Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ


Team Udayavani, May 11, 2024, 1:32 AM IST

Hebri ಪರಿಸರದಲ್ಲಿ ಮಂಗಗಳ ಸಾವು; ಕಾಡಿಗೆ ತೆರಳುವಾಗ ಇರಲಿ ಜಾಗ್ರತೆ: ವೈದ್ಯರ ಎಚ್ಚರಿಕೆ

ಕಾರ್ಕಳ: ಹೆಬ್ರಿ, ಮುನಿಯಾಲು ಹಾಗೂ ಮರ್ಣೆ ಕೆರುವಾಶೆ ಮಾಳ ನಾಡಾ³ಲು ಗ್ರಾಮಗಳಲ್ಲಿ 8ಕ್ಕೂ ಹೆಚ್ಚು ಮಂಗಗಳ ಶವ ಪತ್ತೆಯಾಗಿದೆ. ಮರ್ಣೆಯಲ್ಲಿ ಪತ್ತೆಯಾದ ಶವದಲ್ಲಿ ಕೆಎಫ್ಡಿ (ಕ್ಯಾಸನೂರ್‌ ಫಾರೆಸ್ಟ್‌ ಡಿಸೀಸ್‌) ವೈರಸ್‌ ಕಂಡುಬಂದಿದೆ. ಮಾನವರಿಗೆ ಹರಡಿದ ಪ್ರಕರಣ ಪತ್ತೆಯಾಗಿಲ್ಲವಾದರೂ ಮುಂಜಾಗ್ರತೆ ಅಗತ್ಯ ಎಂದು ಆರೋಗ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.

ಅರಣ್ಯದ ಅಂಚಿನಲ್ಲಿವವರಲ್ಲಿ ಈ ಸೋಂಕು ಬೇಗ ಹರಡುವ ಸಂಭವ ಹೆಚ್ಚು. ಬೇಸಗೆಯಲ್ಲಿ ಕಾಡಿಗೆ ಸೌದೆ, ಸೊಪ್ಪು ತರಲೆಂದು ತೆರಳುವವರಿಗೆ ವೈರಾಣುವಿನ ಮೂಲಕ ರೋಗ ಹರಡುವ ಸಾಧ್ಯತೆಯಿದೆ. ಮಂಗ, ಬಾವಲಿಗಳು ಕೆಎಫ್ಡಿ ಸೋಂಕಿನಿಂದ ಬಳಲುತ್ತಿದ್ದರೆ ಅಥವಾ ಸತ್ತಿದ್ದರೆ ಅಂವುಗಳ ರಕ್ತ ಹೀರುವ ಉಣ್ಣೆಗಳು ಮನುಷ್ಯನಿಗೆ ಕಚ್ಚಿದರೆ ನಾಲ್ಕೈದು ದಿನಗಳಲ್ಲಿ ಅಂತಹವರು ಮಂಗನ ಕಾಯಿಲೆಗೆ ತುತ್ತಾಗುತ್ತಾರೆ. ಸದ್ಯ ಮಾನವನಿಗೆ ಸೋಂಕು ಹರಡಿದ ಪ್ರಕರಣ ತಾಲೂಕಿನಲ್ಲಿ ಇಲ್ಲವಾದರೂ ಮುಂಜಾಗ್ರತೆ ಅಗತ್ಯವೆಂದು ವೈದ್ಯಾಧಿಕಾರಿಗಳು ಸಲಹೆ ನೀಡಿದ್ದಾರೆ.

ರೋಗ ಲಕ್ಷಣಗಳು
ಮಂಗನ ಕಾಯಿಲೆ ಸೋಂಕು ತಗುಲಿದರೆ ಆರಂಭದಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ. ವಾರದ ತನಕವೂ ಇರುತ್ತದೆ. ಚಳಿ, ಜ್ವರ, ತಲೆನೋವು, ತೀವ್ರ ಸ್ನಾಯು ನೋವು, ವಾಂತಿ, ಜೀರ್ಣಾಂಗವ್ಯೂಹದ ಸಮಸ್ಯೆಗಳು ಕಾಣಸಿಕೊಳ್ಳುತ್ತವೆ. ನಂತರ ಕಡಿಮೆ ರಕ್ತದೊತ್ತಡ, ರಕ್ತ ಕಣಗಳ ಸಂಖ್ಯೆ ಕಡಿಮೆಯಾಗುವುದು, ತೀವ್ರ ತಲೆನೋವು, ಮಾನಸಿಕ ತೊಂದರೆಗಳು, ನಡುಕ ಮತ್ತು ದೃಷ್ಟಿ ಕೊರತೆಗಳು ಕಾಣಿಸಿ ಕೊಳ್ಳುತ್ತವೆ. ಇಂತಹ ಲಕ್ಷಣ ಕಂಡು ಬಂದಲ್ಲಿ ತತ್‌ಕ್ಷಣವೇ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯದಿದ್ದರೆ ಮಾರಣಾಂತಿಕವಾಗಿ ಪರಿಣಮಿಸಬಹುದು.
ಕಾರ್ಕಳ ತಾಲೂಕಿನ 27 ಗ್ರಾ.ಪಂ ವ್ಯಾಪ್ತಿಯ 39 ಗ್ರಾಮಗಳು , ಹೆಬ್ರಿ ತಾಲೂಕಿನ 16 ಗ್ರಾಮಗಳಲ್ಲಿ ಮಂಗನ ಕಾಯಿಲೆ ನಿರ್ವಹಣೆಗಾಗಿ ಸಮಿತಿ ಈಗಾಗಲೇ ಕಾರ್ಯಾಚರಿಸುತ್ತಿದೆ.

ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಮರ್ಣೆ ಗ್ರಾಮದಲ್ಲಿ ಸತ್ತ ಮಂಗನ ಮೃತದೇಹದಲ್ಲಿ ಫ್ಲಾವಿವಿರಿಡೆ ವೈರಸ್‌ ಪತ್ತೆ ಹಚ್ಚಲಾಗಿದೆ. ಮನುಷ್ಯನಿಗೆ ಹರಡಿದ ಪ್ರಕರಣ ಗಳು ಇದುವರೆಗೂ ದಾಖಲಾಗಿಲ್ಲ. ನಾಗರಿಕರು ಮುನ್ನೆಚ್ಚರಿಕೆ ವಹಿಸು ವುದು ಆವಶ್ಯಕ. ಜ್ವರ ಬಂದರೆ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ. ತಾಲೂಕು ಆಸ್ಪತ್ರೆ ಯಲ್ಲಿ ಪ್ರತ್ಯೇಕ ಬೆಡ್‌ಗಳನ್ನು ಕಲ್ಪಿಸಲು ಸೂಚನೆ ನೀಡಲಾಗಿದೆ.
– ಡಾ| ಸಂದೀಪ್‌ ಕುಡ್ವಾ,
ತಾಲೂಕು ವೈದ್ಯಾಧಿಕಾರಿ ಕಾರ್ಕಳ

ಟಾಪ್ ನ್ಯೂಸ್

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Agri

Agriculture: ಗ್ರಾಮೀಣ ಬದುಕಿನ ಚಾವಡಿ ಚರ್ಚೆ; ಕೇವಲ ನೆನಪು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.