Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ


Team Udayavani, May 12, 2024, 12:24 PM IST

1-wqew-ewqe

ಕಲಬುರಗಿ: ಸೆಕೆಂಡ್‌ ಹ್ಯಾಂಡ್‌ ಕಾರು ಮಾರಾಟಗಾರ ಹಾಗೂ ಆತನ ಸ್ನೇಹಿತರನ್ನು ಹಣಕ್ಕಾಗಿ ಬೇಡಿಕೆಯಿಟ್ಟು ಕೂಡಿ ಹಾಕಿ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಬ್ಯಾಟರಿ ಶಾಕ್‌ ನೀಡಿ ಕೊಲೆಗೆ ಯತ್ನಿಸಿದ ಘಟನೆ ಗುಲ್ಬರ್ಗ ವಿಶ್ವವಿದ್ಯಾಲಯ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸೇಡಂ ತಾಲೂಕಿನ ದೇವನೂರದ ಅರ್ಜುನಪ್ಪ ಹಣಮಂತ, ಇಸ್ಲಾಮಾಬಾದ್‌ ಕಾಲೋನಿಯ ಮಹ್ಮದ್‌ ಸಮಿರೊದ್ದೀನ್‌ ಮತ್ತು ಹೀರಾಪುರದ ಅಬ್ದುಲ್‌ ರೆಹಮಾನ್‌ ಹಲ್ಲೆಗೊಳಗಾದವರು. ಗಣೇಶ ನಗರದ ನಿವಾಸಿಗಳಾದ ಇಮ್ರಾನ್‌ ಪಟೇಲ್‌, ಮಹ್ಮದ್‌ ಮತೀನ್‌, ಮುಹಾಹೀರ್‌ ನಗರ ನಿವಾಸಿ ಮಹ್ಮದ್‌ ಜಿಯಾ ಅಲ್‌ ಹುಸೈನಿ, ಇಸ್ಲಾಮಾಬಾದ್‌ ಕಾಲೋನಿಯ ಮಹ್ಮದ್‌ ಅಫ‌ಜ್ಲ್ ಸೈಕ್‌, ಮಿಲತ್‌ ನಗರದ ಹುಸೈನ್‌ ಸೈಕ್‌, ಚಿತ್ತಾಪುರದ ರಮೇಶ ದೊಡ್ಡಮನಿ ಹಾಗೂ ವಾಡಿಯ ಸಾಗರ ಶ್ರೀಮಂತ ಸೇರಿ ಇತರರ ವಿರುದ್ಧ ವಿವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಆಯುಕ್ತ ಚೇತನ ಆರ್‌.ತಿಳಿಸಿದ್ದಾರೆ.

ಘಟನೆ ಹಿನ್ನೆಲೆ
ಅರ್ಜುನಪ್ಪ ಬೆಂಗಳೂರಿನಿಂದ ಸೆಕೆಂಡ್‌ ಹ್ಯಾಂಡ್‌ ಕಾರ್‌ಗಳನ್ನು ತಂದು ಮಾರುತ್ತಿದ್ದರು. ಪರಿಚಯಸ್ಥ ರಮೇಶ ದೊಡ್ಡಮನಿ ಸೆಕೆಂಡ್‌ ಹ್ಯಾಂಡ್‌ ಕಾರು ಕೊಡಿಸುವಂತೆ ಕೇಳಿದಾಗ ಆರು ಲಕ್ಷ ರೂ.ನ ಸೆಕೆಂಡ್‌ ಹ್ಯಾಂಡ್‌ ಕಾರಿದೆ, ಒಂದು ಲಕ್ಷ ರೂ. ಕಮೀಷನ್‌ ಕೊಡಿ ಎಂದಿದ್ದರು. ಅಂತೆಯೇ ಮೇ 4ರಂದು ಚಿತ್ತಾಪುರದಿಂದ ಕಾರಿನಲ್ಲಿ ಅರ್ಜುನಪ್ಪ ಮತ್ತು ರಮೇಶ ಕಾರು ಮಾರಾಟಗಾರ ಅಬ್ದುಲ್‌ ರಹೆಮಾನ್‌ ಹೇಳಿದ ನಾಗನಹಳ್ಳಿ ಕ್ರಾಸ್‌ಗೆ
ಬಂದಿದ್ದಾರೆ. ಅಬ್ದುಲ್‌ ಅಲ್ಲಿಗೆ ತನ್ನ ಪರಿಚಯಸ್ಥ ಸಮಿರೊದ್ದೀನ್‌ನನ್ನು ಕರೆದುಕೊಂಡು ಬಂದಿದ್ದರು.

ಈ ವೇಳೆ ರಮೇಶ ಹಣ ತರೋಣವೆಂದು ಮೂವರನ್ನು ಹಾಗರಗಾ ರಸ್ತೆಯ ಮನೆಯೊಂದಕ್ಕೆ ಕರೆದೊಯ್ದಿದ್ದಾನೆ. ಅಲ್ಲಿದ್ದ ಇಮ್ರಾನ್‌ ಸೇರಿ ಇಬ್ಬರು ಟೆಸ್ಟ್‌ ಡ್ರೈವ್‌ಗಾಗಿ ಕಾರು ತೆಗೆದುಕೊಂಡು ಹೋಗಿ ವಾಪಸ್‌ ಬಂದವರೇ ಮೂವರನ್ನು ನಿಂದಿಸಿ, ಕಾರಿನಿಂದ ಎಳೆದೊಯ್ದು ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. 10 ರಿಂದ 12 ಮಂದಿ ಸುತ್ತುವರಿದು ಮೂವರ ಬಟ್ಟೆ ಬಿಚ್ಚಿಸಿದ್ದು, ಇಮ್ರಾನ್‌ ಬ್ಯಾಟರಿ ಕರೆಂಟ್‌ನಿಂದ ಮೂವರ ಗುಪ್ತಾಂಗಕ್ಕೆ ಶಾಕ್‌
ಕೊಟ್ಟಿದ್ದಾನೆ. ಮತೀನ್‌ ಹಾಗೂ ಇತರರು ಬಡಿಗೆಗಳಿಂದ ಹಲ್ಲೆ ಮಾಡಿದ್ದಾರೆ. ಸಿಗರೇಟ್‌ನಿಂದ ಸುಟ್ಟು ಗಾಯ ಮಾಡಿದ್ದಾರೆ. ಇಮ್ರಾನ್‌ ಅಬ್ದುಲ್‌ ಎದೆಗೆ ಲಾಂಗ್‌ಗಳಿಂದ ಚುಚ್ಚಿ, ಬೆನ್ನಿಗೂ ಸವರಿದ್ದಾನೆ ಎಂದು ಸಂತ್ರಸ್ತರು ದೂರಿನಲ್ಲಿ ಆರೋಪಿಸಿದ್ದಾರೆ.

ಕೂಡಿ ಹಾಕಿದ ಮರುದಿನ ಮೇ 5ರಂದು ಇಮ್ರಾನ್‌ ಅರ್ಜುನಪ್ಪಗೆ ಜೀವ ಬೆದರಿಕೆ ಹಾಕಿದ್ದು, ಅವರು ಪತ್ನಿಗೆ ಕರೆ ಮಾಡಿ, 50 ಸಾವಿರ ರೂ. ತನ್ನ ಖಾತೆಗೆ ಜಮಾ ಮಾಡಿಸಿಕೊಂಡಿದ್ದರು. ಅರ್ಜುನಪ್ಪ ಮೊಬೈಲ್‌ ಕಿತ್ತುಕೊಂಡ ಇಮ್ರಾನ್‌ ಪಾಸ್‌ವರ್ಡ್‌, ಫೋನ್‌ ಪೇ ಮಾಹಿತಿ ಪಡೆದು, 4,200 ರೂ. ಖರ್ಚು ಮಾಡಿದ. ಅಲ್ಲದೇ ಸಂಜೆ 7ರೊಳಗೆ ಏಳು ಲಕ್ಷ ರೂ. ಕೊಡುವಂತೆ ಹಾಗೂ ತಿಂಗಳಿಗೆ ಒಂದು ಲಕ್ಷ ರೂ. ಕಮೀಷನ್‌ ಕೊಡುವಂತೆ ತಾಕೀತು ಮಾಡಿದ್ದ. ಸಂಜೆ ಪೊಲೀಸರು ಸ್ಥಳಕ್ಕೆ ಧಾವಿಸುತ್ತಲೇ ಆರೋಪಿಗಳು ಪರಾರಿಯಾಗಿದ್ದರು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.