Arecanut: ವಿಶಿಷ್ಟ ಸ್ವಾದದೊಂದಿಗೆ ಜನರ ಮನ ಗೆದ್ದ ಮಲೆನಾಡ ತೀರ್ಥಹಳ್ಳಿ ಅಡಕೆ!

ಸಾಂಪ್ರದಾಯಿಕ ಮಾದರಿಯಲ್ಲೇ ಅಡಕೆಗೆ ಬಣ್ಣ ಕಟ್ಟುತ್ತಾರೆ

Team Udayavani, May 11, 2024, 5:12 PM IST

ವಿಶಿಷ್ಟ ಸ್ವಾದದೊಂದಿಗೆ ಜನರ ಮನ ಗೆದ್ದ ಮಲೆನಾಡ ತೀರ್ಥಹಳ್ಳಿ ಅಡಕೆ!

ಉದಯವಾಣಿ ಸಮಾಚಾರ
ಶಿವಮೊಗ್ಗ: ಒಂದೊಂದು ತಿನಿಸು, ತಿಂಡಿಗಳಿಗೆ ಒಂದೊಂದು ಜಿಲ್ಲೆ, ಊರು ಫೇಮಸ್‌ ಇರುತ್ತದೆ. ಅದೇ ರೀತಿ ಈಗ ಅಡಕೆ ಕೂಡ ಯಾವ ಊರಿನದ್ದು ಫೇಮಸ್‌ ಎಂದು ಸಮೀಕ್ಷೆಯಲ್ಲಿ ಗೊತ್ತಾಗಿದೆ. ತೀರ್ಥಹಳ್ಳಿ ಅಡಕೆ ರಾಜ್ಯದ ಇತರೆ ಭಾಗದ ಅಡಕೆಗಳನ್ನು ಪಕ್ಕಕ್ಕೆ ತಳ್ಳಿ ರುಚಿ, ಸ್ವಾದದಿಂದ ಜನರ ಮನಗೆದ್ದಿದೆ.

ಮಲೆನಾಡು, ಅರೆ ಮಲೆನಾಡು ಭಾಗದ ಜಿಲ್ಲೆಗಳಿಗೆ ಸೀಮಿತವಾಗಿದ್ದ ಅಡಕೆ ಈಗ ರಾಜ್ಯಾದ್ಯಂತ ವ್ಯಾಪಿಸುತ್ತಿದೆ. ಹೊಸ
ಪ್ರದೇಶದ ಅಡಕೆಗಳು ಮಾರುಕಟ್ಟೆಗೆ ಬರುತ್ತಿವೆ. ಆದರೆ ಗುಟ್ಕಾ ಕಂಪನಿಗಳ ಆದಿಯಾಗಿ ಎಲೆ ಅಡಕೆ (ಕವಳ) ತಿನ್ನುವವರಿಗೆ
ತೀರ್ಥಹಳ್ಳಿ ಅಡಕೆ ಎಂದರೆ ಬಲು ಇಷ್ಟ. ಇದನ್ನು ಸಮೀಕ್ಷೆ ಕೂಡ ಸಾಬೀತುಪಡಿಸಿದೆ.

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿ ಅಡಕೆ ಸಂಶೋಧನಾ ಕೇಂದ್ರ ಈಚೆಗೆ ನಡೆಸಿದ ಸಮೀಕ್ಷೆಯಲ್ಲಿ ಯಾವ ಪ್ರದೇಶದ ಅಡಕೆ ರುಚಿ, ಸ್ವಾದಿಷ್ಟ ಹೊಂದಿದೆ ಎಂಬ ಅಂಶ ಬಹಿರಂಗಗೊಳಿಸಿದೆ.

ಸಮೀಕ್ಷೆ ನಡೆದಿದ್ದು ಹೇಗೆ?: ಈಚೆಗೆ ಅಡಕೆ ವ್ಯಾಪಾರಿಗಳು, ಎಲೆ ಅಡಕೆ ತಿನ್ನುವವರು, ವಿಜ್ಞಾನಿಗಳು, ರೈತರು ಸೇರಿ ವಿವಿಧ ವರ್ಗಕ್ಕೆ ಸೇರಿದ 60 ಜನರಿಗೆ ಎಲೆ ಅಡಕೆ ತಿನ್ನಿಸಿ ಅವರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ತೀರ್ಥಹಳ್ಳಿ ಸೇರಿ ಅಡಕೆ ಬೆಳೆಯುವ ಬೇರೆ ತಾಲೂಕು, ಮಲೆನಾಡು, ಕರಾವಳಿ, ಬಯಲುಸೀಮೆಯ ಬೇರೆ ಜಿಲ್ಲೆಗಳ ಅಡಕೆಯನ್ನು ಇಡಲಾಗಿತ್ತು. ತೀರ್ಥಹಳ್ಳಿ,
ಶೃಂಗೇರಿ, ತರೀಕೆರೆ, ಹೊಸನಗರ, ಸಾಗರ, ಶಿವಮೊಗ್ಗ, ಚನ್ನಗಿರಿ ಸೇರಿದಂತೆ ಬೇರೆ ಜಿಲ್ಲೆಯ ರೈತರು ಸೇರಿದ್ದರು. ಅಲ್ಲದೆ ಕೃಷಿ
ವಿವಿಗೆ ಸಂಬಂಧಿಸಿದ ವಿವಿಧ ಜಿಲ್ಲೆಗಳ ವಿಜ್ಞಾನಿಗಳು ಸಹ ಇದ್ದರು. ಅವರೆಲ್ಲರೂ ಎಲೆ-ಅಡಕೆ ಸವಿದು ಅಭಿಪ್ರಾಯ
ವ್ಯಕ್ತಪಡಿಸಿದ್ದಾರೆ.

ಎಲ್ಲರಿಗೂ ಪ್ರಶ್ನೋತ್ತರ ಸಹ ಇಡಲಾಗಿತ್ತು. ಅದರಲ್ಲಿ ಅಡಕೆ ನೋಡಲು ಹೇಗಿದೆ, ಕಡಿಯುವಾಗ ಯಾವ ಸಂವೇದನೆ ನೀಡುತ್ತದೆ, ತಿನ್ನುವಾಗ ಯಾವ ರೀತಿ ಸಂವೇದನೆ ಸಿಗುತ್ತದೆ ಎಂಬ ಪ್ರಶ್ನೆಗಳನ್ನು ನೀಡಲಾಗಿತ್ತು. ಇದರಲ್ಲಿ ತೀರ್ಥಹಳ್ಳಿ ಅಡಕೆಯೇ ಬೆಸ್ಟ್‌ ಎಂಬ ಅಭಿಪ್ರಾಯ ಎಲ್ಲರಿಂದಲೂ ಬಂದಿದೆ.

ಬೇಡಿಕೆಗೆ ಕಾರಣ ಏನು?: ತೀರ್ಥಹಳ್ಳಿ ಭಾಗದ ರೈತರು ಯಾವ ರೀತಿ ಗ್ರೇಡಿಂಗ್‌ ಮಾಡುತ್ತಾರೆ ಎಂಬುದನ್ನು ಸಮೀಕ್ಷೆಯಲ್ಲಿ
ಪಾಲ್ಗೊಂಡಿದ್ದ ರೈತರು ಮಾಹಿತಿ ಪಡೆದಿದ್ದಾರೆ. ಗ್ರೇಡಿಂಗ್‌ ಮಾಡುವಾಗ ರಾಶಿ, ಇಡಿ, ಹಸ, ಗೊರಬಲು, ನುಲಿ ಎಂದು
ವರ್ಗೀಕರಿಸಲಾಗುತ್ತದೆ. ಕೆಂಪಡಕೆಗೆ ಈ ಅಡಕೆ ತುಂಬಾ ಸೂಕ್ತವಾಗಿರುತ್ತದೆ. ವ್ಯಾಪಾರಸ್ಥರು ಹೆಚ್ಚು ಧಾರಣೆ ಕೊಡುತ್ತಾರೆ
ಎಂಬುದು ತೀರ್ಥಹಳ್ಳಿ ರೈತರ ಅಭಿಪ್ರಾಯ.

ಕೆಂಪಡಕೆ ಮಾಡಲು ವಿಶಿಷ್ಟ ತಳಿ 
ವಿಶಿಷ್ಟವಾದ ಕೆಂಪಡಕೆ ಮಾಡಲು ತೀರ್ಥಹಳ್ಳಿ ಭಾಗದ ಅಡಕೆ ಹೇಳಿ ಮಾಡಿಸಿದಂತಿದೆ. ತೀರ್ಥಹಳ್ಳಿ ರೈತರು ಸಾಂಪ್ರದಾಯಿಕ
ಮಾದರಿಯಲ್ಲೇ ಅಡಕೆಗೆ ಬಣ್ಣ ಕಟ್ಟುತ್ತಾರೆ. ಇದು ಕೂಡ ಇಲ್ಲಿನ ವೈಶಿಷ್ಟ್ಯ

ಬೇರೆಲ್ಲೂ ಸಿಗುವುದಿಲ್ಲ
ತೀರ್ಥಹಳ್ಳಿ ಭಾಗದ ಅಡಕೆ ಸಸಿಯನ್ನು ಬೇರೆ ಜಿಲ್ಲೆಯಲ್ಲಿ ಬೆಳೆದರೆ ಆ ರುಚಿ, ಗುಣಮಟ್ಟ ಸಿಗುವುದಿಲ್ಲ ಎಂಬುದು ಬಹುತೇಕ ರೈತರ ಅಭಿಪ್ರಾಯ. ಪರಿಸರ, ತಳಿ, ಮಣ್ಣು, ವಾತಾವರಣದಿಂದ ತೀರ್ಥಹಳ್ಳಿಯಲ್ಲೇ ಬೆಳೆದ ಅಡಕೆಗೆ ವಿಶಿಷ್ಟತೆ ಸಿಕ್ಕಿದೆ ಎನ್ನುತ್ತಾರೆ ರೈತರು.

ತೀರ್ಥಹಳ್ಳಿ ಅಡಕೆ ಗಾತ್ರದಲ್ಲಿ ಚಿಕ್ಕದು. ಅದರಲ್ಲಿ ಪಿಟನ್‌ ರುಚಿ ತುಂಬಾ ಚೆನ್ನಾಗಿರುತ್ತದೆ. ತೊಟ್ಟಿನ ಹಿಂಭಾಗದ ರುಚಿ ಯಾವಾಗಲೂ ಚೆನ್ನಾಗಿರುತ್ತದೆ. ಪುಡಿ ಬೆಸ್ಟ್‌ ಬರುತ್ತದೆ. ಬೇಯಿಸುವುದರಿಂದ ಅದಕ್ಕೆ ಆ ರುಚಿ ಬರುತ್ತದೆ. ಚನ್ನಗಿರಿ, ತರೀಕೆರೆ ಭಾಗದ ಅಡಕೆ ಗಾತ್ರದಲ್ಲಿ ಮಧ್ಯಮ ಇದ್ದರೂ ಪಾನ್‌ ಮಸಾಲಾಗೆ ಹೇಳಿ ಮಾಡಿಸಿದಂತಿದೆ.
●ಶಂಕರಪ್ಪ, ಅಧ್ಯಕ್ಷ, ಅಡಕೆ ವ್ಯಾಪಾರಿಗಳ ಸಂಘ

ವೀಳ್ಯೆದೆಲೆ ಎಲ್ಲ ಕಡೆ ಸಿಗುತ್ತದೆ. ಆದರೆ ಮೈಸೂರು ಎಲೆಗೆ ಹೆಚ್ಚು ಬೇಡಿಕೆ ಇದೆ. ಪೇಡಾ ಎಲ್ಲ ಕಡೆ ಸಿಗುತ್ತದೆ. ಆದರೆ ಧಾರವಾಡ ಪೇಡೆ ರುಚಿ ಬೇರೆಲ್ಲೂ ಸಿಗಲ್ಲ. ಅದೇ ರೀತಿ ತೀರ್ಥಹಳ್ಳಿ ಅಡಕೆ ವಿಶಿಷ್ಟವಾದದ್ದು ಎಂದು ಹೇಳುವ ಪ್ರಯತ್ನ ಇದಾಗಿದೆ. 60ಕ್ಕೂ ಅಧಿ ಕ ಮಂದಿ ಈ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲರೂ ತೀರ್ಥಹಳ್ಳಿ ಅಡಕೆಯನ್ನೇ ಬೆಸ್ಟ್‌ ಅಂದಿದ್ದಾರೆ.
●ಡಾ|ನಾಗರಾಜ್‌ ಅಡಿವಪ್ಪರ್‌,
ಮುಖ್ಯಸ್ಥರು, ಅಡಕೆ ಸಂಶೋಧನಾ ಕೇಂದ್ರ

■ ಶರತ್‌ ಭದ್ರಾವತಿ

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.