Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

ಕಡೇಮನುಗನಹಳ್ಳಿಯಲ್ಲಿ ಮೂರು ದಿನಗಳಿಂದ ಕಲ್ಮಶಯುಕ್ತ ನೀರು ಪೂರೈಕೆ

Team Udayavani, May 11, 2024, 6:27 PM IST

1-wqewqewq

ಹುಣಸೂರು: ತಾಲೂಕಿನ ಕಡೇಮನುಗನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಬೇಧಿ ಕಾಣಿಸಿಕೊಂಡು ಅಸ್ವಸ್ಥಗೊಂಡು 25 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ.

ಕಳೆದ ಮೂರ‍್ನಾಲ್ಕು ದಿನಗಳ ಹಿಂದೆ ಕಡೆಮನುಗನಹಳ್ಳಿ ಗ್ರಾ.ಪಂ.ವತಿಯಿಂದ ಮನೆಗಳಿಗೆ ಪೂರೈಸುವ ನೀರಿನೊಂದಿಗೆ ಜಲ ಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿ ವೇಳೆ ಪೈಪ್ ಒಡೆದು ಕಲುಷಿತ ನೀರು ಸೇರಿಕೊಂಡಿದ್ದು, ಆ ನೀರನ್ನೇ ಗ್ರಾಮಸ್ಥರು ಅಡುಗೆಗೆ ಹಾಗೂ ಕುಡಿಯಲು ಉಪಯೋಗಿಸಿದ ಪರಿಣಾಮ ಗ್ರಾಮದ ಅನೇಕ ಮಂದಿ ಅಸ್ವಸ್ಥಗೊಂಡಿದ್ದಾರೆ.

ಮೊದಲ ದಿನವೇ 50 ಕ್ಕೂ ಹೆಚ್ಚು ಮಂದಿಗೆ ಬೇಧಿ ಕಾಣಿಸಿಕೊಂಡು ಹುಣಸೂರು,ಮೈಸೂರು, ಪಿರಿಯಾಪಟ್ಟಣ ಹಾಗೂ ಹನಗೋಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರಾದರೂ ದಿನೇ ದಿನೇ ಹಲವರಲ್ಲಿ ಬೇಧಿ ಕಾಣಿಸಿಕೊಂಡು ಸುಸ್ತು, ಅಸ್ವಸ್ಥಗೊಳ್ಳುತ್ತಲೇ ಇದ್ದಾರೆ. ಈ ಪೈಕಿ ತೀವ್ರ ನಿತ್ರಾಣಗೊಂಡಿದ್ದ ಇಬ್ಬರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹನಗೋಡಿನ ಸರಕಾರಿ ಆಸ್ಪತ್ರೆಯಲ್ಲಿ ಭಾರತಿ, ಅಮಾಸೇಗೌಡ, ಶಿವಣ್ಣ, ಆನಂದ, ವಿನು, ಸಪ್ರೀತ್, ಬಲರಾಮ, ಶೀಲಾ, ಶಿವಣ್ಣ, ಶಿವು, ಪಾರ್ವತಮ್ಮ, ಪ್ರಶಾಂತ್, ಭವ್ಯ, ವಸಂತ, ಪ್ರಭಾವತಿ, ಶಾರದಮ್ಮ, ಕೃಷ್ಣೇಗೌಡ, ಪುಷ್ಪಲತಾ, ಮಂಗಳಮ್ಮ, ಪದ್ಮಮ್ಮ, ರಾಜೇಗೌಡ, ನವೀನ, ಕುಮಾರ್, ಶರತ್, ಪ್ರೀತಮ್, ಶಶಿಕುಮಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರಿಗೆ ಗ್ರಾಮದಲ್ಲೇ ವೈದ್ಯರ ತಂಡ ಚಿಕಿತ್ಸೆ ನಿಡಿ ನಿಗಾ ಇರಿಸಿದ್ದಾರೆ.
ಕೆಲವರು ಮನೆಗೆ ತೆರಳಿದ್ದಾರೆ. ಈ ಪೈಕಿ ಶಿವಣ್ಣ, ಭಾರತಿಯವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಹನಗೋಡು ಆಸ್ಪತ್ರೆ ವೈದ್ಯಾಧಿಕಾರಿ ಡಾ ಜೋಗೇಂದ್ರನಾಥ್ ಚಿಕಿತ್ಸೆ ನೀಡುತ್ತಿದ್ದಾರೆ.

ಹುಣಸೂರು ಆಸ್ಪತ್ರೆಯಲ್ಲಿ ವಸಂತ, ಶೀಲಾ, ಜಯಮ್ಮ, ಪಿರಿಯಾಪಟ್ಟಣ ಅಸ್ಪತ್ರೆಯಲ್ಲಿ ನೀರು ಗಂಟಿ ಉಮೇಶ್ ಚಿಕಿತ್ಸೆ ಪಡೆದರೆ, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಮಾ, ಪ್ರಭಾವತಿ ದಾಖಲಾಗಿದ್ದಾರೆ. ಘಟನೆಯಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ.

ಗ್ರಾಮದಲ್ಲಿ ದೊಡ್ಡಹೆಜ್ಜೂರು, ನೇರಳಕುಪ್ಪೆ ಆಸ್ಪತ್ರೆ ವೈದ್ಯರಾದ ಡಾ.ಸುಧಾಕರ್,ಡಾ.ಸುನಂದ, ಡಾ.ಹರ್ಷರವರು, ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರು ಸೇರಿದಂತೆ ಆಶಾಕಾರ್ಯಕರ್ತರು, ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲವೆಂದು ಟಿಎಚ್‌ಒ ಡಾ.ಕೀರ್ತಿಕುಮಾರ್ ತಿಳಿಸಿದ್ದಾರೆ.

ಟ್ಯಾಂಕರ್ ಮೂಲಕ ನೀರು
ಪೈಪ್ ಒಡೆದಿರುವ ಸ್ಥಳವನ್ನು ಪತ್ತೆ ಹಚ್ಚಿ ಸರಿಪಡಿಸಲಾಗಿದ್ದು, ಟ್ಯಾಂಕನ್ನು ಸ್ವಚ್ಚಗೊಳಿಸಲಾಗಿದೆ. ಮೂರು ದಿನಗಳ ತನಕ ಉಪಯೋಗಿಸಲು ಸಾದ್ಯವಾಗದ ಕಾರಣ ಗ್ರಾಮಕ್ಕೆ ಟ್ಯಾಂಕರ್ ಮೂಲಕವೇ ನೀರು ಪೂರೈಸಲಾಗುತ್ತಿದೆ. ಅಲ್ಲದೆ ನೀರನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸ್ಥಳದಲ್ಲೇ ಮೊಕ್ಕಾ ಹೂಡಿರುವ ತಾ.ಪಂ.ಇಒ ಶಿವಕುಮಾರ್ ತಿಳಿಸಿದರು. ಪಿಡಿಒ ಷಡಕ್ಷರಿ ಸ್ಥಳದಲ್ಲೇ ಇದ್ದಾರೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.