![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ; ಪಶು ವೈದ್ಯರ ವಿರುದ್ಧ ಕೊಲೆ ಪ್ರಕರಣ ದಾಖಲು
Team Udayavani, May 14, 2024, 7:49 PM IST
![15-belthanagdy](https://www.udayavani.com/wp-content/uploads/2024/05/15-belthanagdy-620x372.jpg)
ಕೊಕ್ಕಡ: ಇಲ್ಲಿನ ಪಶು ವೈದ್ಯ ಡಾ| ಕುಮಾರ್ ಅವರು ಕೈಯಿಂದ ಹಲ್ಲೆ ನಡೆಸಿದ ಪರಿಣಾಮ ಬೆಳ್ತಂಗಡಿ ತಾಲೂಕಿನ ಪಟ್ರಮೆ ನಿವಾಸಿ ಕೃಷ್ಣಪ್ಪ ಯಾನೆ ಕಿಟ್ಟ (58) ಬಿದ್ದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರ ವಿರುದ್ಧ ದೂರು ದಾಖಲಿಸಲಾಗಿದೆ.
ಘಟನೆ ಕುರಿತಂತೆ ಕೃಷ್ಣಪ್ಪ ಅವರ ಪತ್ನಿ ಭಾರತಿ ಧರ್ಮಸ್ಥಳ ಪೊಲೀಸರಿಗೆ ಪಶುವೈದ್ಯರ ವಿರುದ್ಧ ದೂರು ನೀಡಿದ್ದಾರೆ. ನನ್ನ ಪತಿ ಕೃಷ್ಣಪ್ಪ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮೇ 12ರಂದು ಪುತ್ತೂರು ಸರಕಾರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ರಾತ್ರಿ ಕೊಕ್ಕಡಕ್ಕೆ ಬಂದಿದ್ದರು. ಅವರು ಕೊಕ್ಕಡ ಜಂಕ್ಷನ್ ಬಳಿ ನಿಂತಿದ್ದಾಗ ಪಶು ವೈದ್ಯ ಡಾ| ಕುಮಾರ್ ಕ್ಷುಲ್ಲಕ ವಿಚಾರಕ್ಕೆ ಕೈಯಿಂದ ಹಲ್ಲೆ ಮಾಡಿದ್ದರಿಂದ ಕೃಷ್ಣಪ್ಪ ಬಿದ್ದು ಮೃತಪಟ್ಟಿದ್ದಾರೆ ಎಂದವರು ಪೊಲೀಸರಿಗೆ ದೂರು ನೀಡಿದ್ದಾರೆ.
ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-415x249.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.