![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 11, 2024, 12:12 AM IST
ಮಂಗಳೂರು: ಕ್ರೀಡಾ ಕೂಟಗಳು ಪ್ರತಿಭೆಗಳ ಸಾಮರ್ಥ್ಯ ವನ್ನು ಅಳೆಯಲು ಸಹಕಾರಿ ಯಾಗು ತ್ತದೆ. ಮಂಗಳಾ ಕಪ್ ಆಯೋ ಜನೆಯ ಮೂಲಕ ಬಹಳಷ್ಟು ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಉತ್ತಮ ವೇದಿಕೆ ಕಲ್ಪಿಸಿದಂತಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ ಹೇಳಿದರು.
ಮಂಗಳಾ ಬ್ಯಾಡ್ಮಿಂಟನ್ ಅಸೋಸಿ ಯೇಶನ್ ವತಿಯಿಂದ ನಗರದ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂ ಗಣ ದಲ್ಲಿ ಶುಕ್ರ ವಾರ ದಿಂದ ಆರಂಭ ವಾದ “ಮಂಗಳಾ ಕಪ್ 2024′ ರಾಷ್ಟ್ರಮಟ್ಟದ ಓಪನ್ ಬ್ಯಾಡ್ಮಿಂಟನ್ ಕೂಟವನ್ನು ಅವರು ಉದ್ಘಾಟಿಸಿದರು.
ಅಂತಾರಾಷ್ಟ್ರೀಯ ಮೋಟಾರ್ ರೇಸ್ ಪಟು ಅಶ್ವಿನ್ ನಾಯಕ್ ಮಾತ ನಾಡಿ, ಆರೋಗ್ಯಪೂರ್ಣ ಬದುಕಿಗೆ ಕ್ರೀಡೆ ಸಹಕಾರಿ. ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ವಹಿಸಿ ಮುನ್ನಡೆದರೆ ಅವರಿಗೆ ಉತ್ತಮ ಭವಿಷ್ಯವಿದೆ ಎಂದರು. ಮನಪಾ ಸದಸ್ಯೆ ಸಂಧ್ಯಾ ಮೋಹನ್ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಸುಪ್ರೀತ್ ಆಳ್ವ, ಕಾರ್ಯದರ್ಶಿ ದೀಪಕ್ ಕುಮಾರ್, ಪ್ರಮುಖರಾದ ಮುಖ್ಯ ತೀರ್ಪುಗಾರ ಸುರೇಶ್, ವೀಣಾ ಸುರೇಶ್ ಮುಂತಾ ದವರು ಇದ್ದರು.
ಈ ಪಂದ್ಯಾಟದಲ್ಲಿ ಮಿಕ್ಸೆಡ್ ಡಬಲ್ಸ್, ಪುರುಷರ ಮತ್ತು ಮಹಿಳೆ ಯರ ಸಿಂಗಲ್ಸ್, ಡಬಲ್ಸ್, 20, 40 ವರ್ಷ ಮೇಲ್ಪಟ್ಟ ಪುರುಷರ ಡಬಲ್ಸ್, 30 ವರ್ಷ ಮೇಲ್ಪಟ್ಟ ಮಹಿಳೆಯರ ಮುಕ್ತ ಪಂದ್ಯಾಟ ನಡೆಯ ಲಿದ್ದು, ಒಟ್ಟು ಬಹುಮಾನದ ಮೊತ್ತ 5,83,000 ರೂ. ಎಂದು ನಿಗದಿ ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದರು.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.