ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಸಂಬಂಧಗಳು ಮರಿದು ಬೀಳುತ್ತಿರುವುದು ದುರದೃಷ್ಟಕರ

Team Udayavani, May 11, 2024, 5:29 PM IST

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

■ ಉದಯವಾಣಿ ಸಮಾಚಾರ
ಬ್ಯಾಡಗಿ: ಮದುವೆ ಎಂಬುದು ಪುರುಷ ಮತ್ತು ಮಹಿಳೆಯ ನಡುವಿನ ಸಾವಿರ ವರ್ಷಗಳ ಸಂಬಂಧ. ಆದರೆ ಇತ್ತೀಚಿನ
ದಿನಗಳಲ್ಲಿ ವಿಚ್ಛೇದನದ ಕಾರಣ ಕೇಳಿದರೆ ಇಂತಹದ್ದೊಂದು ಸೈದ್ಧಾಂತಿಕ ಪರಿಕಲ್ಪನೆ ತನ್ನ ಮೂಲ ಅರ್ಥವನ್ನು ಕಳೆದುಕೊಳ್ಳುತ್ತಿದೆ ಎಂದು ಗೌರೀಮಠದ ಶ್ರೀಗಳು ಖೇದ ವ್ಯಕ್ತಪಡಿಸಿದರು.

ಬಸವ ಜಯಂತಿ ಅಂಗವಾಗಿ ಮೋಟೆಬೆನ್ನೂರಿನಲ್ಲಿ ಅಯೋಜಿಸಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಮದುವೆ ಎನ್ನುವ ಬಂಧವು ಪ್ರೀತಿ, ಸಹನೆ, ಬೆಂಬಲ, ಸರಸ, ಸಲ್ಲಾಪ ಮತ್ತು ಸಾಮರಸ್ಯದೊಂದಿಗೆ
ಬಲವಾಗಿರಬೇಕು. ಹೀಗಾಗಿಯೇ ಮದುವೆ ಎಂಬುದು ಸ್ವರ್ಗದಲ್ಲೇ ನಿರ್ಧಾರವಾಗುತ್ತದೆ ಎಂಬ ಮಾತುಗಳು ವಿಶ್ವದೆಲ್ಲೆಡೆ
ಪ್ರಚಲಿತದಲ್ಲಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಮದುವೆ ಮಂಟಪದಿಂದ ಮನೆಯನ್ನು ತಲುಪುವಷ್ಟರಲ್ಲಿ ಸಂಬಂಧಗಳು ಮರಿದು ಬೀಳುತ್ತಿರುವುದು ದುರದೃಷ್ಟಕರ ಎಂದರು.

ಕಠಿಣ ಸತ್ಯ ಹಿಡಿದಿಟ್ಟುಕೊಳ್ಳಿ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಯಶಸ್ವಿ ದಾಂಪತ್ಯಕ್ಕೆ ಯಾವುದೇ ರಹಸ್ಯವಿಲ್ಲ. ಇಬ್ಬರ ನಡುವಿನ ಪ್ರೀತಿಯಿಂದ ದಾಂಪತ್ಯ ಸಂಬಂಧಗಳು ಗಟ್ಟಿಯಾಗಿರುತ್ತದೆ. ಅದಕ್ಕೂ ಮುನ್ನ ಕೆಲವು ತಪ್ಪುಗ್ರಹಿಕೆಗಳಿಗೆ ಇಬ್ಬರೂ ಸೇರಿ ಪರಿಹಾರ ಕಂಡುಕೊಳ್ಳಬೇಕು. ಅದಾಗ್ಯೂ ಕೆಲ ಕಠಿಣ ಸತ್ಯಗಳನ್ನು ಹಿಡಿದಿಟ್ಟುಕೊಂಡಲ್ಲಿ ನಿಮ್ಮ ದಾಂಪತ್ಯ ಜೀವನ ಸುಗಮವಾಗಿ ಸಾಗಲಿದೆ. ಮಗುವನ್ನು ಹೊಂದುವುದು ಒತ್ತಡದ ವಿಷಯವಲ್ಲ. ಮಕ್ಕಳನ್ನು ಹೊಂದುವುದರಿಂದ ದಂಪತಿಗಳ ಜೀವನ ಬದಲಾವಣೆಯಾಗು‌ವುದು ಖಚಿತ ಎಂದರು.

ಮದುವೆ ಕಷ್ಟಕರವಲ್ಲ: ನಿವೃತ್ತ ಇಂಜಿನಿಯರ್‌ ಸಿ.ಆರ್‌.ಬಳ್ಳಾರಿ ಮಾತನಾಡಿ, ಮದುವೆಯು ಕಷ್ಟಕರವೆಂದು ಯಾರೊಬ್ಬರು ಸಹ ಯೋಚಿಸ ‌ಬಾರದು. ಮದುವೆಗಾಗಿ ಬೇರೊಬ್ಬರ ಬಳಿ ಸಾಲವನ್ನು ಮಾಡಿ ಅದರ ಹೊರೆಯನ್ನು ಕುಟುಂಬಸ್ಥರ ಮೇಲೆ ಹೇರುವುದು ಸರಿ ಯಾದ ಕ್ರಮವಲ್ಲ. ವಿವಿಧೆಡೆ ನಡೆಯುವಂಥ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಡುವಂತೆ ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ವಿವಿಧ ಧರ್ಮಗಳ ಒಟ್ಟು 33
ಜೋಡಿಗಳು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ವೈವಾಹಿಕ ಜೀನವಕ್ಕೆ ಕಾಲಿರಿಸಿದರು.

ನಾಗರಾಜ ಆನ್ವೇರಿ,ವಿ.ಸಿ. ಹಾವೇರಿಮಠ, ಪುಟ್ಟನಗೌಡ್ರ ಪಾಟೀಲ, ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ, ನ್ಯಾಯವಾದಿಗಳಾದ ಬಸವರಾಜ ಬಳ್ಳಾರಿ, ಮೃತ್ಯುಂಜಯ ಲಕ್ಕಣ್ಣನವರ, ಮುಖಂಡರಾದ ಶಿವಕುಮಾರ ಪಾಟೀಲ, ಮಂಜುನಾಥ ಬೆನಕನಕೊಂಡ, ವಿಜಯಭರತ ಬಳ್ಳಾರಿ, ನಿಂಗಪ್ಪ ಅಂಗಡಿ ಇನ್ನಿತರರಿದ್ದರು.

ಟಾಪ್ ನ್ಯೂಸ್

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

1-saa

Haveri; ಕರ್ಜಗಿ ಕಾರಹುಣ್ಣಿಮೆಯಲ್ಲಿ ಬಂಡಿ ಹರಿದು ವ್ಯಕ್ತಿ ದುರ್ಮರಣ

ರಾಣಿಬೆನ್ನೂರ: ಭಾರತ ವಿಶ್ವಕ್ಕೆ ಕೊಟ್ಟ ದೊಡ್ಡ ಪರಂಪರೆ ಯೋಗ-ಪ್ರಕಾಶಾನಂದ ಮಹಾರಾಜ

ರಾಣಿಬೆನ್ನೂರ: ಭಾರತ ವಿಶ್ವಕ್ಕೆ ಕೊಟ್ಟ ದೊಡ್ಡ ಪರಂಪರೆ ಯೋಗ-ಪ್ರಕಾಶಾನಂದ ಮಹಾರಾಜ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

crime (2)

Haveri ; ಮಚ್ಚಿನಿಂದ ಹಲ್ಲೆ ನಡೆಸಿ ಯುವಕನ ಕೊಲೆ ಯತ್ನ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-dsdsadasdas

Olympics ಆ್ಯತ್ಲೀಟ್ಸ್‌  ಸಿದ್ಧ:  ಪ್ರಧಾನಿ ಮೋದಿ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

CID ಸೂರಜ್‌ಗೆ ಮುಂದುವರಿದ ಸಿಐಡಿ ಪ್ರಶ್ನೆಗಳ ಸುರಿಮಳೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.