ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

ಉತ್ತಮ ಸ್ಪಂದನೆ ದೊರೆಯುವುದು ಅನುಭವಕ್ಕೆ ಬಂದಿದೆ

Team Udayavani, May 13, 2024, 5:46 PM IST

ಗೋ ಮೂತ್ರ ಔಷಧ ಆಗರ-72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ: ಡಾ| ಜೀವನಕುಮಾರ

■ ಉದಯವಾಣಿ ಸಮಾಚಾರ
ಸಿದ್ದಾಪುರ: ತಾಲೂಕಿನ ಭಾನ್ಕುಳಿ ರಾಮದೇವಮಠದಲ್ಲಿ ನಡೆಯುತ್ತಿರುವ  ಶಂಕರಪಂಚಮೀ ಉತ್ಸವದಲ್ಲಿ ಗೋಪಾಲ ಗೌರವ ಪ್ರಶಸ್ತಿ ಪುರಸ್ಕೃತರನ್ನೊಳಗೊಂಡು ವಿಚಾರ ಸಂಕಿರಣ ಹಾಗೂ ಪ್ರಶ್ನೋತ್ತರ ಕಾರ್ಯಕ್ರಮ ನಡೆಯಿತು.ಮುಂಬೈನ ದಿನೇಶ ಶಹರಾ ಫೌಂಡೇಶನ್‌ನ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಯಮಿ ದಿನೇಶ ಶಹರಾ ಶ್ರೀರಾಮಚಂದ್ರಾಪುರ ಮಠದ ಗೋ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ದೊಡ್ಡಬಳ್ಳಾಪುರ ಘಾಟಿಸುಬ್ರಹ್ಮಣ್ಯದಲ್ಲಿ ರಾಷ್ಟ್ರೋತ್ಥಾನ ಗೋ ಶಾಲೆ ಪ್ರಾರಂಭಿಸಿ, ಗವ್ಯ ಉತ್ಪನ್ನಗಳಿಂದ ಔಷಧ ತಯಾರಿಸಿ ರೋಗಿಗಳಿಗೆ ನೀಡುತ್ತಿರುವ ಡಾ| ಜೀವನಕುಮಾರ ಮಾತನಾಡಿ, ಗೋ ಮೂತ್ರವು ಔಷಧಗಳ ಆಗರ. ಗೋ ಮೂತ್ರ ಚಿಕಿತ್ಸೆಯಿಂದ ಮನುಷ್ಯನ 72 ಸಾವಿರ ನಾಡಿಗಳ ಶುದ್ಧೀಕರಣ ಸಾಧ್ಯ. ಭವಿಷ್ಯದಲ್ಲಿ ಗೋ ಆಧಾರಿತ ಕೃಷಿ ಹಾಗೂ ಗೋ ಆಧಾರಿತ ಚಿಕಿತ್ಸೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಗದಾಂಬಾ ಮಾ ಗೋ ಪ್ರಾಡಕ್ಟ್ಸ್ ಮೂಲಕ ಗವ್ಯ‌ ಉತ್ಪನ್ನಗಳನ್ನು ತಯಾರಿಸಿ ಚಿಕಿತ್ಸೆ ನೀಡುತ್ತಿರುವ ಕಾಸರಗೋಡಿನ ನೆಕ್ಕಲಕೆರೆಯ ಸುಬ್ರಹ್ಮಣ್ಯ ಪ್ರಸಾದ ಮಾತನಾಡಿ, ಗೋವಿನ ಸೆಗಣಿಯಲ್ಲಿ ಲಕ್ಷ್ಮಿ ನೆಲೆಸಿದ್ದಾಳೆ. ಬಿಸಿಲು, ಮಳೆ, ಗಾಳಿ, ಕಸ ತಗಲದಂತೆ ಸೆಗಣಿಯನ್ನು ಸಂರಕ್ಷಿಸಿ ಅದನ್ನೇ ಮೂಲವಾಗಿಟ್ಟುಕೊಂಡು ವಿವಿಧ ರೀತಿಯ ಕಾಯಿಲೆಗಳಿಗೆ ಔಷಧ ತಯಾರಿಸಬಹುದು. ಆರ್ಥಿಕ ನಷ್ಟವಿಲ್ಲದೇ ಗೋ ಉದ್ಯಮ ನಡೆಸಬಹುದು ಎಂದರು.

ತಮ್ಮ ಪರಂಪರಾ ಗೋಕುಲಂ ಗೋ ಶಾಲೆಯಲ್ಲಿ 300 ಕ್ಕೂ ಹೆಚ್ಚು ಗೋವುಗಳನ್ನು ಸಾಕಿ ಸಲಹುತ್ತಿರುವ, ಗೋ ಆಧಾರಿತ ಕೃಷಿ, ಗವ್ಯ ಉತ್ಪನ್ನ ತಯಾರಿಕೆಯಲ್ಲಿ ಹೆಸರು ಮಾಡಿರುವ ಕೇರಳ ಕಾಸರಗೋಡಿನ ಪೆರಿಯದ ನಾಗರತ್ನಾ ವಿಷ್ಣು ಹೆಬ್ಬಾರ ಮಾತನಾಡಿ, ಹಸುಗಳೂ ಸಹ ಸಂಗೀತವನ್ನು ಆಸ್ವಾದಿಸುತ್ತವೆ. ಈ ಹಿನ್ನೆಲೆಯಲ್ಲಿ ಪ್ರತಿ ತಿಂಗಳೂ ನಮ್ಮ ಗೋಶಾಲೆಯಲ್ಲಿ ಒಂದು ದಿನ ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದೇವೆ. ನಾವು ನಂಬಿರುವ ಗೋ ಮಾತೆ ನಮ್ಮ ಕೈ ಬಿಟ್ಟಿಲ್ಲ ಎಂದರು.

ಮಹಾವೀರ ಲಿಂಬ್‌ ಸೆಂಟರ್‌ ಸ್ಥಾಪಕರಾಗಿ ವಿಕಲಚೇತನರಿಗೆ ಈವರೆಗೆ ಸುಮಾರು 50 ಸಾವಿರಕ್ಕೂ ಮಿಕ್ಕಿ ಕೃತಕ ಕಾಲುಗಳನ್ನು ಉಚಿತವಾಗಿ ಪೂರೈಸಿದ್ದಲ್ಲದೇ, ಇತ್ತೀಚಿನ ವರ್ಷಗಳಲ್ಲಿ ಅಪಘಾತಗಳಲ್ಲಿ ಕಾಲು ಕಳೆದುಕೊಂಡ ಹಸುಗಳಿಗೂ ಕೃತಕ ಕಾಲುಗಳನ್ನು ತಯಾರಿಸಿ ಉಚಿತವಾಗಿ ಪೂರೈಸುತ್ತಿರುವ ಹುಬ್ಬಳ್ಳಿಯ ಸಮಾಜ ಸೇವಕ ಮಹೇಂದ್ರ ಹಸ್ತಿಮಲ್‌ಜಿ ಸಿಂಘಿ ಮಾತನಾಡಿ, ಹಸುಗಳಿಗೆ ಕೃತಕ ಕಾಲುಗಳನ್ನು ಪೂರೈಸುವಲ್ಲಿ ನಮ್ಮ ಸಂಘಟನೆ ಸದಾ ಸಿದ್ಧವಿದೆ. ನಮ್ಮನ್ನು ಸಂಪರ್ಕಿಸಿದಲ್ಲಿ ನಮ್ಮ ಜನರೇ ಬಂದು ಗೋವಿನ ಕಾಲಿನ ಅಳತೆ ತೆಗೆದುಕೊಂಡು ಕೃತಕ ಕಾಲು ತಯಾರಿಸಿ, ಉಚಿತವಾಗಿ ಪೂರೈಸುತ್ತೇವೆ. ನೀಡಿರುವ ಕೃತಕ ಕಾಲು ಸರಿಯಾಗಿ ಕೆಲಸ ಮಾಡುತ್ತಿದೆಯೋ ಇಲ್ಲವೋ ತಿಳಿಸಿ ಎಂದರು.

ಗೋ ಆಧಾರಿತ ಕೃಷಿ ಜತೆಯಲ್ಲಿ ಸಾವಯವ ಕೃಷಿ ತಜ್ಞರಾಗಿ ನಾಡಿನೆಲ್ಲೆಡೆ ಮಾರ್ಗದರ್ಶನ ನೀಡುತ್ತಿರುವ ಬೈಲಹೊಂಗಲದ ಬಾಬುರಾವ್‌ ಪಾಟೀಲ ಮಾತನಾಡಿ, ಗೋ ಆಧಾರಿತ ಕೃಷಿ, ಜೀವಾಮೃತ ಬಳಕೆಯಿಂದ ಹೆಚ್ಚಿನ ಇಳುವರಿ ಪಡೆಯಬಹುದು. ನಾವು ನಡೆಸುತ್ತಿರುವ ಕೃಷಿಯ ಜತೆಯಲ್ಲಿ ನಾವು ಬೆಳೆಯುತ್ತಿರುವ ಗಿಡಮರ, ಸಸಿಗಳೊಂದಿಗೆ ಸಂವಹನ ನಡೆಸಬೇಕು. ಇದರಿಂದಲೂ ಉತ್ತಮ ಸ್ಪಂದನೆ ದೊರೆಯುವುದು ಅನುಭವಕ್ಕೆ ಬಂದಿದೆ ಎಂದರು.

ದಿನೇಶ ಶಹರಾ ಫೌಂಡೇಶನ್‌ನ ಮೀರಾಜಿ ಮಾತನಾಡಿದರು. ಕಾಮದುಘಾ ಟ್ರಸ್ಟಿನ ಪ್ರಮುಖ ಡಾ| ವೈ.ವಿ. ಕೃಷ್ಣಮೂರ್ತಿ ಮಾತನಾಡಿದರು. ಸಾರ್ವಜನಿಕರು ಸಂಪನ್ಮೂಲ ವ್ಯಕ್ತಿಗಳಲ್ಲಿ ಪ್ರಶ್ನೆಗಳನ್ನು ಕೇಳಿ, ಉತ್ತರ ಪಡೆದು ಸಂಶಯ ನಿವಾರಿಸಿಕೊಂಡರು.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Buffellow

Kumata: ಅಕ್ರಮವಾಗಿ ಸಾಗಿಸುತ್ತಿದ್ದ 27 ಎಮ್ಮೆಗಳ ರಕ್ಷಣೆ; ನಾಲ್ವರ ಬಂಧನ

19-sirsi

Sirsi: ದೇಶಾಪಂಡೆ, ಕಾಗೇರಿ ಅವರ ಭಾಷಣ ಶೈಲಿ ಬದಲಾಗಿದೆ ಅಂದಿದ್ದು ಯಾಕೆ?

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

Dandeli: ಬೀದಿನಾಯಿ ದಾಳಿ.. ಬಾಲಕನಿಗೆ ಗಾಯ: ಬೀದಿನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕರ ಆಗ್ರಹ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.