Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!


Team Udayavani, May 14, 2024, 10:21 AM IST

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಹಣ್ಣಿನ ರಾಜ ಮಾವು ಲಗ್ಗೆಯಿಟ್ಟಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರ ಜೋರಾಗಿದೆ. ಹೊರ ರಾಜ್ಯದ ಶೇ.70 ಮಾವು ಸಿಲಿಕಾನ್‌ ಸಿಟಿಯ ಮಾರುಕಟ್ಟೆಯನ್ನು ತಲುಪಿದೆ. ನಗರದ ವಿವಿಧ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿರುವ ವಿವಿಧ ತಳಿಯ ಮಾವಿನ ಹಣ್ಣುಗಳು ಗ್ರಾಹಕರನ್ನು ಸೆಳೆಯುತ್ತಿವೆ.

ಏಪ್ರಿಲ್‌ 2ನೇ ವಾರದಲ್ಲಿ ಆಗಮಿಸ ಬೇಕಾದ ಮಾವು 15 ದಿನ ತಡವಾಗಿ ಮರುಕಟ್ಟೆಯನ್ನು ಪ್ರವೇಶಿಸಿದೆ. ದುಬಾರಿಯಾದರೂ ಪರವಾಗಿಲ್ಲ ಮಾವಿನ ಹಣ್ಣನ್ನು ಸವಿಬೇಕು ಎನ್ನುವ ಕಾತುರದಲ್ಲಿ ಜನರಿದ್ದಾರೆ.

ಹೊರರಾಜ್ಯ ದರ್ಬಾರ್‌: ಪ್ರಸಕ್ತವಾಗಿ ರಾಜ್ಯದಲ್ಲಿ ಮಾವಿನ ಆಫ್ ಸೀಜನ್‌ ಇದೆ. ಜತೆಗೆ ಉಷ್ಣಾಂಶದಲ್ಲಿನ ವ್ಯತ್ಯಾಸದಿಂದ ಮಾವು ಇಳುವರಿಯಲ್ಲಿ ಶೇ.50 ಕುಂಠಿತ ವಾಗಿದೆ. ಇನ್ನೂ ಕೆಲವಡೆ ಮಾವು ತಡವಾಗಿ ಕಾಯಿ ಕಚ್ಚಿರುವುದರಿಂದ ಮಾರುಕಟ್ಟೆಗೆ ಬರಲು ಇನ್ನೆರಡು ವಾರಗಳು ಬೇಕು. ಇದೀಗ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ಇತರೆಡೆಗಳಿಂದ ಬಂದಿರುವ ಮಾವು ಮಾರುಕಟ್ಟೆಯಲ್ಲಿ ಲಭ್ಯವಿದೆ. ಮುಂದಿನ ಎರಡು ವಾರದಲ್ಲಿ ಕರ್ನಾಟಕದ ಮಾವು ಪೂರ್ಣ ಪ್ರಮಾಣದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಕಡಿಮೆ ಸಿಹಿ-ಕಡು ಬಣ್ಣ: ಮಾರುಕಟ್ಟೆಯಲ್ಲಿ ಪ್ರಸ್ತುತ ಲಭ್ಯವಿರುವ ಶೇ.70 ಮಾವಿನ ಹಣ್ಣಿನಲ್ಲಿ ಸಿಹಿ ಪ್ರಮಾಣ ಕಡಿಮೆಯಿದೆ. ಆದರೆ, ಬಣ್ಣ ಹಾಗೂ ಪರಿಮಳ ಮಾತ್ರ ಗಾಢವಾಗಿದೆ. ಮಳೆಯ ಮುನ್ಸೂಚನೆ ಹಾಗೂ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತದೆ ಎನ್ನುವ ನಿಟ್ಟಿನಲ್ಲಿ ಎಳೆಯ ಕಾಯಿ ಕಟಾವು ಮಾಡಿ, ರಾಸಾಯನಿಕ ಬಳಸಿ ಹಣ್ಣು ಮಾಡಲಾಗುತ್ತದೆ. ಇದರಿಂದಾಗಿ ಮಾವಿನ ಹಣ್ಣಿನಲ್ಲಿ ಸಿಹಿ ಅಂಶ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಯಾವೆಲ್ಲಾ ಹಣ್ಣುಗಳು ಬಂದಿವೆ?: ಪ್ರಸ್ತುತ ಸಿಂಧೂರಿ, ರಸಪೂರಿ, ಬಾದಾಮಿ, ಮಲ್ಗೊàವಾ, ತೋತಾಪುರಿ, ರಸಪುರಿ, ಮಲ್ಲಿಕಾ, ಆಪೂಸ್‌, ನೀಲಂ, ಆಮ್ರಪಾಲಿ, ಕೇಸರ್‌, ರಸ್‌ಪೂರಿ ಸೇರಿದಂತೆ ವಿವಿಧ ತಳಿಯ ಮಾವು ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೊರ ರಾಜ್ಯದಿಂದ ಬಂದಿರುವ ಮಾವಿನ ಪ್ರಮಾಣ ಶೇ.30ರಷ್ಟು ಕಡಿಮೆ ಇದೆ.

ಬೇಡಿಕೆ- ಬೆಲೆ ಏರಿಕೆ!: ಪ್ರಸ್ತುತ ಮಾರುಕಟ್ಟೆಯಲ್ಲಿ ಮಾವಿನ ಬೇಡಿಕೆ ಹೆಚ್ಚಿದೆ. ಬೇಡಿಕೆಗೆ ತಕ್ಕಂತೆ ಮಾವು ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆಯಲ್ಲಿ ಏರಿಕೆಯಾಗಿದೆ. ಕಳೆದ ವರ್ಷ ಒಂದು ಟನ್‌ ಬಾದಾಮಿಗೆ 20 ಸಾವಿರ ರೂ. ಇತ್ತು. ಆದರೆ ಈ ಬಾರಿ 40 ರಿಂದ 45 ಸಾವಿರ ರೂ.ಗೆ ಏರಿಕೆಯಾಗಿದೆ. ಇದೀಗ ಮಾರುಕಟ್ಟೆಯಲ್ಲಿ ರಸಪುರಿ 150 ರೂ., ಬಾದಾಮಿ 200 ರೂ., ಮಲ್ಲಿಕಾ 250 ರೂ., ಅಲ್ಫಾ 180 ರೂ., ಬಾಗೈನ್ಪಲ್ಲಿ 150 ರೂ., ಅಲ್ಫಾನ್ಸೋ 300 ರೂ., ಮಾಲ್ಗೊàಬಾ 350 ರೂ., ತೋಪಾಪುರಿ 100 ರೂ. ಹಾಗೂ ಇತರೆ ಮಾವಿನ ಹಣ್ಣು ಒಂದು ಕೆ.ಜಿ.ಗೆ ಕನಿಷ್ಠ 100ರಿಂದ 500 ರೂ. ವರೆಗೆ ದರ ನಿಗದಿಯಾಗಿದೆ.

ಮಾವಿನ ಹಣ್ಣಿನಿಂದ ಮಾಡುವ ಐಸ್ಕ್ರೀಂ, ಜ್ಯೂಸ್‌, ತಿಂಡಿ- ತಿನಿಸು, ಮಾವಿನ ಹಣ್ಣಿನ ಗೊಜ್ಜು, ಹುಳಿ ಸಾರು ಸೇರಿದಂತೆ ವಿವಿಧ ಖಾದ್ಯಗಳು ನಗರದ ಹೋಟೆಲ್‌ ಹಾಗೂ ಅಂಗಡಿಗಳಲ್ಲಿ ಸಿದ್ಧವಾಗುತ್ತಿದೆ. ಇದರ ರುಚಿ ಸವಿಯಲು ಗ್ರಾಹಕರು ಮುಂದಾಗುತ್ತಿದ್ದಾರೆ.

ಮಾರುಕಟ್ಟೆಗೆ ಹೊರ ರಾಜ್ಯದಿಂದ ಹಣ್ಣುಗಳು ಬಂದಿವೆ. ಕರ್ನಾಟಕದಿಂದ ಪೂರ್ಣ ಪ್ರಮಾಣ ಮಾವು ಬೆಂಗಳೂರು ಮಾರುಕಟ್ಟೆಯನ್ನು ಪ್ರವೇಶ ಮಾಡಿಲ್ಲ. ಮಾವಿನ ಬೇಡಿಕೆ ಹೆಚ್ಚಿದ್ದು, ಪೂರೈಕೆ ಕೊರತೆಯಿದೆ. -ಷಣ್ಮಖ, ತಮಿಳುನಾಡು ಮಾವಿನ ವ್ಯಾಪಾರಿ.

ಮಾವು ಬೆಲೆ ದುಬಾರಿಯಾಗಿದೆ. ಮಲ್ಲಿಕಾ ಒಂದು ಕೆ.ಜಿ. 200ರಿಂದ 250 ರೂ. ದರದಲ್ಲಿ ಮಾರಾಟವಾಗುತ್ತಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಮಲ್ಲಿಕಾ ಬೆಲೆ 150 ರೂ. ಆಸುಪಾಸಿನಲ್ಲಿತ್ತು. -ಪೂಜಾ ಶೇಖರ್‌, ಬೆಂಗಳೂರ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

11-honnavara

Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.