![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 14, 2024, 4:46 PM IST
ಚಿಕ್ಕಮಗಳೂರು: ಮಲೆನಾಡಿಗೆ ವರುಣ ಕೃಪೆ ತೋರಿದ್ದಾನೆ. ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಮಳೆಯಾಗುತ್ತಿದ್ದು, ಜನರಲ್ಲಿ ಮಂದಹಾಸ ಮೂಡಿಸಿದೆ.
ಮಂಗಳವಾರ ಜಿಲ್ಲೆಯ ಶೃಂಗೇರಿ ತಾಲೂಕಿನ ಸುತ್ತಮುತ್ತ ಮಳೆಯಾಗಿದೆ. ಬೆಳಿಗ್ಗೆಯಿಂದ ಬಿಸಿಲ ಝಳ ಹೆಚ್ಚಾಗಿದ್ದು ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಮಳೆಯಾಗಿದೆ. ಮಳೆಯಿಂದ ಪ್ರವಾಸಿಗರ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇನ್ನೂ ತುಂಗಾ ನದಿಯ ಹರಿವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.
ಶೃಂಗೇರಿ ಭಾಗದಲ್ಲಿ ಮಳೆಯಾಗಿದ್ದು ಈ ಭಾಗದ ಅಡಿಕೆ, ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಮಳೆಯಿಂದ ಶೃಂಗೇರಿ ಸುತ್ತಮುತ್ತ ಪ್ರವಾಸಿ ತಾಣಕ್ಕೆ ಆಗಮಿಸಿದ ಪ್ರವಾಸಿಗರಿಗೆ ಇಲ್ಲಿನ ಪ್ರಕೃತಿ ಸೌಂದರ್ಯ ಸವಿಯಲು ಅಡ್ಡಿಯಾಗಿತ್ತು. ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು ಹರಿವು ನಿಲ್ಲಿಸಿದ್ದ ತುಂಗಾ ನದಿಯಲ್ಲಿ ನೀರಿನ ಹರಿವು ಕೊಂಚ ಮಟ್ಟಿಗೆ ಏರಿಕೆ ಕಂಡಿದೆ.
You seem to have an Ad Blocker on.
To continue reading, please turn it off or whitelist Udayavani.