Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಬೆಳೆದದ್ದೂ ಒಣಗಿದೆ; ಸಕ್ಕರೆ, ಬೆಲ್ಲದ ದರ ಹೆಚ್ಚಳ ಸಾಧ್ಯತೆ

Team Udayavani, May 14, 2024, 7:30 AM IST

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

ಮಂಡ್ಯ/ಬೆಳಗಾವಿ: ಭೀಕರ ಬರ ಹಾಗೂ ನೀರಿನ ಕೊರತೆಯು ರಾಜ್ಯದ ಕಬ್ಬು ಬೆಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ರಾಜ್ಯದಲ್ಲಿ ಮುಂಬರುವ ಕಬ್ಬು ಹಂಗಾಮಿನಲ್ಲಿ ಉತ್ಪಾದನೆ ಶೇ.30ರಷ್ಟು ಕುಸಿತವಾಗಲಿದೆ ಮಾತ್ರವಲ್ಲದೆ, ನೀರಿನ ಅಭಾವದಿಂದಾಗಿ ಬೇಸಗೆ ಹಂಗಾಮಿನಲ್ಲಿ ಕಬ್ಬು ಬೆಳೆ ನಿರೀಕ್ಷಿತ ಮಟ್ಟದಲ್ಲಿ ಬಿತ್ತನೆಯಾಗದ ಕಾರಣ ಈ ಬಾರಿ ಕಬ್ಬು ಅರೆಯುವಿಕೆಗೆ ಕಾರ್ಖಾನೆಗಳಿಗೆ ಕಬ್ಬಿನ ಬರ ಕಾಡಲಿದೆ.

ನೀರು ಗಣನೀಯವಾಗಿ ಕಡಿಮೆಯಾದ ಕಾರಣ ರಾಜ್ಯದಲ್ಲಿ ಬರುವ ಹಂಗಾಮಿನಲ್ಲಿ ಸುಮಾರು 80 ಲಕ್ಷ ಮೆಟ್ರಿಕ್‌ ಟನ್‌ ಕಬ್ಬು ಉತ್ಪಾದನೆ ಕಡಿಮೆ ಆಗಲಿದೆ ಎಂದು ಅಂದಾಜಿಸಲಾಗಿದೆ.

2022-24ರಲ್ಲಿ ರಾಜ್ಯದಲ್ಲಿ 6.60 ಕೋಟಿ ಮೆಟ್ರಿಕ್‌ ಟನ್‌ ಕಬ್ಬು ನುರಿಸಲಾಗಿತ್ತು. ಈ ವರ್ಷ ಕಳೆದ ಹಂಗಾಮಿನಲ್ಲಿ 5.70 ಕೋಟಿ ಮೆಟ್ರಿಕ್‌ ಟನ್‌ ಕಬ್ಬು ನುರಿಸಲಾಗಿದೆ. ಬರುವ ಹಂಗಾಮಿನಲ್ಲಿ ಸುಮಾರು 80 ಲಕ್ಷ ಮೆಟ್ರಿಕ್‌ ಟನ್‌ ಕಡಿಮೆಯಾಗಲಿದೆ.

28 ಸಕ್ಕರೆ ಕಾರ್ಖಾನೆಗಳನ್ನು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಹಂಗಾಮಿನಲ್ಲಿ 2.25 ಕೋಟಿ ಮೆಟ್ರಿಕ್‌ ಟನ್‌ ಕಬ್ಬು ನುರಿಸಲಾಗಿತ್ತು. ಈಗ ಬರಗಾಲದ ಕಾರಣ ಸಾಕಷ್ಟು ಕಬ್ಬು ಒಣಗಿ ಹೋಗಿದ್ದು, ಸುಮಾರು 1.50ರಿಂದ 1.70 ಕೋಟಿ ಮೆಟ್ರಿಕ್‌ ಟನ್‌ ಕಬ್ಬು ನುರಿಸಬಹುದು ಎಂಬುದು ರೈತ ಮುಖಂಡರ ಅಭಿಪ್ರಾಯ.

ಮಂಡ್ಯ ಜಿಲ್ಲೆಯಲ್ಲೂ ಐದು ಕಾರ್ಖಾನೆಗಳಿವೆ. ಮೈಷುಗರ್‌ ಕಾರ್ಖಾನೆ ಹೊರತುಪಡಿಸಿ ಉಳಿದೆಲ್ಲ ಕಾರ್ಖಾನೆಗಳು ಪ್ರತಿವರ್ಷ 5 ಲಕ್ಷಕ್ಕೂ ಹೆಚ್ಚು ಟನ್‌ ಕಬ್ಬು ಅರೆಯುತ್ತಿದ್ದವು. ಆದರೆ ಈ ಬಾರಿ ಎಲ್ಲ ಕಾರ್ಖಾನೆಗಳಿಗೂ ಕಬ್ಬು ಸಿಗದಂತಾಗಿದೆ.

ಶೇ.80ರಷ್ಟು ಕಬ್ಬಿನ ಕೊರತೆ
2024-25ನೇ ಸಾಲಿನಲ್ಲಿ ಕಾರ್ಖಾನೆಗಳಿಗೆ ಶೇ.80ರಷ್ಟು ಕಬ್ಬಿನ ಕೊರತೆ ಉಂಟಾಗಿದೆ. ಭೀಕರ ಬರ ಹಾಗೂ ನೀರಿನ ಕೊರತೆಯಿಂದ ಕಬ್ಬು ಬೆಳೆ ಬಿತ್ತನೆಯಾಗಿಲ್ಲ. ಬೆಳೆದಿದ್ದ ಕಬ್ಬು ಕೂಡ ಬರದಿಂದ ಒಣಗಿದೆ.

ಸಕ್ಕರೆ, ಬೆಲ್ಲದ ದರ ಹೆಚ್ಚಳ ಸಾಧ್ಯತೆ
ಈ ಬಾರಿ ಕಾರ್ಖಾನೆಗಳಿಗೆ ಸಮರ್ಪಕವಾಗಿ ಕಬ್ಬು ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ ಸಕ್ಕರೆ ಉತ್ಪಾದನೆ ಕಡಿಮೆಯಾಗಲಿದೆ. ಇದರಿಂದ ಸಕ್ಕರೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಜತೆಗೆ ಆಲೆಮನೆಗಳಿಗೂ ಕಬ್ಬೇ ಇಲ್ಲದಂತಾಗಿದೆ. ಇದರಿಂದ ಬೆಲ್ಲದ ಉತ್ಪಾದನೆಯೂ ಕುಸಿದು ದರವೂ ಹೆಚ್ಚಾಗುವ ಸಾಧ್ಯತೆ ಇದೆ.

– ಎಚ್‌. ಶಿವರಾಜು/ ಕೇಶವ ಆದಿ

 

 

ಟಾಪ್ ನ್ಯೂಸ್

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.