ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

ಹಾರ್ದಿಕ್ ಬೆನ್ನಿಗೆ ನಿಂತಿರುವ 'ಆ ಬಿಸಿಸಿಐ ಬಿಗ್ ಬಾಸ್' ಯಾರು?

ಕೀರ್ತನ್ ಶೆಟ್ಟಿ ಬೋಳ, May 13, 2024, 5:48 PM IST

ಟೀಂ ಇಂಡಿಯಾದಲ್ಲೂ ರೋಹಿತ್ ಕೆರಿಯರ್ ಮುಗಿಸಿದ್ರಾ ಹಾರ್ದಿಕ್ ಪಾಂಡ್ಯ? ಏನಿದು ವರದಿ

16 ಸೀಸನ್ ಗಳಲ್ಲಿ ಐದು ಬಾರಿ ಐಪಿಎಲ್ ಚಾಂಪಿಯನ್ ಆಗಿರುವ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ 17ನೇ ಸೀಸನ್ ಮರೆಯಲಾಗದ್ದು. ತಂಡವನ್ನು ಗಟ್ಟಿ ಮಾಡಬೇಕೆಂಬ ಕಾರಣದಿಂದ ಹಲವು ಪ್ರಯೋಗ ಮಾಡಿದ ಮುಂಬೈಗೆ ಇದೀಗ ಅದೇ ಪ್ರಯೋಗಗಳು ತಿರುಗೇಟು ನೀಡಿದೆ. ಈ ಬಾರಿಯ ಸೀಸನ್ ನಲ್ಲಿ ಹೊರಬಿದ್ದ ತಂಡವಾಗಿ ಕುಖ್ಯಾತಿ ಇದೀಗ ಮುಂಬೈ ಇಂಡಿಯನ್ಸ್ ನದ್ದು.

ಈ ಸೀಸನ್ ನ ಆರಂಭಕ್ಕೆ ಮೊದಲು ಗುಜರಾತ್ ತಂಡದಲ್ಲಿದ್ದ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಕರೆತಂದು ಅವರಿಗೆ ನಾಯಕತ್ವ ವಹಿಸಲಾಗಿತ್ತು. ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ತೆಗೆದು ಹಾಕಿದ ಕಾರಣದಿಂದ ಫ್ರಾಂಚೈಸಿ ಭಾರೀ ಟೀಕೆಗೆ ಒಳಗಾಗಿತ್ತು. ಅಲ್ಲದೆ ಮುಂಬೈ ಇಂಡಿಯನ್ಸ್ ತಂಡದ ಕಳಪೆ ಪ್ರದರ್ಶನದ ಬಳಿಕ ತಂಡವು ಮತ್ತಷ್ಟು ಹಿನ್ನಡೆ ಅನುಭವಿಸಿದೆ.

ದೈನಿಕ್ ಜಾಗರಣ್ ವರದಿಯ ಪ್ರಕಾರ, ಮುಂಬೈ ಡ್ರೆಸ್ಸಿಂಗ್ ರೂಮ್ ನಲ್ಲಿ ರೋಹಿತ್ ಮತ್ತು ಹಾರ್ದಿಕ್ ನಡುವಿನ ಸಂಬಂಧ ಅಷ್ಟಕ್ಕಷ್ಟೇ ಎನ್ನುವಂತಿದೆ. ಹಾರ್ದಿಕ್ ನಾಯಕನಾಗಿರುವುದು ವಿದೇಶಿ ಆಟಗಾರರಿಗೆ ಯಾವುದೇ ಸಮಸ್ಯೆ ಇಲ್ಲದಿದ್ದರೂ, ದೇಶೀಯ ಪ್ರತಿಭೆಗಳು ರೋಹಿತ್‌ ನತ್ತ ನೋಡುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮುಂಬೈ ಇಂಡಿಯನ್ಸ್ ತಂಡವು ಎರಡು ಬಣಗಳಾಗಿ ವಿಂಗಡಿಸಲಾಗಿದೆ ಎಂದು ಮೈಕೆಲ್ ಕ್ಲಾರ್ಕ್ ಹೇಳಿಕೆ ನೀಡಿದ ನಂತರ, ಬೆಂಕಿಗೆ ತುಪ್ಪ ಸುರಿಯುವಂತಹ ವರದಿಯನ್ನು ಜಾಗರಣ್ ಮಾಡಿದೆ. ರೋಹಿತ್ ಮತ್ತು ಹಾರ್ದಿಕ್ ಮೈದಾನದಲ್ಲಿ ಎಲ್ಲವೂ ಸರಿಯಾಗಿ ಇದ್ದಂತೆ ಇದ್ದರೂ, ಇಬ್ಬರು ಕಣ್ಣಿಗೆ ಕಣ್ಣಿಟ್ಟು ಮಾತನಾಡುತ್ತಿಲ್ಲ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಮುಂಬೈ ಪಂದ್ಯಕ್ಕೆ ಮೊದಲು ರೋಹಿತ್ ಅಭ್ಯಾಸದ ಸಮಯದಲ್ಲಿ ಹಾರ್ದಿಕ್ ಎಲ್ಲಿಯೂ ಕಾಣಿಸಲಿಲ್ಲ. ರೋಹಿತ್ ಬ್ಯಾಟಿಂಗ್ ಬಳಿಕ, ತಿಲಕ್ ವರ್ಮಾ ಮತ್ತು ಸೂರ್ಯ ಕುಮಾರ್ ಯಾದವ್ ಅಭ್ಯಾಸ ನಡೆಸಿದರು. ಆದರೆ, ಅಭ್ಯಾಸಕ್ಕೆ ಹಾರ್ದಿಕ್ ಸರದಿ ಬಂದಾಗ ಈ ಆಟಗಾರರು ಅಲ್ಲಿಂದ ನಡೆದರು ಎನ್ನುತ್ತಿದೆ ವರದಿ.

ಕೆಲ ದಿನಗಳ ಹಿಂದಷ್ಟೇ ಅಭಿಷೇಕ್ ನಾಯರ್ ಜೊತೆ ಮಾತನಾಡುತ್ತಾ ರೋಹಿತ್ ಶರ್ಮಾ ಅವರು, ಮುಂಬೈ ಇಂಡಿಯನ್ಸ್ ತಂಡ ತೊರೆಯುವ ಬಗ್ಗೆ ಮಾತನಾಡಿದ್ದರು. “ಎಲ್ಲವೂ ಒಂದೊಂದಾಗಿ ಬದಲಾಗುತ್ತಿದೆ… ಏನೇ ಆದರೂ ಇದು ನನ್ನ ಮನೆ, ಇದು ನಾನು ನಿರ್ಮಿಸಿದ ದೇವಾಲಯ.. ಇಲ್ಲಿ ನನ್ನದು ಕೊನೆಯದು…” ಎಂದಿದ್ದರು.

ಹಾರ್ದಿಕ್ ಆಯ್ಕೆಗೆ ಸಿದ್ದವಿರದ ರೋಹಿತ್- ಅಜಿತ್

ಟಿ20 ವಿಶ್ವಕಪ್ ಗೆ ತಂಡ ಪ್ರಕಟ ಮಾಡುವ ಮೊದಲು ಹಾರ್ದಿಕ್ ಪಾಂಡ್ಯ ಆಯ್ಕೆಯಾಗುವ ಸಂಭಾವ್ಯತೆಯ ಬಗ್ಗೆ ಹಲವು ಅನುಮಾನಗಳು ಮೂಡಿತ್ತು. ಇದಕ್ಕೆ ಅನುಗುಣವಾಗಿ ಹಾರ್ದಿಕ್ ಆಯ್ಕೆಯಾಗುವುದಿಲ್ಲ ಎಂಬ ವರದಿಗಳು ಬಂದಿದ್ದವು. ಆದರೆ ಅಂತಿಮವಾಗಿ ತಂಡ ಪ್ರಕಟವಾದಾಗ ಹಾರ್ದಿಕ್ ಆಯ್ಕೆಯಾಗಿದ್ದು ಮಾತ್ರವಲ್ಲದೆ ಉಪ ನಾಯಕನಾಗಿಯೂ ಸ್ಥಾನ ಪಡೆದಿದ್ದರು.

ಕೆಲ ದಿನಗಳ ಹಿಂದೆ ಟಿ20 ವಿಶ್ವಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಅಂತಿಮಗೊಳಿಸುತ್ತಿರುವಾಗ, ನಾಯಕ ರೋಹಿತ್ ಶರ್ಮಾ ಅಥವಾ ಅಜಿತ್ ಅಗರ್ಕರ್ ಮತ್ತು ಆಯ್ಕೆ ಸಮಿತಿಯು ಹಾರ್ದಿಕ್ ಅವರನ್ನು ತಂಡಕ್ಕೆ ಸೇರಿಸಲು ಬಯಸಿರಲಿಲ್ಲ ಎನ್ನಲಾಗಿದೆ. ನಾಯಕ ಮತ್ತು ಆಯ್ಕೆ ಸಮಿತಿಯು ತಂಡಕ್ಕೆ ಹಾರ್ದಿಕ್ ಬೇಡ ಎಂಬ ನಿರ್ಧಾರಕ್ಕೆ ಬಂದಿದ್ದರು, ಆದರೆ ‘ಒತ್ತಡ’ದ ಕಾರಣದಿಂದ ಪಾಂಡ್ಯ ಆಯ್ಕೆಯಾದರು ಎನ್ನುತ್ತಿದೆ ವರದಿ.

ಅಜಿತ್ ಅಗರ್ಕರ್ ಅವರು ‘ಒತ್ತಡ’ಕ್ಕೆ ಮಣಿಯಬೇಕಾಯಿತು. ಈ ಒತ್ತಡ ಏನು ಮತ್ತು ಯಾರಿಂದ ಬಂದಿದೆ ಎಂಬುದನ್ನು ಉಲ್ಲೇಖಿಸಲಾಗಿಲ್ಲ. ಬಿಸಿಸಿಐ ನ ಬಿಗ್ ಬಾಸ್ ಗಳು ಆಯ್ಕೆ ಸಮಿತಿಯ ಮೇಲೆ ಒತ್ತಡ ಹಾಕಿದ್ದಾರೆ ಎಂದು ನಂಬಲಾಗಿದೆ. ಬಿಸಿಸಿಐ ರೋಹಿತ್ ಶರ್ಮಾ ಬಳಿಕ ಹಾರ್ದಿಕ್ ಅವರನ್ನು ಭಾರತದ ಭವಿಷ್ಯದ ನಾಯಕನಾಗಿ ನೋಡುತ್ತಿದೆ ಎನ್ನಲಾಗಿದೆ.

ಮುಗಿಯಿತಾ ರೋಹಿತ್ ಟಿ20 ಕೆರಿಯರ್?

2022ರ ಟಿ20 ವಿಶ್ವಕಪ್ ಬಳಿಕ ಚುಟುಕು ಮಾದರಿ ಕ್ರಿಕೆಟ್ ನಿಂದ ದೂರವೇ ಉಳಿದಿದ್ದ ರೋಹಿತ್ ಶರ್ಮಾ ಅವರ ಅಂತಾರಾಷ್ಟ್ರೀಯ ಟಿ20 ಕೆರಿಯರ್ ಮುಗಿಯುವ ಹಂತದಲ್ಲಿದೆ ಎನ್ನಲಾಗಿದೆ. ಈ ಬಾರಿಯ 20 ವಿಶ್ವಕಪ್ ಅವರ ಕೊನೆಯ ಟಿ20 ಆಟವಾಗಲಿದೆ ಎನ್ನುತ್ತಿದೆ ವರದಿ. ಇದಾದ ಬಳಿಕ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎನ್ನಲಾಗಿದೆ.

37 ವರ್ಷ ವಯಸ್ಸಿನ ರೋಹಿತ್ ಅವರು 2022 ರ ನವೆಂಬರ್‌ನಿಂದ ಕೇವಲ ಮೂರು ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ ಎರಡು ಶೂನ್ಯ ಮತ್ತು ಒಂದು ಶತಕವನ್ನು ದಾಖಲಿಸಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದಲ್ಲಿ ಒಂದು ಶತಕದೊಂದಿಗೆ ಉತ್ತಮವಾಗಿ ಆಡಿದರೂ ಬಳಿಕ ಫಾರ್ಮ್ ಕೈಕೊಟ್ಟಿದೆ.

ಹಾರ್ದಿಕ್ ಜತೆಗಿನ ಮನಸ್ತಾಪ, ಅವರ ನಾಯಕತ್ವಕ್ಕೆ ಬಿಸಿಸಿಐ ಬಿಗ್ ಬಾಸ್ ಗಳ ಬೆಂಬಲ ಹೀಗೆ ಎಲ್ಲವನ್ನೂ ಗಮನಿಸಿದರೆ ಅಂತಾರಾಷ್ಟ್ರೀಯ ಟಿ20ಯಲ್ಲಿ ರೋಹಿತ್ ಗೆ ಹೆಚ್ಚಿನ ಭವಿಷ್ಯವಿಲ್ಲ ಎನ್ನಬಹುದು. ಯಾಕೆಂದರೆ ಇತ್ತೀಚೆಗೆ ಬೇರೊಂದು ಪ್ರಸಂಗವನ್ನು ಉಲ್ಲೇಖಿಸುತ್ತಾ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ‘ಬಿಸಿಸಿಐಗೆ ಯಾರೂ ಮುಖ್ಯರಲ್ಲ’ ಎಂದಿದ್ದರು!

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

Paris Paralympics; Another gold for India; Praveen Kumar won gold in high jump

Paralympics; ಭಾರತಕ್ಕೆ ಮತ್ತೊಂದು ಬಂಗಾರ; ಹೈಜಂಪ್‌ ನಲ್ಲಿ ಚಿನ್ನ ಗೆದ್ದ ಪ್ರವೀಣ್‌ ಕುಮಾರ್

Vikram Rathore; Former coach of Team India joined New Zealand team

Vikram Rathour; ನ್ಯೂಜಿಲ್ಯಾಂಡ್‌ ತಂಡ ಸೇರಿದ ಟೀಂ ಇಂಡಿಯಾ ಮಾಜಿ ಕೋಚ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.