Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ


Team Udayavani, May 14, 2024, 11:17 PM IST

Padubidri ನೀರು ಪಾಲಾಗಿದ್ದ ಅಭಿಲಾಷ್‌ ಮೃತದೇಹ ಪತ್ತೆ

ಪಡುಬಿದ್ರಿ: ಮರುವಾಯಿ ಹೆಕ್ಕಲು ಶಾಂಭವಿ ಹೊಳೆಗಿಳಿದ ಸಂದರ್ಭ ನೀರಿನಲ್ಲಿ ಮುಳುಗುತ್ತಿದ್ದ ಗೆಳೆಯರನ್ನು ರಕ್ಷಿಸಲು ತೆರಳಿ ನೀರು ಪಾಲಾಗಿದ್ದ ಅಭಿಲಾಷ್‌ (24) ಮೃತದೇಹ ಮಂಗಳವಾರ ಸಂಜೆ ಹೆಜಮಾಡಿಕೋಡಿಯ ಬೈತೋಟ ಬಳಿಯ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.

ಕರಾವಳಿ ಪೊಲೀಸ್‌ ಪಡೆಯ ಸಿಬಂದಿ ರಾಕೇಶ್‌ ಅವರ ಜತೆಗೆ ಚರಣ್‌ ಮತ್ತು ಗುರು ಅವರು ಗಸ್ತಿನಲ್ಲಿದ್ದ ಸಂದರ್ಭ ಸಮುದ್ರದ ಅಲೆಗಳ ಮಧ್ಯೆ ಮೃತದೇಹ ಕಂಡುಬಂದಿದ್ದು ತತ್‌ಕ್ಷಣ ಕಾರ್ಯಪ್ರವರ್ತರಾಗಿ ದಡಕ್ಕೆ ಎಳೆದು ತಂದಿದ್ದಾರೆ. ಬಳಿಕ ಕರಾವಳಿ ಕಾವಲು ಪಡೆ, ಪೊಲೀಸರು ಹಾಗೂ ಅಭಿಲಾಷ್‌ ಕುಟುಂಬಿಕರು ಆಗಮಿಸಿ ಮೃತದೇಹದ ಗುರುತು ಹಿಡಿದಿದ್ದಾರೆ.

ರವಿವಾರ ಬೆಳಗ್ಗೆ 7.30ರ ವೇಳೆಗೆ 10 ಮಂದಿ ಗೆಳೆಯರು ಬಜಪೆಯಿಂದ ಅಗಮಿಸಿ ಮರುವಾಯಿ ಹೆಕ್ಕಲು ಶಾಂಭವಿ ಹೊಳೆಗೆ ಇಳಿದಿದ್ದರು. ಅಳಿವೆ ಬಾಗಿಲಿನಲ್ಲಿ ಇಬ್ಬರು ಗೆಳೆಯರು ಮುಳುಗುತ್ತಿದ್ದಾಗ ಅವರನ್ನು ರಕ್ಷಿಸಲು ಈಜು ತಿಳಿದ ಬಜಪೆ ಅದ್ಯಪಾಡಿಯ ಹಳೇ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್‌ ತೆರಳಿದ್ದರು. ಆದರೆ ಗೆಳೆಯರಿಬ್ಬರನ್ನು ಮೀನುಗಾರಿಕಾ ದೋಣಿಯೊಂದರ ಸಿಬಂದಿ ರಕ್ಷಿಸಿದ್ದು, ಅಭಿಲಾಷ್‌ ನೀರಿನಲ್ಲಿ ಮುಳುಗಿ ಕಾಣೆಯಾಗಿದ್ದರು.

ಸೋಮವಾರದಿಂದ ಘಟನೆ ನಡೆದ ಸ್ಥಳ ಅಳಿವೆ ಬಾಗಿಲಿನಲ್ಲಿ ಈಶ್ವರ್‌ ಮಲ್ಪೆ ಮತ್ತು ರಾಜ್ಯ ವಿಪತ್ತು ಸ್ಪಂದನ ಪಡೆಯವರು ಕರಾವಳಿ ಕಾವಲು ಪಡೆ ಮತ್ತು ಸಾರ್ವಜನಿಕರ ನೆರವಿನೊಂದಿಗೆ ಹುಡುಕಾಟ ನಡೆಸುತ್ತಿದ್ದರು.

ತಿಂಗಳ ಹಿಂದೆ ಅಕ್ಕನ ನಿಶ್ಚಿತಾರ್ಥ
ಬಜಪೆ: ಅದ್ಯಪಾಡಿಯ ಕೂಲಿಕಾರ್ಮಿಕ ದಂಪತಿ ಎಂ.ಎಂ. ರಮೇಶ್‌ ಮತ್ತು ಶಾರದಾ ಅವರ ಮೂವರು ಮಕ್ಕಳಲ್ಲಿ ಅಭಿಲಾಷ್‌ ಮಾತ್ರ ಪುತ್ರನಾಗಿದ್ದು, ಮನೆಯ ಆಧಾರ ಸ್ತಂಭವಾಗಿದ್ದರು. ಅಭಿಲಾಷ್‌ ಅವರ ಅಕ್ಕನ ವಿವಾಹ ನಿಶ್ಚಿತಾರ್ಥ ಒಂದು ತಿಂಗಳ ಹಿಂದೆಯಷ್ಟೇ ನಡೆದಿತ್ತು. ತಂಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಉತ್ತಮ ಕ್ರೀಡಾಪಟು ಆಗಿದ್ದ ಅಭಿಲಾಷ್‌ ಅವರು ವಾಲಿಬಾಲ್‌ ಮತ್ತು ಕ್ರಿಕೆಟ್‌ನಲ್ಲಿ ಗಮನ ಸೆಳೆದಿದ್ದರು. ಮೆಕಾನಿಕ್‌ ವಿಭಾಗದಲ್ಲಿ ಐಟಿಐ ಮುಗಿಸಿದ ಬಳಿಕ ಕಳೆದ ನಾಲ್ಕು ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇಯಲ್ಲಿ ಗುತ್ತಿಗೆ ನೆಲೆಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

Malpe: ತಡರಾತ್ರಿಯವರೆಗೆ ಧ್ವನಿವರ್ಧಕ ಬಳಕೆ : ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.