Kapu ದಿಢೀರ್ ಅನಾರೋಗ್ಯ; ಬಾಲಕಿ ಸಾವು
Team Udayavani, May 11, 2024, 12:36 AM IST
ಕಾಪು: ದಿಢೀರ್ ಅನಾರೋಗ್ಯದಿಂದಾಗಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಕಾಪು ಠಾಣಾ ವ್ಯಾಪ್ತಿಯ ಮಣಿಪುರದಲ್ಲಿ ಗುರುವಾರ ನಡೆದಿದೆ. ರಿಕ್ಷಾ ಚಾಲಕ ಮಣಿಪುರ ನಿವಾಸಿ ಸಂದೇಶ್ ಸನಿಲ್ ಅವರ ಪುತ್ರಿ ಧನ್ವಿ (11) ಮೃತ ಬಾಲಕಿ.
ಧನ್ವಿ ಬುಧವಾರ ರಾತ್ರಿ ಎಲ್ಲರೊಂದಿಗೆ ಊಟ ಮುಗಿಸಿ ಮಲಗಿದ್ದು ಗುರುವಾರ ಮುಂಜಾನೆ ಮೂರು ಗಂಟೆಯ ವೇಳೆಗೆ ದಿಢೀರ್ ಅನಾರೋಗ್ಯಕ್ಕೀಡಾಗಿದ್ದಳು. ವಾಂತಿ ಮಾಡಲು ಆರಂಭಿಸಿದ್ದ ಆಕೆಯನ್ನು ಬೆಳಗ್ಗೆ ಮಣಿಪುರದ ಸ್ಥಳೀಯ ಕ್ಲಿನಿಕ್ಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ಪರೀಕ್ಷಿಸಿ ಮದ್ದನ್ನು ನೀಡಿ ಮನೆಗೆ ಕಳುಹಿಸಿದ್ದರು. ಮಧ್ಯಾಹ್ನ ಬಳಿಕ ಮತ್ತೆ ಅನಾರೋಗ್ಯ ಬಾಧಿಸಿದ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಧನ್ವಿ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.