Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

ಭಾರತೀಯ ಸಿನಿರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾ

Team Udayavani, May 14, 2024, 8:49 AM IST

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

ಮುಂಬಯಿ: ನಿತೇಶ್‌ ತಿವಾರಿ ಅವರ ʼರಾಮಾಯಣʼ ಸಿನಿಮಾದ ಮೇಲಿನ ಕುತೂಹಲ ಹೆಚ್ಚಾಗಿದೆ. ಬಜೆಟ್‌, ಕಲಾವಿದರು.. ಹೀಗೆ ನಾನಾ ವಿಚಾರದಲ್ಲಿ ಪ್ಯಾನ್‌ ಇಂಡಿಯಾ ʼರಾಮಾಯಣʼ ದೊಡ್ಡಮಟ್ಟದಲ್ಲೇ ಸುದ್ದಿ ಆಗುತ್ತಿದೆ.

ಭಾರತೀಯ ಸಿನಿಮಾದಲ್ಲಿ ಹೊಸ ರೀತಿಯಲ್ಲಿ ದಾಖಲೆ ಬರೆಯಲು ʼರಾಮಾಯಣʼ ಸಿದ್ದವಾಗಿದೆ. ಇತ್ತೀಚೆಗಷ್ಟೇ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ ಎನ್ನಲಾಗಿದೆ. ಚಿತ್ರೀಕರಣದ ಸಂದರ್ಭದಲ್ಲಿ ʼರಾಮ – ಸೀತೆʼಯಾಗಿ ಕಾಣಿಸಿಕೊಂಡಿದ್ದ ರಣ್ಬೀರ್‌ – ಸಾಯಿಪಲ್ಲವಿ ಅವರ ಫೋಟೋಗಳು ಲೀಕ್‌ ಆಗಿದ್ದವು.

ಸಿನಿಮಾವನ್ನು ಬಾಲಿವುಡ್ ನಿರ್ಮಾಪಕ ನಮಿತ್ ಮಲ್ಹೋತ್ರಾ – ನಟ ಯಶ್ ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ದೊಡ್ಡಮಟ್ಟದ ಸಿನಿಮಾವಾಗಿರಲಿದೆ. ಮೂಲಗಳ ಪ್ರಕಾರ ʼರಾಮಾಯಣʼ ಮೂರು ಭಾಗಗಳಲ್ಲಿ ಬರಲಿದೆ. ಮೊದಲ ಭಾಗ ರಿಲೀಸ್‌ ಆಗಲು ಎರಡು ವರ್ಷಗಳು ಬೇಕಿದೆ. ಅಂದರೆ 2026 ರಲ್ಲಿ ʼರಾಮಾಯಣʼ ದೊಡ್ಡ ಪರದೆಗೆ ಅಪ್ಪಳಿಸಲಿದೆ.

ಮೊದಲೇ ಹೇಳಿದಾಗೆ ಇದೊಂದು ಬಿಗ್‌ ಬಜೆಟ್‌ ಸಿನಿಮಾ. ಆದರೆ ಇದೀಗ ಬಂದಿರುವ ಲೇಟೆಸ್ಟ್‌ ವರದಿಗಳ ಪ್ರಕಾರ ಇದು ಬರೀ ಬಿಗ್‌ ಬಜೆಟ್‌ ಸಿನಿಮಾ ಮಾತ್ರವಲ್ಲದೆ ಭಾರತೀಯ ಸಿನಿಮಾರಂಗದಲ್ಲೇ ಅತ್ಯಂತ ದುಬಾರಿ ಸಿನಿಮಾವಾಗಿರಲಿದೆ.

ʼರಾಮಾಯಣ: ಭಾಗ -1ʼ ಕ್ಕಾಗಿ ನಿರ್ಮಾಪಕರು ಬರೋಬ್ಬರಿ 835 ಕೋಟಿ ರೂಪಾಯಿಯ ಬಂಡವಾಳವನ್ನು ಹಾಕಲಿದ್ದಾರೆ. ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ಗಾಗಿ 600 ದಿನ ಮೀಸಲಿಡಲು ಮುಂದಾಗಿದ್ದಾರೆ ಎಂದು ʼಬಾಲಿವುಡ್‌ ಹಂಗಾಮʼ ಮೂಲಗಳನ್ನು ಆಧಾರಿಸಿ ವರದಿ ಮಾಡಿದೆ.

“ರಾಮಾಯಣವು ಕೇವಲ ಚಲನಚಿತ್ರವಲ್ಲ. ಅದೊಂದು ಭಾವನೆಯಾಗಿದೆ. ಅದನ್ನು ಜಾಗತಿಕ ಚಮತ್ಕಾರವನ್ನಾಗಿಸಲು ತಯಾರಕರು ಯಾವುದೇ ರೀತಿಯಲ್ಲಿ ಹಿಂದೇಟು ಹಾಕುತ್ತಿಲ್ಲ” ಎಂದು ಮೂಲಗಳು ತಿಳಿಸಿವೆ ಎಂದು ವರದಿ ಮಾಡಿದೆ.

ಸಿನಿಮಾದ ಫ್ರಾಂಚೈಸ್ ಮುಂದೆ ಹೋಗುತ್ತಿದ್ದಂತೆ ಈ ಬಜೆಟ್‌ ನ್ನು ವಿಸ್ತರಣೆ ಮಾಡಲು ಅವರು ಯೋಜಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮೂಲಗಳ ಪ್ರಕಾರ ನಮಿತ್ ಮಲ್ಹೋತ್ರಾ  ಹಾಗೂ ಯಶ್‌ ಬಜೆಟ್‌ ನಲ್ಲಿ 50-50 ಬಂಡವಾಳ ಹಾಕಲಿದ್ದಾರೆ. ಆ ಮೂಲಕ ಯಶ್‌ ʼರಾಮಾಯಣʼ ಕ್ಕಾಗಿ 400 ಕೋಟಿ ಬಂಡವಾಳ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ಪಾತ್ರವರ್ಗದತ್ತ ಗಮನ ಹರಿಸಿದರೆ ರಣ್ಬೀರ್‌ ಕಪೂರ್‌, ಸಾಯಿಪಲ್ಲವಿ ಜೊತೆಗೆ ರಾವಣನಾಗಿ ಯಶ್, ಕೈಕೇಯಿ ಆಗಿ ಲಾರಾ ದತ್ತಾ, ಹನುಮಂತನಾಗಿ ಸನ್ನಿ ಡಿಯೋಲ್, ವಿಭೀಷಣ ಆಗಿ ವಿಜಯ್ ಸೇತುಪತಿ, ಶೂರ್ಪನಕಿಯಾಗಿ ರಕುಲ್ ಪ್ರೀತ್ ಸಿಂಗ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ಜೊತೆ ಹಲವು ಖ್ಯಾತ ನಟರ ಹೆಸರು ಕೂಡ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Actor Siddique: ಬಂಧನದ ಭೀತಿಯಿಂದ ತಲೆ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

5

ಶಂಕರ್‌ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.