Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ
Team Udayavani, May 15, 2024, 7:45 AM IST
ಕಾಸರಗೋಡು: ಪೆರಿಯದ ಕೇರಳ ಕೇಂದ್ರ ವಿ.ವಿ.ಯ ಅಧ್ಯಾಪಕ ಡಾ| ಇಫ್ತಿಕರ್ ಅಹಮ್ಮದ್ (30)ನನ್ನು ಪಾರ್ಕ್ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆಯ ಹಿನ್ನೆಲೆಯಲ್ಲಿ ತಳಿಪರಂಬ ಪೊಲೀಸರು ಬಂಧಿಸಿದ್ದು, ಕಣ್ಣೂರು ಸೆಂಟ್ರಲ್ ಜೈಲಿನಲ್ಲಿ ರಿಮಾಂಡ್ನಲ್ಲಿರಿಸಲಾಗಿದೆ.
ಪಳೆಯಂಗಾಡಿ ಎರಿಪುರಂ ನಿವಾಸಿ ಡಾ| ಇಫ್ತಿಕರ್ ಅಹಮ್ಮದ್ ಪರಶ್ಶಿನ ಕಡವಿನ ವಾಟರ್ ಥೀಂ ಪಾರ್ಕ್ನ “ವೇವ್ಪೂಲ್’ನಲ್ಲಿ ಸ್ನಾನ ಮಾಡುತ್ತಿದ್ದ 22ರ ಹರೆಯದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಅಲ್ಲದೆ ಆಕೆಯನ್ನು ಬಿಗಿದಪ್ಪಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಯುವತಿ ಬೊಬ್ಬೆ ಹಾಕಿದಾಗ ಪಾರ್ಕ್ನ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದರು. ತಳಿಪರಂಬ ಪೊಲೀಸರು ಆತನನ್ನು ಬಂಧಿಸಿದರು.
2016ರಲ್ಲಿ ಪೆರಿಯಾದಲ್ಲಿರುವ ಕೇಂದ್ರ ವಿಶ್ವವಿದ್ಯಾನಿಲಯದಲ್ಲಿ ಇಂಗ್ಲಿಷ್ ವಿಭಾಗಕ್ಕೆ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಉದ್ಯೋಗಕ್ಕೆ ಸೇರಿದ್ದ. ಈ ಮೊದಲು ಅಮಾನತಿಗೊಳಗಾಗಿದ್ದು, ಹಲವು ವಿವಾದಗಳಲ್ಲಿ ಸಿಲುಕಿದ್ದ. ತರಗತಿಯಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ಈತನನ್ನು ಅಮಾನತು ಮಾಡಲಾಗಿತ್ತು. ಆ ಬಳಿಕ ಶೀಘ್ರದಲ್ಲೇ ಅಮಾನತು ರದ್ದುಗೊಳಿಸಲಾಗಿತ್ತು. ಇದರಿಂದ ಆತ ಸೇವೆಗೆ ಮರಳಿದ್ದ. ಇದರಿಂದ ವಿದ್ಯಾರ್ಥಿನಿಯರು ಚಳವಳಿಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಅಮಾನತು ಮುಂದುವರಿಸಲಾಗಿತ್ತು. ಅನಂತರ ಇತ್ತೀಚೆಗಷ್ಟೇ ಮರಳಿ ಸೇವೆಗೆ ಸೇರ್ಪಡೆಗೊಂಡಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.