Hassan ಒಂದೂವರೆ ಲಕ್ಷ ಜನರ ಮೊಬೈಲ್ನಲ್ಲಿ ವೀಡಿಯೋ ಇದೆ: ಪ್ರೀತಂ
ಪ್ರಜ್ವಲ್ ಕೇಸ್ನಲ್ಲಿ ನಾನು ಅಂಪೈರ್ ಅಲ್ಲ, ಪ್ರತಿಕ್ರಿಯೆ ಕೊಡುವುದಿಲ್ಲ
Team Udayavani, May 13, 2024, 11:49 PM IST
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದು, ಈ ಪ್ರಕರಣದಲ್ಲಿ ನಾನು ಅಂಫೈರ್ ಅಲ್ಲ, ಪ್ರತಿಕ್ರಿಯೆ ಕೊಡುವುದಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾ ಡಿದ ಅವರು, ಎಸ್ಐಟಿ ತನಿಖೆ ನಡೆಯುತ್ತಿರುವಾಗ ಅದರ ಬಗ್ಗೆ ಮಾತನಾಡುವುದು ಸಮಂಜಸ ಅಲ್ಲ. ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಕಾದು ನೋಡೋಣ. ನಾನು ಯಾವುದರ ಬಗ್ಗೆಯೂ ಮಾತನಾಡುವುದಿಲ್ಲ. ಬಂಧಿತರು ನನ್ನ ಆಪ್ತರಲ್ಲ ಎಂದರು.
ಕಾರ್ಯಕರ್ತರ ಪ್ರಶ್ನೆ ಬಂದಾಗ ನಾನು ಬೆನ್ನು ತೋರಿಸಿ ಹೋಗುವುದಿಲ್ಲ. ನಿನ್ನೆ ಬಂಧಿತರಾದವರು ಅಮಾಯಕರು. ನಮಗೂ ವೀಡಿಯೋಗೂ ಸಂಬಂಧ ಇಲ್ಲ. ಪೆನ್ಡ್ರೈವ್ ಇದೆ, ವೀಡಿಯೋ ಇದೆ ಅಂತ ವಶಕ್ಕೆ ತೆಗೆದುಕೊಳ್ಳುವುದಾದರೆ ಹಾಸನದಲ್ಲಿ ಅಂತಹ 1.5 ಲಕ್ಷ ಜನರನ್ನು ವಶಕ್ಕೆ ಪಡೆಯಬೇಕಾಗುತ್ತದೆ. ಒಂದೂವರೆ ಲಕ್ಷ ಜನರ ಮೊಬೈಲ್ಗಳಲ್ಲಿ ವೀಡಿಯೋ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಂದು ವರ್ಷದಿಂದಲೇ ವೀಡಿಯೋ ಹರಿದಾಡುತ್ತಿದೆ ಎಂದು ಹೇಳುತ್ತಿದ್ದರು. ಒಂದು ವರ್ಷದ ಹಿಂದೆಯೇ ಕ್ರಮ ಕೈಗೊಳ್ಳಬೇಕಿತ್ತು. ಈಗ ಚರ್ಚೆ ಮಾಡಿದರೆ ಏನು ಪ್ರಯೋಜನ? ಸಂತ್ರಸ್ತರ ಬಗ್ಗೆಯೂ ಯೋಚಿಸಬೇಕು. ಎ. 23 ರಂದು ಲಾಯರ್ ಪೆನ್ಡ್ರೈವ್ ತಂದು ಕೊಟ್ಟರು. ಹಾಗಂತ ಆ ಲಾಯರ್ ಮೇಲೆ ಕೇಸ್ ಹಾಕಲಾಗುತ್ತದೆಯೇ? ಈ ವಿಚಾರದಲ್ಲಿ ಅಮಾಯಕರು ಬಂಧನ ಆಗಬಾರದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.