಯ ನಿರ್ಧಾರಗಳು
-ವೈವಿಧ್ಯತೆಯನ್ನು ಪೋಷಿಸುವಂಥ ವಾತಾವರಣ ಸೃಷ್ಟಿ
-ಅಲ್ಪಸಂಖ್ಯಾಕರ ಉತ್ತಮ ಬದುಕಿಗೆ ನೀತಿಗಳು ಜಾರಿ ಮತ್ತು ಸಂಸ್ಥೆಗಳ ರಚನೆ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.