ರಾಜ್ಯದಲ್ಲಿ ಮೇ15ರ ವರೆಗೆ ಮುಂದುವರಿಯಲಿದೆ ಮಳೆ; ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್
ರವಿವಾರವೂ ಭಾರೀ ಗಾಳಿ, ಮಳೆ ಸಾಧ್ಯತೆ
Team Udayavani, May 12, 2024, 7:15 AM IST
ಬೆಂಗಳೂರು: ರಾಜ್ಯದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ರವಿವಾರವೂ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಲಕ್ಷಣ ಗೋಚರಿಸಿದ್ದು, ಮೇ 15ರ ವರೆಗೆ ಮಳೆ ಮುಂದುವರಿಯಲಿದೆ.
ರವಿವಾರ ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 ಕಿ.ಮೀ) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಕರ್ನಾಟಕದ ಒಳನಾಡಿನಲ್ಲಿ 1.5 ಕಿ.ಮೀ. ಎತ್ತರದಲ್ಲಿ ಟ್ರಫ್ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮೇ 15ರ ವರೆಗೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಹಗುರದಿಂದ ಸಾಧರಣವಾಗಿ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಮುಂದಿನ 5 ದಿನಗಳ ವರೆಗೆ ಗುಡುಗು, ಮಿಂಚು, ಬಿರುಗಾಳಿ ಸಮೇತವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್
ಮೇ 12ರಂದು ಶಿವಮೊಗ್ಗ, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಿಗೆ ಹಾಗೂ ಮೇ 13ರಂದು ಉಡುಪಿ, ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಮಳೆ ಸುರಿಯುವ ಪ್ರದೇಶಗಳಿಗೆ ಹಳದಿ ಅಲರ್ಟ್ ಘೋಷಿಸಲಾಗುತ್ತದೆ.
ಎಲ್ಲೆಲ್ಲಿ ಎಷ್ಟೆಷ್ಟು ಮಳೆ?
ಶನಿವಾರ ಚಾಮರಾಜನಗರ (ಹರದನಹಳ್ಳಿ) 16.5, ಕೊಡಗು(ಗೋಣಿಕೊಪ್ಪ) 14.5, ಶಿವಮೊಗ್ಗ (ಆಗುಂಬೆ) 0.5, ಚಿಕ್ಕಮಗಳೂರು(ಮುಡಿಗೇರಿ) 41.5, ಮಂಡ್ಯ ಕೆವಿಕೆ 0.5, ಬೆಳಗಾವಿ ನಗರ 38.6, ಬೆಳಗಾವಿ ಎಪಿ 11.0, ಗದಗ 2.6 ಮಿ.ಮೀ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.