Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ
ಅದಾನಿ ಮತ್ತು ಅಂಬಾನಿ ಅವರನ್ನು ಬಂಧಿಸಲು ಧೈರ್ಯ ತೋರಿ
Team Udayavani, May 13, 2024, 5:57 PM IST
ಹಜಾರಿಬಾಗ್: ”ಈ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೆದ್ದರೆ ಭವಿಷ್ಯದಲ್ಲಿ ಯಾವುದೇ ಚುನಾವಣೆಗಳು ನಡೆಯುವುದಿಲ್ಲ. ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಅಪಾಯವಿದೆ” ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಆರೋಪಿಸಿದ್ದಾರೆ.
ಜಾರ್ಖಂಡ್ನ ಹಜಾರಿಬಾಗ್ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಮಾಜಿ ಸಿಎಂ ಹೇಮಂತ್ ಸೋರೆನ್ ಬಂಧನದ ಬಗ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿ, ಅದಾನಿ ಮತ್ತು ಅಂಬಾನಿ ಅವರನ್ನು ಬಂಧಿಸಲು ಧೈರ್ಯ ತೋರಿ ಎಂದು ಸವಾಲು ಎಸೆದರು.
“ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ಜನರು ಅಪಾಯದಲ್ಲಿದ್ದಾರೆ. ನಿಮಗೆ ಮೂಲಭೂತ ಹಕ್ಕುಗಳಿಲ್ಲದಿದ್ದರೆ, ನೀವು ಗುಲಾಮರಾಗುತ್ತೀರಿ” ಎಂದು ತೀವ್ರ ವಾಗ್ದಾಳಿ ನಡೆಸಿದರು.
ಮೈತ್ರಿಕೂಟ ಅಧಿಕಾರಕ್ಕೆ ತಂದರೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರದಿಂದ ಬಂಧನಕ್ಕೊಳಗಾಗಿದ್ದ ಇಂಡಿಯಾ ಮೈತ್ರಿಕೂಟದ ಎಲ್ಲ ನಾಯಕರನ್ನು ಮುಕ್ತಗೊಳಿಸಲಾಗುವುದು ಎಂದು ಖರ್ಗೆ ಹೇಳಿದರು.
ಚುನಾವಣ ಬಾಂಡ್ ಮೂಲಕ ಬಿಜೆಪಿಗೆ ದೇಣಿಗೆ ನೀಡಿದವರು ಪ್ರಮುಖ ಗುತ್ತಿಗೆ ಪಡೆದಿದ್ದಾರೆ ಎಂದು ಖರ್ಗೆ ಆರೋಪಿಸಿ, ಈ ಬಾರಿ ಮೋದಿ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.