Lok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

ಚುನಾವಣೆ ಅವಲೋಕನ ಸಭೆಯಲ್ಲಿ ಬಿಜೆಪಿ ಪ್ರಮುಖರ ವಿಶ್ವಾಸ

Team Udayavani, May 12, 2024, 7:15 AM IST

bjpLok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

ಬೆಂಗಳೂರು: ಲೋಕಸಭಾ ಚುನಾವಣೆಯ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬಿಜೆಪಿ ಕಚೇರಿಯಲ್ಲಿ ಮಹತ್ವದ “ಅವಲೋಕನ’ ಸಭೆ ನಡೆದಿದ್ದು, 22 ಸ್ಥಾನಗಳಲ್ಲಿ ಎನ್‌ಡಿಎಗೆ ಗೆಲುವು ನಿಶ್ಚಿತ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಈ ಸಭೆ ನಡೆದಿದ್ದು, ವಿಪಕ್ಷ ನಾಯಕರಾದ ಆರ್‌.ಅಶೋಕ್‌, ಕೋಟ ಶ್ರೀನಿವಾಸ್‌ ಪೂಜಾರಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡ, ಜಗದೀಶ್‌ ಶೆಟ್ಟರ್‌, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಮಾಜಿ ಸಚಿವ ಸಿ.ಟಿ.ರವಿ, ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರು ಭಾಗವಹಿಸಿದ್ದರು.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬಿಜೆಪಿಯ ಸಂಖ್ಯಾಬಲ ಕಡಿಮೆ ಯಾಗುವ ಸಾಧ್ಯತೆ ಬಗ್ಗೆ ಪರೋಕ್ಷ ಅಭಿಪ್ರಾಯ ವ್ಯಕ್ತವಾಗಿದೆಯಾದರೂ, ಯಾವುದೇ ಕ್ಷೇತ್ರದ ಅಭ್ಯರ್ಥಿಯಾಗಲಿ, ಚುನಾವಣ ಉಸ್ತುವಾರಿಯಾಗಲಿ ಸೋಲಿನ ಭೀತಿಯನ್ನು ವ್ಯಕ್ತಪಡಿಸಿಲ್ಲ ಎಂದು ತಿಳಿದು ಬಂದಿದೆ. ಸರಾಸರಿ ಮತದಾನದ ಆಧಾರದ ಮೇಲೆ ಬಿಜೆಪಿ ಹಾಗೂ ಜೆಡಿಎಸ್‌ ಗೆಲ್ಲುವ ಕ್ಷೇತ್ರಗಳ ಮತಗಳ ಅಂತರದ ಮೇಲೆ ಮೂರು ರೀತಿಯ ವರ್ಗೀಕರಣ ಮಾಡಲಾಗಿದೆ. ಪ್ರಹ್ಲಾದ್‌ ಜೋಷಿ, ಬಿ.ವೈ.ರಾಘವೇಂದ್ರ, ತೇಜಸ್ವಿ ಸೂರ್ಯ, ರಾಜವಂಶಸ್ಥ ಯದುವೀರ್‌ ಮೊದಲಾದವರು ಭಾರೀ ಅಂತರದಿಂದ ಗೆಲ್ಲುವ ಅಂದಾಜು ಮಾಡಲಾಗಿದೆ. ಆದರೆ ಕರಾವಳಿಯ 3 ಕ್ಷೇತ್ರಗಳು ಸಹಿತ ಮಹತ್ವದ ಸಂಘಟನಾತ್ಮಕ ಕ್ಷೇತ್ರಗಳಲ್ಲಿ ಮತಗಳ ಅಂತರ ಕಡಿಮೆಯಾಗಬಹುದೆಂದು ನಿರೀಕ್ಷಿಸಲಾಗಿದೆ. ಜತೆಗೆ ಕಡಿಮೆ ಅಂತರದಿಂದ ಗೆಲ್ಲುವ ಕ್ಷೇತ್ರಗಳ ಪಟ್ಟಿಯನ್ನು ಮಾಡಲಾಗಿದೆ.

ರಾಜ್ಯ ಸರಕಾರದ ಗ್ಯಾರಂಟಿ ಯೋಜ ನೆಗಳ ಮಧ್ಯೆಯೂ ರಾಜ್ಯದ ಜನರು ನರೇಂದ್ರ ಮೋದಿಯವರ ಪರವಾಗಿ ಮತ ಚಲಾಯಿಸಲು ಬದ್ಧ ರಾಗಿರುವುದು ಸಭೆಯಲ್ಲಿ ಪ್ರಸ್ತಾವ ವಾಗಿದ್ದು, ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಹೊಂದಾಣಿಕೆ ಸಮಸ್ಯೆ ಸೃಷ್ಟಿ ಯಾದ ಬಗ್ಗೆ ಆಕ್ಷೇಪ ಕೇಳಿ ಬಂದಿದೆ. ಜತೆಗೆ ಕೆಲವು ಕ್ಷೇತ್ರಗಳಲ್ಲಿ ಹಣಕಾಸು ವಿಚಾರವಾಗಿ ಅಭ್ಯರ್ಥಿಗಳು ಸಮಸ್ಯೆ ಎದುರಿಸಬೇಕಾಯಿತು ಎಂಬ ಬೇಸರವೂ ವ್ಯಕ್ತವಾಗಿದೆ.

ಜತೆಗೆ ಪರಿಷತ್‌ ಚುನಾವಣೆ ಸಿದ್ಧತೆ ಬಗ್ಗೆಯೂ ಚರ್ಚೆಯಾಗಿದೆ. ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ತಲಾ ನಾಲ್ವರು ಪ್ರಭಾರಿಗಳ ನೇಮಕದ ಜತೆಗೆ 25 ಮತದಾರರಿಗೆ ಒಬ್ಬ ಪ್ರಮುಖರ ನೇಮಕಕ್ಕೆ ಸೂಚನೆ ನೀಡಲಾಗಿದೆ. ಅಭ್ಯರ್ಥಿ ಅಂತಿಮಗೊಳಿಸುವುದು ತಡವಾದರೂ ಒಂದು ವರ್ಷದ ಹಿಂದಿನಿಂದಲೇ ತಯಾರಿ ನಡೆದಿರುವುದರಿಂದ ಸಮಸ್ಯೆಯಾಗು ವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪ್ರಮುಖರ ಮಧ್ಯೆ ಕುಳಿತ ಯದುವೀರ್‌
ಸಭೆಗೆ ಆಗಮಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ರಾಜವಂಶಸ್ಥ ಯದುವೀರ್‌ ಅಭ್ಯರ್ಥಿಗಳು ಹಾಗೂ ಪ್ರಮುಖರ ಮಧ್ಯೆಯೇ ಕುಳಿತಿದ್ದರು. ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಷಿ, ಶೋಭಾ, ಬಸವರಾಜ್‌ ಬೊಮ್ಮಾಯಿ ಸಹಿತ ಕೆಲವು ಪ್ರಮುಖ ಅಭ್ಯರ್ಥಿಗಳು ಸಭೆಗೆ ಗೈರಾಗಿದ್ದರು.

ಸರಕಾರದ ವಿರುದ್ಧ ಬಿಜೆಪಿ 152 ಚುನಾವಣ ದೂರು
ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಯಾದ ದಿನದಿಂದ ರಾಜ್ಯ ಕಾಂಗ್ರೆಸ್‌ ಸರಕಾರ ಆಡಳಿತ ಯಂತ್ರವನ್ನು ವ್ಯಾಪಕವಾಗಿ ದುರುಪಯೋಗಪಡಿಸಿಕೊಂಡಿದ್ದು, ಸರಕಾರದ ವಿರುದ್ಧ 152 ದೂರುಗಳನ್ನು ಚುನಾವಣ ಆಯೋಗಕ್ಕೆ ನೀಡಲಾಗಿದೆ ಎಂದು ಬಿಜೆಪಿ ಚುನಾವಣೆ ನಿರ್ವಹಣ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್‌ ಕುಮಾರ್‌ ತಿಳಿಸಿದರು.

ಲೋಕಸಭಾ ಚುನಾವಣೆ ಅವಲೋಕನ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರಕಾರ ಎಲ್ಲ ಜಿÇÉೆ- ತಾಲೂಕುಗಳಲ್ಲಿ ನಮ್ಮ ಕಾರ್ಯಕರ್ತರನ್ನು ಬೆದರಿಸುವ ತಂತ್ರ ನಡೆಸಿದೆ. ಕಾರ್ಯಕರ್ತರ ವಿರುದ್ಧ ಅಪಾರ ಮೊಕದ್ದಮೆ ದಾಖಲಿಸಲಾಗಿದೆ. ಇವುಗಳ ವಿರುದ್ಧ ಸ್ಥಳೀಯವಾಗಿ ದೂರು ಕೊಡಲಾಗಿದೆ. ರಾಜಕೀಯವಾಗಿಯೂ ನಾವು ಈ ಆಕ್ರಮಣವನ್ನು ಎದುರಿಸುತ್ತೇವೆ ಎಂದು ಹೇಳಿದರು.

60 ಸಾವಿರಕ್ಕೂ ಹೆಚ್ಚು ಬೂತ್‌ ಸಭೆ
ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸಹಿತ 14 ಜನ ರಾಷ್ಟ್ರೀಯ ಪ್ರಮುಖರು 79 ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದ್ದರು. 39 ಕಡೆಗಳಲ್ಲಿ ರೋಡ್‌ ಶೋ ನಡೆದಿವೆ. ರಾಜ್ಯ ನಾಯಕರಾದ ಯಡಿಯೂರಪ್ಪ, ವಿಜಯೇಂದ್ರ ಮತ್ತು ಆರ್‌.ಅಶೋಕ್‌ ಸಹಿತ ಸುಮಾರು 30 ಪ್ರಮುಖರು 557 ಸಭೆಗಳಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. 139 ಕಡೆಗಳಲ್ಲಿ ರಾಜ್ಯ ನಾಯಕರು ರೋಡ್‌ ಶೋ ನಡೆಸಿದ್ದಾರೆ ಎಂದು ವಿವರಿಸಿದರು.

ಒಟ್ಟು 650ಕ್ಕೂ ಹೆಚ್ಚು ಸಾರ್ವಜನಿಕ ಸಭೆ, 180ಕ್ಕೂ ಹೆಚ್ಚು ರೋಡ್‌ ಶೋಗಳನ್ನು ಮಾಡಲಾಗಿದೆ. ಕಾಂಗ್ರೆಸ್‌ ಅಪಪ್ರಚಾರ ಬಗ್ಗೆ ಹಾಗೂ ಕಾಂಗ್ರೆಸ್‌ ಅಪಾಯಕಾರಿ ಎಂದು ತಿಳಿಸಲು ಮನೆಯಂಗಳದಲ್ಲಿ ಸಭೆ ನಡೆಸಿದ್ದೇವೆ. 50-75 ಜನರನ್ನು ಒಳಗೊಂಡ ಸುಮಾರು 60 ಸಾವಿರಕ್ಕೂ ಹೆಚ್ಚು ಸಣ್ಣಸಣ್ಣ ಸಭೆಗಳನ್ನು ಬೂತ್‌ ಮಟ್ಟದಲ್ಲಿ ನಡೆಸಿರುವುದು ಈ ಚುನಾವಣೆಯ ವಿಶೇಷ ಎಂದು ತಿಳಿಸಿದರು.

ಕಾಂಗ್ರೆಸ್‌ ಸರಕಾರ ಅವರದೇ ಅಂತಃಕಲಹದ ಭಾರದಲ್ಲಿ ಕುಸಿದು ಬೀಳಲಿದ್ದು, ಅವರು ಬಿದ್ದಾಗ ನಮ್ಮ ರಾಜಕಾರಣ ನಡೆಸುತ್ತೇವೆ. ನಾಯಕತ್ವಕ್ಕಾಗಿ 4 ರೀತಿಯ ಪೈಪೋಟಿ ಕಾಂಗ್ರೆಸ್‌ ಪಕ್ಷದಲ್ಲಿದೆ. ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಲ್ಲಿ ಮಾಡಿದ ಭಾಷಣ ಇದಕ್ಕೆ ಜ್ವಲಂತ ಉದಾಹರಣೆ.
-ವಿ. ಸುನಿಲ್‌ಕುಮಾರ್‌, ಬಿಜೆಪಿ ನಾಯಕ

 

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.