Ganga Shashidharan: ಉಡುಪಿಯಲ್ಲಿ ಖ್ಯಾತ ವಯೊಲಿನ್ ವಾದಕಿ ಗಂಗಾ ಶಶಿಧರನ್
Team Udayavani, May 13, 2024, 2:41 PM IST
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮೇ15ರಂದು ಉಡುಪಿಯ ಪ್ರಸಿದ್ಧ ಗಾಂಧಿ ಆಸ್ಪತ್ರೆ ಮೂವತ್ತನೆ ಸಂವತ್ಸರಕ್ಕೆ ಪದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಹಾಗು ಪಂಚಮಿ ಟ್ರಸ್ಟ್, ಪಂಚಲಹರಿ ಫೌ೦ಡೇಶನ್ ಪ್ರಾಯೋಜಕತ್ವದಲ್ಲಿ ಖ್ಯಾತ ಬಾಲಕಿ ಗಂಗಾ ಶಶಿಧರನ್ ಗುರುವಾಯೂರು ಹಾಗೂ ಅವರ ಗುರು ಅನುರೂಪ್ ಗುರುವಾಯೂರು ಮತ್ತು ತಂಡದವರಿಂದ ವಯೊಲಿನ್ ವಾದನ ನಡೆಯಲಿದೆ.
ತ್ರಿಶೂರ್ ನ ಹತ್ತು ವರ್ಷದ ಗಂಗಾ ಶಶಿಧರನ್ ವಯೊಲಿನ್ ವಾದನದ ಮೂಲಕ ಸಂಗೀತ ಪ್ರಿಯರ ಮನ ಗೆದ್ದಿದ್ದಾಳೆ. ಗುರುವಾಯೂರು ದೇವಸ್ಥಾನದ ವೇದಿಕೆಯಲ್ಲಿ ವೇದಿಕೆಯಲ್ಲಿ ವಯೊಲಿನ್ ನಲ್ಲಿ ಜಾದೂ ಪ್ರದರ್ಶಿಸಿ ಎಲ್ಲರನ್ನು ಬೆರಗುಗೊಳಿಸುವ ತಾರೆಯಾಗಿದ್ದಾರೆ.
ದಕ್ಷಿಣ ಆಫ್ರಿಕಾ, ಸ್ವಿಟ್ಜರ್ಲೆಂಡ್, ದೆಹಲಿ ಮತ್ತು ಬೆಂಗಳೂರಿಗೆ ಆಹ್ವಾನಗಳೊಂದಿಗೆ ಕೇರಳ ಮತ್ತು ಹೈದರಾ ಬಾದ್ನಲ್ಲಿ ಅನೇಕ ಸ್ಥಳಗಳಲ್ಲಿ ಸಂಗೀತ ಕಚೇರಿಗಳನ್ನು ನಡೆಸಿಕೊಟ್ಟಿದ್ದಾಳೆ. ಕಳೆದ ನವೆಂಬರ್ನಲ್ಲಿ ಗುರುವಾಯೂರು ದೇವಸ್ಥಾನ ದಲ್ಲಿ ನಡೆದ ಜುಗಲ್ಬಂದಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದೀಗ ಉಡುಪಿಯಲ್ಲಿ ಆಕೆಯ ವಯೊಲಿನ್ ವಾದನ ಕಾರ್ಯಕ್ರಮವು ಮೇ 15 ರಂದು ಸಂಜೆ ರಾಜಾಂಗಣದಲ್ಲಿ ನಡೆಯಲಿದ್ದು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದು ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಎಂ. ಹರಿಶ್ಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ: ಸೆ.9ರಂದು ಪ್ರಥಮ ವರ್ಷದ ಲೋಬಾನ ಸೇವೆ ಹುಲಿವೇಷ ಕುಣಿತ
Kaup ವಿದೂಷಕರ ವೇಷ ಧರಿಸಿ ಸಂಗ್ರಹಿಸಿದ 14.33 ಲ.ರೂ. ಅನಾಥಾಶ್ರಮಕ್ಕೆ !
Ganesh Chaturthi ; ಕರಾವಳಿಯ ಮನೆಮನೆಗಳಲ್ಲಿ ಇಂದು ಗಣೇಶೋತ್ಸವ ಸಂಭ್ರಮ
Udupi ಗೀತಾರ್ಥ ಚಿಂತನೆ-29; ಭಗವದವತಾರದ ಉದ್ದೇಶವೇನು?
Karkala ಕರ್ತವ್ಯಲೋಪ, ಶಿಷ್ಟಾಚಾರ ಉಲ್ಲಂಘನೆ: ಅಂಗನವಾಡಿ ಕಾರ್ಯಕರ್ತೆ ಅಮಾನತು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.