Panaji: ಮೇಲ್ಸೇತುವೆಯ ಸ್ಲ್ಯಾಬ್ನ ಭಾಗ ಕುಸಿತ: ವಾಹನ ಸವಾರರಲ್ಲಿ ಆತಂಕ
Team Udayavani, May 14, 2024, 3:01 PM IST
ಪಣಜಿ: ಶನಿವಾರ ಸುರಿದ ಭಾರಿ ಮಳೆಗೆ ಅಗಶಿಯಿಂದ ಜುವಾರಿ ಹೊಸ ಸೇತುವೆಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆಯ ಜಂಟಿ ಸ್ಲ್ಯಾಬ್ನ ತುಂಡುಗಳು ಕುಸಿದಿವೆ. ಈ ಘಟನೆಯಿಂದ ಸ್ಥಳೀಯರಲ್ಲಿ ಭಯ ಆವರಿಸಿದ್ದು, ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಕೂಡಲೇ ಈ ಬಗ್ಗೆ ಗಮನ ಹರಿಸಬೇಕು ಎಂಬ ಆಗ್ರಹ ವ್ಯಕ್ತವಾಗುತ್ತಿದೆ.
ಶನಿವಾರ ರಾತ್ರಿ ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಅದರಲ್ಲಿ ಅಗಶಿಯಿಂದ ಹೊಸ ಜುವಾರಿ ಸೇತುವೆಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆಯ ಜಂಟಿ ಸ್ಲ್ಯಾಬ್ನ ತುಂಡುಗಳು ಕುಸಿದಿವೆ. ರಸ್ತೆಯಲ್ಲಿ ವಾಹನ ಸಂಚಾರದ ವೇಳೆ ಸ್ಲ್ಯಾಬ್ಗಳು ಈ ರೀತಿ ಬಿದ್ದು ಅನಾಹುತ ಸಂಭವಿಸುವ ಆತಂಕ ಮನೆ ಮಾಡಿದೆ. ಈ ಸ್ಲ್ಯಾಬ್ ಥರ್ಮೋಸೆಲ್ ಪ್ಯಾಕಿಂಗ್ ಹೊಂದಿದೆ. ಸ್ಲ್ಯಾಬ್ಗಳು ಸಡಿಲಗೊಂಡು ಕುಸಿಯುತ್ತಿವೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಎಂಜಿನಿಯರ್ ಗಳಿಗೆ ನಾವು ಪದೇ ಪದೇ ತಿಳಿಸುತ್ತಿದ್ದೇವೆ. ಆದರೆ ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಸ್ಥಳೀಯ ಸುಕಾರಿನ್ ಗೊನ್ಸಾಲ್ವಿಸ್ ಮಾಹಿತಿ ನೀಡಿದ್ದಾರೆ.
ಮೇಲ್ಸೇತುವೆ ನಿರ್ಮಿಸುವಾಗ ಈ ಸೇತುವೆಯ ಕಾಮಗಾರಿ ಸರಿಯಾಗಿ ನಡೆದಿಲ್ಲ. ಸೇತುವೆಯಿಂದ ಮಳೆ ನೀರು ಸ್ಥಳೀಯರ ಮನೆಗಳ ಮೇಲೆ ಬೀಳದಂತೆ ಪೈಪ್ಗಳನ್ನು ಹಾಕಲಾಗಿದೆ. ಆದರೆ ಈ ಪೈಪ್ಗಳು ಕೆಲವೆಡೆ ಸೋರುತ್ತಿವೆ. ಇದರಿಂದ ಸ್ಥಳೀಯರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಂಭೀರ ಗಮನ ಹರಿಸಿ ಪೈಪ್ ಬದಲಾಯಿಸಬೇಕು. ಜಂಟಿ ಸ್ಲ್ಯಾಬ್ ಕುಸಿಯದಂತೆ ಕ್ರಮಕೈಗೊಳ್ಳಬೇಕು ಎಂದು ಗೊನ್ಸಾಲ್ವಿಸ್ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.