German ಅಧಿಕಾರಿಗಳ ಜತೆ ಸಂಪರ್ಕ; ಪ್ರಜ್ವಲ್ ಪತ್ತೆ ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
Team Udayavani, May 14, 2024, 10:55 PM IST
ಬೆಂಗಳೂರು: ಹಾಸನದ ಅಶ್ಲೀಲ ಪೆನ್ಡ್ರೈವ್ ಪ್ರಕರಣದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗಾಗಿ ವಿಶೇಷ ತನಿಖಾ ತಂಡವು (ಎಸ್ಐಟಿ) ತಲಾಶ್ ಚುರುಕುಗೊಳಿಸಿದ್ದು, ಜರ್ಮನಿಯ ಕೆಲವು ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಂಸದ ಪ್ರಜ್ವಲ್ ರೇವಣ್ಣ ಪತ್ತೆಗಾಗಿ ಎಸ್ಐಟಿ ತಂಡವು ಹುಡುಕಾಟ ಮುಂದುವರೆಸಿದೆ. ಈ ನಿಟ್ಟಿನಲ್ಲಿ ಜರ್ಮನಿಯ ಕೆಲ ಅಧಿಕಾರಿಗಳ ಸಂಪರ್ಕ ಸಾಧಿಸಿರುವ ಎಸ್ಐಟಿ ಅವರಿಂದ ಮಾಹಿತಿ ಕಲೆ ಹಾಕುತ್ತಿದೆ. ಆದರೆ, ನಿಖರವಾಗಿ ಪ್ರಜ್ವಲ್ ರೇವಣ್ಣ ವಾಸಿಸುತ್ತಿರುವ ಪ್ರದೇಶದ ಕುರಿತು ಖಚಿತತೆ ಸಿಕ್ಕಿಲ್ಲ. ವಿದೇಶಿ ಅಧಿಕಾರಿಗಳು ಎಸ್ಐಟಿ ತಂಡಕ್ಕೆ ತಮ್ಮ ವ್ಯಾಪ್ತಿಯಲ್ಲಿ ಕೊಡಬಹುದಾದ ಕೆಲವು ಮಾಹಿತಿಗಳನ್ನು ಕೊಟ್ಟಿದ್ದಾರೆ ಎಂದು ಗೊತ್ತಾಗಿದೆ.
ಪ್ರಜ್ವಲ್ ಭಾರತಕ್ಕೆ ವಾಪಸಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಎಸ್ಐಟಿಯು ಇದುವರೆಗೆ ಕಾದು ನೋಡುವ ತಂತ್ರ ಅನುಸರಿಸಿತ್ತು. ಇದೀಗ ಪ್ರಜ್ವಲ್ ಸದ್ಯ ಭಾರತಕ್ಕೆ ಮರಳುವುದೇ ಅನುಮಾನ ಎಂಬುದು ಗೊತ್ತಾಗುತ್ತಿದ್ದಂತೆ ವಿದೇಶಿ ಅಧಿಕಾರಿಗಳ ಸಂಪರ್ಕ ಸಾಧಿಸಿ ಮಾಹಿತಿ ಕಲೆ ಹಾಕಲು ಮುಂದಾಗಿದೆ.
ಎಸ್ಐಟಿಗೆ ದೊಡ್ಡ ತಲೆನೋವು
ಪ್ರಜ್ವಲ್ ಜರ್ಮನಿಯಲ್ಲೇ ಇರುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದ್ದು, ಇಷ್ಟಾದರೂ ಪ್ರಜ್ವಲ್ ಬಂಧಿಸುವುದೇ ಎಸ್ಐಟಿಗೆ ದೊಡ್ಡ ತಲೆನೋವಾಗಿದೆ. ಪ್ರಜ್ವಲ್ ಬಗ್ಗೆ ನಿಖರವಾದ ಮಾಹಿತಿ ಸಿಕ್ಕಿದರೆ ಮುಂದಿನ ಕ್ರಮ ಕೈಗೊಳ್ಳಲು ಎಸ್ಐಟಿ ಚಿಂತನೆ ನಡೆಸಿದೆ. ಸದ್ಯ ಸಂತ್ರಸ್ತೆಯರ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ.
ಸಂತ್ರಸ್ತೆಯರನ್ನು ಕೃತ್ಯ ನಡೆದ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸುವ ಪ್ರಕ್ರಿಯೆಯನ್ನೂ ನಡೆಸಲಾಗುತ್ತಿದೆ. ಮತ್ತೂಂದೆಡೆ ಪ್ರಕರಣಕ್ಕೆ ಬೇಕಾಗಿರುವ ಸಾಕ್ಷ್ಯಗಳನ್ನು ಕಲೆ ಹಾಕಲಾಗುತ್ತಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
MUST WATCH
ಹೊಸ ಸೇರ್ಪಡೆ
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
ನಾಲ್ಕೂವರೆ ವರ್ಷ ಸ್ಮಶಾನದಲ್ಲಿ ಕಳೆದಿದ್ದ ಕುಮಟಾದ ಈ ಹುಡುಗ ಈಗ ಟೀಂ ಇಂಡಿಯಾದ ಪ್ರಮುಖ ಶಕ್ತಿ!
Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
DK; ಮತ್ತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದ ಕಾರ್ತಿಕ್; ಈ ಬಾರಿ ಬೇರೆ ಜವಾಬ್ದಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.