ಪಿಜಿ ಸಿಇಟಿ ಪಠ್ಯ ಪ್ರಕಟ: ಮುಂದಿನ ತಿಂಗಳು ಪರೀಕ್ಷೆ
Team Udayavani, May 12, 2024, 12:35 AM IST
ಬೆಂಗಳೂರು: ರಾಜ್ಯದ ವಿವಿಗಳಲ್ಲಿನ ಎಂಬಿಎ, ಎಂಸಿಎ, ಎಂಟೆಕ್, ಎಂಇ ಮತ್ತು ಎಂಆರ್ಕ್ ಕೋರ್ಸ್ಗಳಿಗೆ ನಡೆಯಲಿರುವ ಪಿಜಿಸಿಇಟಿ- 2024-25ರ ಪಠ್ಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಯುಜಿಸಿಇಟಿಯಲ್ಲಿ ಪಠ್ಯ ಹೊರತಾದ ಪ್ರಶ್ನೆಗಳನ್ನು ಕೇಳಿ ಸೃಷ್ಟಿಯಾಗಿದ್ದ ಗೊಂದಲಗಳಿಂದ ಎಚ್ಚೆತ್ತುಕೊಂಡಿರುವ ಕೆಇಎ, ತನ್ನ ವೆಬ್ಸೈಟ್ನಲ್ಲೇ ಪಿಜಿಸಿಇಟಿ ಪಠ್ಯವನ್ನು ಪ್ರಕಟಿಸಿದೆ. ಜೂ.29 ಮತ್ತು 30ರಂದು ಪಿಜಿ ಸಿಇಟಿ ನಡೆಯಲಿದೆ ಎಂದು ತಾತ್ಕಾಲಿಕ ದಿನಾಂಕವನ್ನು ಕೆಇಎ ನೀಡಿದೆ. ವಿಶ್ವೇಶ್ವರಯ್ಯ ತಾಂತ್ರಿಕ ವಿವಿ (ವಿಟಿಯು)ಯ ಜತೆ ಸಮಾಲೋಚನೆ ನಡೆಸಿ ಸಿಲೆಬಸ್ ಸಿದ್ಧಪಡಿಸಲಾಗಿದೆ.
ವಿವಿಗಳು ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳ ಮಾದರಿ ಗಮನಿಸಿ ಸಿಲೆಬಸ್ ಮತ್ತು ಪ್ರಶ್ನಾ ಪತ್ರಿಕೆ ಮಾದರಿ ರಚಿಸಲಾಗಿದೆ. ಕೆಇಎಯ ಪ್ರಕಟಿಸಿರುವ ಪರಿಷ್ಕೃತ ಸಿಲೆಬಸ್ನ ಆಧಾರದಲ್ಲಿ ಪಿಜಿ ಸಿಇಟಿ ನಡೆಸಲಾಗುತ್ತದೆ ಎಂದು ಕೆಇಎ ತನ್ನ ಸುತ್ತೋಲೆಯಲ್ಲಿ ಹೇಳಿದೆ.
ನೀಟ್ ಅಭ್ಯರ್ಥಿಗಳ ಸಿಇಟಿ ನೋಂದಣಿ: ಕೆಇಎ ಸ್ಪಷ್ಟನೆ
ಬೆಂಗಳೂರು: ನೀಟ್ ಪರೀಕ್ಷೆ ಬರೆದವರು ಕೂಡ ರಾಜ್ಯದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟು ಪಡೆಯಲು ಸಿಇಟಿಗೆ ನೋಂದಣಿ ಮಾಡಿಸಬೇಕು ಎಂಬ ನಿಯಮ ಹಿಂದಿನಿಂದಲೂ ಜಾರಿಯಲ್ಲಿದೆ. ಇದು ಹೊಸದಾಗಿ ಜಾರಿಯಾಗಿರುವ ನಿಯಮವಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪಷ್ಟಪಡಿಸಿದೆ. ಈ ಸಂಬಂಧ ಕೆಇಎ ಹೊಸ ನಿಯಮ ಜಾರಿಗೊಳಿಸಿರುವುದರಿಂದ ಹಲವಾರು ವಿದ್ಯಾರ್ಥಿಗಳಿಗೆ ಅನನು ಕೂಲವಾಗಿದೆ ಎಂದು ಕೆಲವರು ಅನಗತ್ಯವಾಗಿ ಗುಲ್ಲೆಬ್ಬಿಸುತ್ತಿ ದ್ದಾರೆ ಎಂದು ಕೆಇಎ ಹೇಳಿದೆ.
ಪ್ರಸಕ್ತ ಸಾಲಿನಲ್ಲಿ ನೀಟ್ ಬರೆದಿರುವ ಸುಮಾರು 2 ಲಕ್ಷ ಅಭ್ಯರ್ಥಿಗಳು ಸಿಇಟಿಗೆ ನೋಂದಣಿ ಮಾಡಿಸಿದ್ದಾರೆ. ಇದರಲ್ಲಿ 50,000 ವಿದ್ಯಾರ್ಥಿಗಳು ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಸೀಟು ಹಂಚಿಕೆಗೆ ಕೆಇಎ ನೋಡಲ್ ಸಂಸ್ಥೆ ಎಂದೂ ಕೆಇಎ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
Mudhol: ಅತ್ಯಾಚಾರದಂತಹ ಕೃತ್ಯಕ್ಕೆ ಕೋಮುಬಣ್ಣ ಬಳಿಯುವ ಕೆಲಸವಾಗಬಾರದು
Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಸಿಸಿ ಕೆಮರಾದ ಇಂಟರ್ನೆಟ್ಗೆ ರೀಚಾರ್ಜ್ ಮಾಡದ ಪಾಲಿಕೆ!
Hubli: ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಮಹಾರಾಜರು ಇನ್ನಿಲ್ಲ
ಪ್ಯಾಸೆಂಜರ್ ರೈಲು ಓಡಾಟ ಎಂದು? ರೈಲ್ವೆ ಹೋರಾಟಗಾರರಿಗೆ ಬೇಸರ…
Multi-level ಕಾರ್ ಪಾರ್ಕಿಂಗ್ ಮತ್ತೆ ಸಾಕಾರದ ಆಶಾಭಾವ!
Delhi; ಕೇಜ್ರಿವಾಲ್ ಗಾಗಿ ಖಾಲಿ ಕುರ್ಚಿ ಇರಿಸಿ ನಿಷ್ಠೆ ತೋರಿಸಿದ ದೆಹಲಿ ಸಿಎಂ ಆತಿಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.