Mother Nature: ಪ್ರಕೃತಿ ಮಾತೆಯೇ ನೀ ಏಕೆ ಮೌನವಾಗಿರುವೆ ?


Team Udayavani, May 11, 2024, 3:39 PM IST

14-uv-fusion

ಅದೊಂದು ಪುಟ್ಟ ಊರು. ಪೇಟೆಗಿಂತ ಸ್ವಲ್ಪ ದೂರದಲ್ಲಿ ಪ್ರಕೃತಿಯ ಮಡಿಲಿನಲ್ಲಿದ್ದ ಸಣ್ಣ ಪ್ರದೇಶ. ಸುತ್ತಲೂ ಕಾಡು ಗುಡ್ಡಗಳಿಂದ ಆವೃತವಾಗಿತ್ತು. ಮರಗಿಡಗಳಿಂದ ಆ ಊರು ಹಚ್ಚ ಹಸಿರಿನಿಂದ ಕೂಡಿರುತ್ತಿತು. ಮಳೆಗಾಲದಲ್ಲಂತೂ ಅಲ್ಲಿನ ಗದ್ದೆಯಲ್ಲಿ ನಾಟಿ ಮಾಡಿ ಪೈರುಗಳನ್ನು ನೋಡುವಾಗ ಹಸಿರು ಕಂಬಳಿಯನ್ನು ಆ ಭೂಮಿಯು ಹೊದ್ದಂತೆ ಕಾಣುತಿತ್ತು. ಮಳೆಗಾಲದಲ್ಲಿ ಆ ಊರು ಹಸುರಿನಿಂದ ಕೂಡಿರುವಾಗ ಅದು ನೋಡುವಾಗ ಒಂದು ರೀತಿಯ ಸ್ವರ್ಗವೇ ಕಂಡಂತೆ ಭಾಸವಾಗುತ್ತಿತ್ತು. ಸಂಜೆಯ ಹೊತ್ತಿನಲ್ಲಿ ತಣ್ಣನೆಯ ತಂಗಾಳಿ ಬೀಸುತ್ತಿತ್ತು.

ಆ ಗಾಳಿಯು ಯಾವ ಫ್ಯಾನಿನ ಗಾಳಿಗೂ ಕಡಿಮೆ ಇರಲಿಲ್ಲ ಮನೆಯ ಜಗಲಿಯಲ್ಲಿ ಕುಳಿತು ಆ ತಂಗಾಳಿ ಬೀಸುವಾಗ ಮನಸ್ಸಿಗೆ ಒಂದು ರೀತಿಯ ಮುದ ನೀಡುತಿತ್ತು. ಹಚ್ಚ ಹಸುರಿನಿಂದ ಕೂಡಿದ ಗದ್ದೆಯನ್ನು ನೋಡುತ್ತ ಓದಲು ಕುಳಿತಾಗ ತಂಪಾದ ತಂಗಾಳಿ ಬೀಸುತ್ತಿತ್ತು ಆ ತಂಗಾಳಿ ಬೀಸುವಾಗ ಆ ಪ್ರಕೃತಿ ಮಾತೆಯೇ ನಮ್ಮನ್ನು ಹರಸುವಂತಿತ್ತು.

ಕಾಲ ಕಳೆಯುತ್ತಾ ಹೋಯಿತು, ಕಾಲ ಕ್ಷಣಿಕ ಎನ್ನುವಂತೆ ಆ ಸಂತೋಷವು ಹೆಚ್ಚು ಸಮಯ ಉಳಿಯಲಿಲ್ಲ. ಮನುಷ್ಯರಿಗೆ ದುರಾಸೆ ಹೆಚ್ಚು, ಅದರಂತೆ ಆ ಊರಿನ ಕೆಲವು ಜನರು ಹಣದಾಸೆಗಾಗಿ ತಮಗೆ ಸೇರಿದ ಜಾಗದಲ್ಲಿರುವ ಮರಗಳನ್ನು ಕಡಿದು ಕಾಡು ನಾಶಗೊಳಿಸಿ ಆ ಜಾಗದಲ್ಲಿ ಕಲ್ಲಿನ ಗಣಿಗಾರಿಕೆಯನ್ನು ಮಾಡಲು ಪ್ರಾರಂಭಿಸಿದ್ದಾರೆ.

ದುರಾಸೆ ಎನ್ನುವುದು ಮನುಷ್ಯನ ಹುಟ್ಟುಗುಣ ಆಗಿರಬಹುದು. ಮಾನವ ಹಣದಾಸೆಗೆ ಯಾವ ಮಟ್ಟಕ್ಕೂ ಇಳಿಯಲು ಸಿದ್ಧನಿದ್ದಾನೆ. ಮಾನವ ಅತಿಯಾಸೆಗೆ ಪ್ರಕೃತಿ ಮಾತೆಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ಹಿಂದಿನ ಹಚ್ಚ ಹಸಿರಿನ ಪರಿಸರ ಪರಿಸರ ಈಗ ಇಲ್ಲ ಎಲ್ಲಾ ನಾಶವಾಗಿ ಸುಡುಗಾಡಿನ ಹಾಗೆ ಆಗಿದೆ ಮುಂಚೆ ಮುಸ್ಸಂಜೆ ಬೀಸುತ್ತಿದ್ದ ತಂಗಾಳಿ ಈಗ ರಾತ್ರಿಯಲ್ಲಿಯೂ ಬೀಸುತಿಲ್ಲ.

ಮಧ್ಯಾಹ್ನದ ಅತಿಯಾದ ಉರಿಬಿಸಿಲಿನಲ್ಲಿ ನಾವು ಮರಳುಗಾಡಿನಲ್ಲಿರುವಂತೆ ಭಾಸವಾಗುತ್ತದೆ. ಕಾಡುನಾಶದಿಂದ ಸರಿಯಾಗಿ ಮಾಳೆಯಾಗುತ್ತಿಲ್ಲ ಇದರಿಂದ ಬರಗಾಲದ ಪರಿಸ್ಥಿತಿ ಎದುರಾಗಿದೆ. ಇನ್ನು ಕೆಲವರು ಕಡಿಮೆ ಮಳೆಯಾಗುತ್ತಿರುವುದರಿಂದ ಬೇಸಾಯವನ್ನು ಕೈ ಬಿಟ್ಟಿದ್ದಾರೆ. ಇಷ್ಟಾದರೂ ಮಾನವನಿಗೆ ಸ್ವಲ್ಪವೂ ಪರಿಜ್ಞಾನವಿಲ್ಲ ಹಣದಾಸೆಗಾಗಿ ಬುದ್ಧಿ ಭ್ರಮಣೆ ಇಲ್ಲದವರಂತೆ ಕಾಡುನಾಶ ಮಾಡುತ್ತಿದ್ದಾರೆ. ಇಷ್ಟಾದರೂ ಪ್ರಕೃತಿ ಮಾತೆಯೂ ಮಾನವನ ದೌರ್ಜನ್ಯವನ್ನು ಸಹಿಸಿಕೊಂಡು ಮೂಕಳಗಿದ್ದಾಳೆ. ಪ್ರಕೃತಿ ಮಾತೆಯೆ ನನ್ನ ಬಳಿ ನಿನ್ನದೊಂದು ಪ್ರಶ್ನೆ ನೀ ಏಕೆ ಮೌನವಾಗಿರುವೆ?

-ಕೀರ್ತನ್‌ ಎಸ್‌. ಮಡಿವಾಳ,

ಕಾರ್ಕಳ

ಟಾಪ್ ನ್ಯೂಸ್

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ: ತಾಯಿಯನ್ನು ನೋಡಿ ಕಣ್ಣೀರಿಟ್ಟ ದರ್ಶನ್

ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ

Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-uv-fusion

Education: ಅಸಮತೋಲನೆ ನಿವಾರಣೆಗೆ ಸಹ ಶಿಕ್ಷಣ ಸರಿಯಾದ ದಾರಿ

13-tn-sitharama

T. N. Seetharam: ಧಾರಾವಾಹಿಗಳಿಗೆ ಹೊಸ ಭಾಷ್ಯ ನೀಡಿದ ನಿರ್ದೇಶಕ ಟಿ.ಎನ್‌. ಸೀತಾರಾಮ

11-uv-fusion

Rajeev Taranath: ಸರೋದ್‌ ಸ್ವರ ಮಾಂತ್ರಿಕನ ಸ್ವರ್ಗಾರೋಹಣ

10-uv-fusion

UV Fusion: ನೈಸರ್ಗಿಕ ಕಾಡು ಪುನರುತ್ಥಾನಕ್ಕೆ ಕೊಡುಗೆ ನೀಡುವ ಉಪ್ಪಳಿಗೆ

11-uv-fusion

UV Fusion: ಸಿನೆಮಾ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

basavaraj rayareddy

Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್

rohit sharma

Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

Trekking tips: ಟ್ರೆಕ್ಕಿಂಗ್‌ ಹೋಗ್ತಾ ಇದ್ದೀರಾ?: ನಾವ್‌ ಹೇಳ್ಳೋದ್‌ ಸ್ವಲ್ಪ ಕೇಳ್ರಿ…

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

ಮುದ್ರಣ ನಮ್ಮ ರಕ್ತದಲ್ಲೇಇದೆ, ಅದೇ ನಮ್ಮ ಉಸಿರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.