Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ
Team Udayavani, May 11, 2024, 3:24 PM IST
ಆಂಧ್ರಪ್ರದೇಶ: ಚುನಾವಣೆಗೂ ಮುನ್ನ ಆಂಧ್ರಪ್ರದೇಶದಲ್ಲಿ ದಾಖಲೆ ಇಲ್ಲದ ಕಂತೆ ಕಂತೆ ಹಣಗಳು ಪತ್ತೆಯಾಗುತ್ತಿವೆ. ಅದಕ್ಕೆ ಪುಷ್ಟಿ ಎಂಬಂತೆ ಇನ್ನೇನು ಎರಡು ದಿನಗಳಲ್ಲಿ ಚುನಾವಣೆ ನಡೆಯಲಿದೆ ಎನ್ನುವಷ್ಟರಲ್ಲಿ ಅನಂತಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಲ್ಟಿಯಾದ ವಾಹನದಲ್ಲಿ ಕಂತೆ ಕಂತೆ ಹಣಗಳು ಪತ್ತೆಯಾಗಿದೆ.
ಆಂಧ್ರಪ್ರದೇಶದ ನಲ್ಲಜರ್ಲ ಮಂಡಲದ ಅನಂತಪಲ್ಲಿಯಲ್ಲಿ ಟಾಟಾ ಏಸ್ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗೆ ಪರಿಣಾಮ ವಾಹನದಲ್ಲಿದ್ದ ವಸ್ತುಗಳೆಲ್ಲಾ ರಸ್ತೆಗೆ ಎಸೆಯಲ್ಪಟ್ಟಿದೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ವಸ್ತುಗಳನ್ನು ಸರಿಯಾಗಿ ಜೋಡಿಸಲು ನೆರವಾಗಿದ್ದಾರೆ ಈ ವೇಳೆ ಅಲ್ಲಿದ್ದ ಕೆಲ ರಟ್ಟಿನ ಬಾಕ್ಸ್ ನಲ್ಲಿ ಹಣದ ಕಂತೆಗಳು ಪತ್ತೆಯಾಗಿವೆ ಇದರಿಂದ ಗಾಬರಿಗೊಂಡ ಸ್ಥಳೀಯರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ತಪಾಸಣೆ ನಡೆಸುವ ವೇಳೆ ರಟ್ಟಿನ ಬಾಕ್ಸ್ ಒಳಗೆ ಕಂತೆ ಕಂತೆ ನೋಟುಗಳು ಕಂಡುಬಂದಿವೆ.
ಬಳಿಕ ಹಣವನ್ನು ವಶಕ್ಕೆ ಪಡೆದ ಪೊಲೀಸರು ಲೆಕ್ಕ ಹಾಕುವ ವೇಳೆ ಅದರಲ್ಲಿ ಏಳು ಕೋಟಿಗೂ ಅಧಿಕ ಮೌಲ್ಯ ಇರುವುದಾಗಿ ಕಂಡುಬಂದಿದೆ.
ಅಪಘಾತದ ವೇಳೆ ವಾಹನ ಚಾಲಕ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚುನಾವಣೆ ಹೊತ್ತಿನಲ್ಲಿ ಹಣದ ವ್ಯವಹಾರಗಳು ಸಾಕಷ್ಟು ನಡೆಯುತ್ತಿದ್ದು ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನಗಳ ತಪಾಸಣೆ ನಡೆಸಲಾಗುತ್ತದೆ ಆದರೂ ಕೆಲವು ಕಡೆಗಳಲ್ಲಿ ಪೋಲೀಸರ ಕಣ್ ತಪ್ಪಿಸಿ ಹಣಗಳನ್ನು ಬೇರೆಡೆಗೆ ಸಾಗಿಸುವ ಕಾರ್ಯಗಳು ನಿರಂತರವಾಗಿ ನಡೆಯುತ್ತಿರುತ್ತವೆ.
ಇದನ್ನೂ ಓದಿ: ಹೈದರಾಬಾದ್ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ
#WATCH | Andhra Pradesh: Rs 7 Crores cash, kept in seven boxes, seized in East Godavari district.
A vehicle had overturned after being hit by a lorry at Anantapally in Nallajarla Mandal. Locals noticed that 7 cardboard boxes, containing cash, were being transferred in that… pic.twitter.com/KbQmb5M175
— ANI (@ANI) May 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.