![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು
ಪ್ರಕರಣಕ್ಕೂ ನನಗೂ ಸಂಬಂಧವಿಲ್ಲದಿದ್ದರೂ ಸಿಲುಕಿಸಿದ್ದಾರೆ; ಆ ಮಹಿಳೆ ಜತೆ ಮಾತನಾಡದೆ 6 ವರ್ಷವಾಯಿತು
Team Udayavani, May 13, 2024, 11:57 PM IST
![ಏನು ತಪ್ಪು ಮಾಡದಿದ್ದರೂ ಶಿಕ್ಷೆ: ಜಿಟಿಡಿ ಮುಂದೆ ರೇವಣ್ಣ ಕಣ್ಣೀರು](https://www.udayavani.com/wp-content/uploads/2024/05/HD-Revanna-5-620x349.jpg)
ಬೆಂಗಳೂರು: ಮಹಿಳೆ ಅಪಹರಣ ಆರೋಪದಡಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರ ಎದುರು ಕಣ್ಣೀರಿಟ್ಟಿದ್ದಾರೆ.
ಸೋಮವಾರ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ರೇವಣ್ಣ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಇದನ್ನು ಖುದ್ದು ಜಿ.ಟಿ.ದೇವೇಗೌಡರೇ ತಿಳಿಸಿದರು.
ರೇವಣ್ಣರನ್ನು ಭೇಟಿಯಾಗಿ ಆರೋಗ್ಯ ಕುಶಲೋಪರಿ ವಿಚಾರಿಸಬೇಕು, ಮಾತನಾಡಿಸಬೇಕು ಎಂದು ಮನಸ್ಸಿನಲ್ಲಿತ್ತು. ಸೋಮವಾರ ಅನುಮತಿ ಸಿಕ್ಕಿದ್ದರಿಂದ ಭೇಟಿ ಮಾಡಿದ್ದೇನೆ. ಅವರದ್ದು ಈಗ ಪ್ರಶ್ನೆ – ನಾನು ಏನು ತಪ್ಪು ಮಾಡಿದ್ದೇನೆ? ಆಯಮ್ಮನ ಜತೆ ಮಾತನಾಡದೆ 6 ವರ್ಷಗಳಾದವು. ನನಗೂ ಈ ಪ್ರಕರಣಕ್ಕೂ ಸಂಬಂಧವೇ ಇಲ್ಲ. ನನ್ನನ್ನು ಇದರಲ್ಲಿ ಸಿಲುಕಿಸಿ ಹೀಗೆ ಮಾಡಿದ್ದಾರೆ. ಏನೂ ತಪ್ಪು ಮಾಡದೆ ಈ ಶಿಕ್ಷೆ ಕೊಟ್ಟುಬಿಟ್ಟರಲ್ಲ ಎಂದು ಕೊರಗಿದರು. ಇದನ್ನೇ ನೆನಪಿಸಿಕೊಂಡು ಮನಸ್ಸಿಗೆ ದುಃಖವಾಗುತ್ತದೆ ಎಂದು ಕಣ್ಣೀರಿಟ್ಟರು ಎಂದು ವಿವರಿಸಿದರು.
ಅಭಿವೃದ್ಧಿ ಕಾಮಗಾರಿ ಬಗ್ಗೆಯೇ ಚಿಂತೆ
ನಾನು ಒಳ ಹೋದಾಗ ರೇವಣ್ಣ ಅವರು ಆರಾಮವಾಗಿ ಕುಳಿತಿದ್ದರು. ಇಬ್ಬರೂ ಚಹಾ ಕುಡಿದೆವು. ಹಳೆಯ ವಿಷಯಗಳನ್ನೆಲ್ಲ ಮಾತನಾಡಿದರು. ಅವರಿಗೆ ಇಂದಿಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚಿಂತೆ. ರಾಜಕೀಯ ವಿಚಾರಗಳೂ ಚರ್ಚೆಗೆ ಬಂತು. ನಾವು ಎಲ್ಲೆಲ್ಲಿ ಎಡವಿದ್ದೇವೆ? ಸರಕಾರ ಇದ್ದ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರಿಗೆ ಏನೂ ಮಾಡಲಿಲಾಗಲಿಲ್ಲ. ಅಧಿಕಾರ ಇದ್ದಾಗ ಮಂತ್ರಿ ಮಾಡಿದವರೆಲ್ಲ ಪಕ್ಷ ಬಿಟ್ಟು ಹೋದರು. ನೀವು ಸಹಿತ ಹಲವರು ದೇವೇಗೌಡರಿಗಾಗಿ ಉಳಿದುಕೊಂಡು ಒಳ್ಳೆಯ ಕೆಲಸ ಮಾಡಿದಿರಿ ಎಂದು ಹೇಳಿದರು ವಿವರಿಸಿದರು.ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜುನಾಥ್ ಹಾಗೂ ಶಾಸಕ ಮಂಜು ಅವರು ಕೂಡ ರೇವಣ್ಣ ಭೇಟಿಗಾಗಿ ಬಂದಿದ್ದರು.
ಟಾಪ್ ನ್ಯೂಸ್
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-415x238.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
MUST WATCH
ಹೊಸ ಸೇರ್ಪಡೆ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
![1-sadasd](https://www.udayavani.com/wp-content/uploads/2024/06/1-sadasd-3-150x97.jpg)
Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-150x79.jpg)
T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.