ನಿಮ್ಮ ಮತ ಮೋದಿಗಲ್ಲ , ಶಾಗೆ: ಅರವಿಂದ ಕೇಜ್ರಿವಾಲ್‌ ಬಾಂಬ್‌

ಸೆಪ್ಟಂಬರ್‌ಗೆ ಮೋದಿಗೆ 75; ಅವರ ನಿವೃತ್ತಿ ಬಳಿಕ ಎನ್‌ಡಿಎ ಪ್ರಧಾನಿ ಅಭ್ಯರ್ಥಿ ಯಾರು: ಅರವಿಂದ ಕೇಜ್ರಿವಾಲ್‌ ಪ್ರಶ್ನೆ

Team Udayavani, May 12, 2024, 6:15 AM IST

ನಿಮ್ಮ ಮತ ಮೋದಿಗಲ್ಲ , ಶಾಗೆ: ಅರವಿಂದ ಕೇಜ್ರಿವಾಲ್‌ ಬಾಂಬ್‌

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಗುಡುಗಿದ್ದಾರೆ.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಕೇಜ್ರಿವಾಲ್‌, “ನೀವು ಈ ಬಾರಿ ಹಾಕುವ ಮತವು ಮೋದಿಗಲ್ಲ, ಅಮಿತ್‌ ಶಾಗೆ’ ಎಂದು ಹೇಳುವ ಮೂಲಕ ಹೊಸ ಬಾಂಬ್‌ ಸಿಡಿಸಿದ್ದಾರೆ.

ಮಧ್ಯಾಂತರ ಜಾಮೀನು ಪಡೆದು ಹೊರಬಂದ ಮಾರನೇ ದಿನವೇ, ಶನಿವಾರ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ ಕೇಜ್ರಿವಾಲ್‌, “ಬಿಜೆಪಿಯವರು ಪದೇಪದೆ ಐಎನ್‌ಡಿಐಎ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕೇಳುತ್ತಿರುತ್ತಾರೆ. ಆದರೆ ಇಂದು ನಾನು ಮೋದಿ ಬಳಿಕ ಬಿಜೆಪಿಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರು ಎಂದು ಕೇಳಲು ಇಚ್ಛಿಸುತ್ತೇನೆ. ಮೋದಿ ಅವರು ಇದೇ ಸೆಪ್ಟಂಬರ್‌ನಲ್ಲಿ 75ನೇ ವರ್ಷಕ್ಕೆ ಕಾಲಿಡಲಿದ್ದಾರೆ.

75 ವರ್ಷ ವಯಸ್ಸಾದವರು ರಾಜಕೀಯದಿಂದ ನಿವೃತ್ತಿಯಾಗಬೇಕು ಎಂಬ ನಿಯಮವನ್ನು 2014ರಲ್ಲಿ ಮೋದಿಯವರೇ ತಂದಿದ್ದಾರೆ. ಈಗಾಗಲೇ ಈ ನಿಯಮದಲ್ಲಿ ಎಲ್‌.ಕೆ. ಆಡ್ವಾಣಿ, ಮುರಳಿ ಮನೋಹರ ಜೋಷಿ, ಸುಮಿತ್ರಾ ಮಹಾಜನ್‌ಅವರಂಥ ಅನೇಕ ನಾಯಕರಿಗೆ ನಿವೃತ್ತಿ ನೀಡಿ ಕಳುಹಿಸಲಾಗಿದೆ ಎಂದಿದ್ದಾರೆ.ಮೋದಿ ಅವರೇ ಮಾಡಿರುವ ನಿಯಮದಂತೆ ಮುಂದಿನ ವರ್ಷ ಅವರು ನಿವೃತ್ತರಾಗಲಿದ್ದಾರೆ. ಬಳಿಕ ಯಾರು ಪ್ರಧಾನಿ ಆಗಲಿದ್ದಾರೆ? ಹೀಗಾಗಿ ಅಮಿತ್‌ ಶಾ ಅವರನ್ನು ಪ್ರಧಾನಿ ಸ್ಥಾನಕ್ಕೆ ಏರಿಸಲೆಂದು ಮೋದಿ ನಿಮ್ಮ ಮತಗಳನ್ನು ಯಾಚಿಸುತ್ತಿದ್ದಾರೆ. ಆದರೆ, “ಮೋದಿ ಗ್ಯಾರಂಟಿ’ಗಳನ್ನು ಅಮಿತ್‌ ಶಾ ಪೂರ್ಣಗೊಳಿಸಬಲ್ಲರೇ’ ಎಂದು ಕೇಜ್ರಿವಾಲ್‌ ಪ್ರಶ್ನಿಸಿದರು.

“ಒಂದು ದೇಶ, ಒಂದು ನಾಯಕ’ ಎಂಬ ಧ್ಯೇಯದೊಂದಿಗೆ ಬಿಜೆಪಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಪಕ್ಷವನ್ನು ಮುಗಿಸಲು ಸಂಚು ರೂಪಿಸಿದೆ. ಭವಿಷ್ಯದಲ್ಲಿ ವಿವಿಧ ವಿಪಕ್ಷಗಳ ಎಲ್ಲ ನಾಯಕರನ್ನೂ ಜೈಲಿಗಟ್ಟುವ ಯೋಜನೆ ಅವರದ್ದು ಎಂದೂ ಕೇಜ್ರಿ ಆರೋಪಿಸಿದ್ದಾರೆ.

ಕೇಜ್ರಿವಾಲ್‌ ಆ್ಯಂಡ್‌ ಕಂಪೆನಿ ಮತ್ತು ಐಎನ್‌ಡಿಐಎ ಒಕ್ಕೂಟಕ್ಕೆ ನಾನು ನೀಡುತ್ತಿರುವ ಸ್ಪಷ್ಟನೆಯಿದು- ಬಿಜೆಪಿಯ ಸಂವಿಧಾನದಲ್ಲಿ 75 ವರ್ಷಕ್ಕೆ ನಿವೃತ್ತಿ ಎಂಬ ನಿಯಮ ವೇನೂ ಇಲ್ಲ. 2029ರ ವರೆಗೂ ಮೋದಿಯವರೇ ದೇಶದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಬಿಜೆಪಿಯಲ್ಲಿ ಈ ಬಗ್ಗೆ ಯಾವುದೇ ಗೊಂದಲ ಇಲ್ಲ.
-ಅಮಿತ್‌ ಶಾ,
ಕೇಂದ್ರ ಗೃಹ ಸಚಿವ

ಮತ್ತೆ ಮೋದಿ ಅಧಿಕಾರಕ್ಕೇರಿದರೆ ಎರಡೇ ತಿಂಗಳಲ್ಲಿ ಉತ್ತರಪ್ರದೇಶ ಸಿಎಂ ಸ್ಥಾನದಿಂದ ಯೋಗಿ ಆದಿತ್ಯನಾಥ್‌ ಅವರನ್ನು ಕೆಳಕ್ಕಿಳಿಸಲಿದ್ದಾರೆ. ಆಡ್ವಾಣಿ, ಜೋಶಿ, ಚೌಹಾಣ್‌, ರಾಜೇ, ಖಟ್ಟರ್‌ ಅಧಿಕಾರ ಅಂತ್ಯವಾದಂತೆ ಯೋಗಿ ರಾಜಕೀಯ ಬದುಕು ಅಲ್ಲಿಗೆ ಕೊನೆಯಾಗಲಿದೆ. ಇದಕ್ಕಾಗಿಯೇ ಮೋದಿ “ಒನ್‌ ನೇಶನ್‌, ಒನ್‌ ಲೀಡರ್‌’ ಎಂಬ ಕಾನೂನು ಜಾರಿ ಮಾಡಲಿದ್ದಾರೆ.
-ಕೇಜ್ರಿವಾಲ್‌,
ದಿಲ್ಲಿ ಮುಖ್ಯಮಂತ್ರಿ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.