Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

ಮಂಗಳೂರಿನ ವೀಕ್ಷಕನಿಂದ ಪೊಲೀಸ್‌ಗೆ ದೂರು

Team Udayavani, May 12, 2024, 7:50 AM IST

ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

ಮಂಗಳೂರು: ಧಾರಾವಾಹಿ ಕಾಲ್ಪನಿಕ ಇರಬಹುದು, ಆದರೆ ಅದರ ಪ್ರಭಾವ ನೇರವಾಗಿ ಜನರ ಮೇಲಾಗುವುದಿಲ್ಲವೇ? ಹಾಗಿರುವಾಗ ಧಾರಾವಾಹಿ ನಿರ್ಮಿಸುವವರು ಎಚ್ಚರ ವಹಿಸಬೇಕಲ್ಲವೇ?

ಇಂತಹ ಜಿಜ್ಞಾಸೆ ಹುಟ್ಟು ಹಾಕಿರುವ ಅಪರೂಪದ ಪ್ರಕರಣ ನಡೆದಿದೆ. ಧಾರಾವಾಹಿಯ ದೃಶ್ಯವೊಂದರಲ್ಲಿ ನಟಿಯೊಬ್ಬರು ಹೆಲ್ಮೆಟ್‌ ಇಲ್ಲದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ್ದಕ್ಕಾಗಿ ಪೊಲೀಸರು “ದಂಡ’ ವಿಧಿಸಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಸೀತಾರಾಮ’ ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯದಲ್ಲಿ ಸ್ಕೂಟರ್‌ನಲ್ಲಿ ಇಬ್ಬರು ಸಂಚರಿಸುವ ದೃಶ್ಯವಿತ್ತು. ಅದರಲ್ಲಿ ಸವಾರೆ ಹೆಲ್ಮೆಟ್‌ ಧರಿಸಿದ್ದರೆ ಹಿಂಬದಿ ಕುಳಿತಾಕೆ ಹೆಲ್ಮೆಟ್‌ ಧರಿಸಿರಲಿಲ್ಲ.

ಟಿವಿಯಲ್ಲಿ ಪ್ರಸಾರವಾದ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್‌ ಎಕ್ಕೂರು ಎಂಬವರು, ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿ, ಧಾರಾವಾಹಿಯಲ್ಲಿ ಸಂಚಾರ ನಿಯಮದ ಉಲ್ಲಂಘನೆಯಾಗಿದೆ. ನಟ-ನಟಿಯರು ಸಂಚಾರ ನಿಯಮ ಉಲ್ಲಂಘಿಸುವುದು ಪ್ರೇಕ್ಷಕರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಆ ನಟಿ, ಧಾರಾವಾಹಿಯ ನಿರ್ದೇಶಕ ಮತ್ತು ಪ್ರಸಾರ ಮಾಡಿದ ವಾಹಿನಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಆಗ್ರಹಿಸಿದ್ದರು.

ಪೊಲೀಸ್‌ ಆಯುಕ್ತರು ಮಂಗಳೂರು ಸಂಚಾರ ಪೂರ್ವ ಠಾಣೆಗೆ ಪ್ರಕರಣವನ್ನು ವಹಿಸಿದ್ದರು. ಅದರಂತೆ ಜಯಪ್ರಕಾಶ್‌ ಅವರಿಗೆ ಠಾಣೆಯಿಂದ ಹಿಂಬರಹ ನೀಡಿ, ದ್ವಿಚಕ್ರ ವಾಹನದ ಮಾಲಕರಿಗೆ ಮತ್ತು ಧಾರಾವಾಹಿಯ ನಿರ್ದೇಶಕರಿಗೆ ಮಾಹಿತಿ ಕೇಳಿ ನೋಟಿಸ್‌ ಜಾರಿಗೊಳಿಸಲಾಗಿತ್ತು. ಧಾರಾವಾಹಿಯ ದೃಶ್ಯವನ್ನು ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಚಿತ್ರೀಕರಿಸಿದ್ದು, ಮುಂದಿನ ವಿಚಾರಣೆಗೆ ಅಲ್ಲಿನ ಪೊಲೀಸ್‌ ಠಾಣೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಲಾಗಿತ್ತು. ಅರ್ಜಿಯ ಬಗ್ಗೆ ಪರಿಶೀಲನೆ ನಡೆಸಿದ ರಾಜಾಜಿನಗರ ಠಾಣಾ ಪೊಲೀಸರು ಸಂಬಂಧಪಟ್ಟ ನಟಿಗೆ ಮತ್ತು ಮಾಲಕಿಗೆ ಮೇ 10ರಂದು 500 ರೂ. ದಂಡ ವಿಧಿಸಿದ್ದಾರೆ. ಮಾತ್ರವಲ್ಲದೆ, ಇನ್ನು ಮುಂದೆ ತಮ್ಮ ಧಾರಾವಾಹಿಯಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸುವುದಿಲ್ಲ ಎಂದು ಧಾರಾವಾಹಿಯ ಪ್ರೊಡಕ್ಷನ್‌ ಮ್ಯಾನೇಜರ್‌ ರಿಂದ ಹಿಂಬರಹ ಪಡೆದಿದ್ದಾರೆ.

ಧಾರಾವಾಹಿಯಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚರಿಸುವ ದೃಶ್ಯವನ್ನು ನೋಡಿದೆ. ಇದರ ಪರಿಣಾಮದ ಕುರಿತು ಆಯುಕ್ತರಿಗೆ ದೂರು ನೀಡಿದೆ. ಪೊಲೀಸರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತದೆ ಅಂದುಕೊಂಡಿರಲಿಲ್ಲ. ಪೊಲೀಸರು ದಂಡ ವಿಧಿಸಿರುವುದು ಇತರರಿಗೂ ಪಾಠವಾಗಿದೆ, ಮಾತ್ರವಲ್ಲದೆ ಇದರಿಂದ ಜಾಗೃತಿಯೂ ಮೂಡಲಿದೆ.
– ಜಯಪ್ರಕಾಶ್‌ ಎಕ್ಕೂರು

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.