Cannes‌ Film Festival: ಕೇನ್ಸ್ ನಲ್ಲಿ ಪ್ರದರ್ಶನ ಕಾಣಲಿದೆ ಭಾರತದ ಈ 7 ಸಿನಿಮಾಗಳು


Team Udayavani, May 15, 2024, 1:33 PM IST

12

ನವದೆಹಲಿ: ಸಿನಿಮಾ ಜಗತ್ತಿನ ಪ್ರತಿಷ್ಠಿತ ಚಲನ ಚಿತ್ರೋತ್ಸವಗಳಲ್ಲಿ ಒಂದಾಗಿರುವ ಕೇನ್ಸ್ ಫಿಲ್ಮ್ ಫೆಸ್ಟಿವಲ್ ಆರಂಭಗೊಂಡಿದೆ. 2024 ರ 77ನೇ ಕೇನ್ಸ್ ಫಿಲ್ಮ್ ಫೆಸ್ಟಿವಲ್  ಮೇ 14 ರಿಂದ ಮೇ 25ರವರೆಗೆ ಕೇನ್ಸ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ನಡೆಯಲಿದೆ.

ಪ್ರಪಂಚದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಒಂದಾದ ಕೇನ್ಸ್ ಫಿಲ್ಮ್‌ ಫೆಸ್ಟ್‌ ವಲ್‌ ನಲ್ಲಿ ವಿಶ್ವದ ಅನೇಕ ಸಿನಿ ಸೆಲೆಬ್ರಿಟಿಗಳು ಭಾಗಿಯಾಗುತ್ತಾರೆ. ಭಾರತದ ಸ್ಟಾರ್‌ ಗಳಾದ  ಐಶ್ವರ್ಯಾ ರೈ ಬಚ್ಚನ್, ಅದಿತಿ ರಾವ್ ಹೈದರಿ, ಶೋಭಿತಾ ಧೂಲಿಪಾಲ,ಕಿಯಾರಾ ಅಡ್ವಾಣಿ ಕೇನ್ಸ್ ನಲ್ಲಿ ಭಾಗವಹಿಸಿದ್ದಾರೆ.

ಈ ಫಿಲ್ಮ್‌ ಫೆಸ್ಟ್‌ ವಲ್‌ ವಿವಿಧ ವಿಭಾಗದಲ್ಲಿಸಿನಿಮಾ, ಕಿರುಚಿತ್ರ, ಸಾಕ್ಷ್ಯಚಿತ್ರಗಳು ಪ್ರದರ್ಶನವಾಗುತ್ತದೆ. ಭಾರತದಿಂದ ಈ ಬಾರಿ 7 ಸಿನಿಮಾಗಳು ಪ್ರದರ್ಶನ ಕಾಣಲಿದೆ. ಇಲ್ಲಿದೆ ಸಿನಿಮಾಗಳ ಪಟ್ಟಿ..

‘ಆಲ್ ವಿ ಇಮ್ಯಾಜಿನ್ ಯ್ಯಾಸ್ ಲೈಟ್’: ( ನಿರ್ದೇಶನ – ಪಾಯಲ್ ಕಪಾಡಿಯಾ):
ಪಾಯಲ್ ಕಪಾಡಿಯಾ ನಿರ್ದೇಶಿಸಿದ ಈ ಸಿನಿಮಾವೂ ಸುಮಾರು 30 ವರ್ಷಗಳ ಬಳಿಕ ಕಾನ್‌ ಚಲನಚಿತ್ರೋತ್ಸವದಲ್ಲಿ ಪಾಮ್ ಡಿ’ಓರ್( ಕಾನ್‌ ಫೆಸ್ಟ್‌ ವಲ್‌ – ಅತ್ಯುನ್ನತ ಪ್ರಶಸ್ತಿ) ಪ್ರಶಸ್ತಿಗಾಗಿ ಸ್ಪರ್ಧಿಸುವ ಮೊದಲ ಭಾರತೀಯ ಚಲನಚಿತ್ರ ಇದಾಗಿರಲಿದೆ.

ಹಿಂದಿ ಹಾಗೂ ಮಲಯಾಳಂನಲ್ಲಿರುವ ಈ ಸಿನಿಮಾದಲ್ಲಿ ಕಣಿ ಕುಸೃತಿ,ದಿವ್ಯ ಪ್ರಭಾ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ವಿಚ್ಛೇದಿತ ಮಹಿಳೆ ಹಾಗೂ ಅವರ ಸ್ನೇಹಿತ ನಡುವೆ ನಡೆಯುವ ಕಥೆಯನ್ನು ಸಿನಿಮಾ ಒಳಗೊಂಡಿದೆ.

ಸಂತೋಷ್:( ನಿರ್ದೇಶನ – ಸಂಧ್ಯಾ ಸೂರಿ): ಬ್ರಿಟಿಷ್‌ – ಇಂಡಿಯನ್‌ ನಿರ್ದೇಶಕಿ ಸಂಧ್ಯಾ ಸೂರಿ ಅವರ ಈ ಸಿನಿಮಾ ಕೇನ್ಸ್ ಫೆಸ್ಟಿ ವಲ್‌ ನ ಉತ್ಸವದ ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿ ಪ್ರದರ್ಶನವಾಗಲಿದೆ. ಸಹಾನಾ ಗೋಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದ ಕಥೆ ಉತ್ತರ ಭಾರತದ ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತದೆ. ವಿಧವೆ ಮಹಿಳೆ ತನ್ನ ಪತಿ ಕಾನ್‌ ಸ್ಟೇಬಲ್‌ ಹುದ್ದೆಯನ್ನು ವಹಿಸಿಕೊಂಡಾಗ ಏನೆಲ್ಲ ಆಗುತ್ತದೆ ಎನ್ನುವುದನ್ನು ಹೇಳಲಾಗಿದೆ.

‘ಸನ್‌ಫ್ಲವರ್ಸ್ ವೆರ್ ದಿ ಫಸ್ಟ್ ಒನ್ಸ್ ಟು ನೋ'( ಕನ್ನಡ ಕಿರುಚಿತ್ರ – ನಿರ್ದೇಶನ – ಚಿದಾನಂದ್ ನಾಯಕ್:

ಕೇನ್ಸ್ ಫಿಲ್ಮ್‌ ಫೆಸ್ಟಿ ವಲ್‌ ನಲ್ಲಿ ಕನ್ನಡಿಗರು ಖುಷಿಯ ಪಡುವ ವಿಚಾರವೆಂದರೆ ಕನ್ನಡದ ಕಿರುಚಿತ್ರವೊಂದು ಪ್ರದರ್ಶನ ಆಗಲಿದೆ. 15 ನಿಮಿಷಗಳ ಈ ಕಿರುಚಿತ್ರ ಸಿನೆಫೊಂಡೇಶನ್ ಅಥವಾ ಲಾ ಸಿನೆಫ್ ವಿಭಾಗದಲ್ಲಿ ಪ್ರದರ್ಶನ ಕಾಣಲಿದೆ. ಈ ಕಿರುಚಿತ್ರವನ್ನು FTII ವಿದ್ಯಾರ್ಥಿಯಾಗಿರುವ ಚಿದಾನಂದ್ ನಾಯಕ್ ನಿರ್ದೇಶನ ಮಾಡಿದ್ದಾರೆ.

ಮಂಥನ್(‌ ನಿರ್ದೇಶನ- ಶ್ಯಾಮ್‌ ಬೆಂಗಾಲ್):‌ 1976 ರಲ್ಲಿ ಶ್ಯಾಮ್‌ ಬೆನಗಲ್‌ ನಿರ್ದೇಶನದಲ್ಲಿ ಬಂದ ʼಮಂಥನ್‌ʼ ಈ ಬಾರಿ ಕೇನ್ಸ್ ಫೆಸ್ಟಿ ವಲ್‌ ನಲ್ಲಿ ಪ್ರದರ್ಶನ ಕಾಣಲಿದೆ. ಗಿರೀಶ್ ಕಾರ್ನಾಡ್, ಸ್ಮಿತಾ ಪಾಟೀಲ್, ನಾಸಿರುದ್ದೀನ್ ಶಾ ಮತ್ತು ಕುಲಭೂಷಣ್ ಖರಬಂದ ನಟಿಸಿರುವ ಈ ಸಿನಿಮಾ ಕ್ಲಾಸಿಕ್‌ ವಿಭಾಗದಲ್ಲಿ ಪ್ರದರ್ಶನ ಕಾಣಲಿದೆ.

‘ಸಿಸ್ಟರ್ ಮಿಡ್‌ನೈಟ್’: ( ನಿರ್ದೇಶಕ -ಕರಣ್ ಕಂಧಾರಿ): ಬಾಲಿವುಡ್‌ ನಟಿ ರಾಧಿಕಾ ಆಪ್ಟೆ ನಟನೆಯ ಈ ಸಿನಿಮಾ ಡೈರೆಕ್ಟರ್ಸ್ ಫೋರ್ಟ್‌ ನೈಟ್ ವಿಭಾಗದಲ್ಲಿ ಪ್ರದರ್ಶನ ಕಾಣಲಿದೆ. ಚಿಕ್ಕ ಊರಿನಿಂದ ಮಹಾನಗರಕ್ಕೆ ಬಂದ ಹುಡುಗಿಯೊಬ್ಬಳ ವೈವಾಹಿಕ ಬದುಕಿನ ಕಥೆಯನ್ನೊಳಗೊಂಡಿದೆ.

‘ಇನ್ ರಿಟ್ರಿಟ್’: (ನಿರ್ದೇಶನ- ಸೈಯ್ಯದ್ ಮೈಸಮ್ ಅಲಿ): ಸಿನಿಮಾ ಸ್ವತಂತ್ರ ಸಿನಿಮಾ ವಿಭಾಗದಲ್ಲಿ ಪ್ರದರ್ಶನ ಕಾಣಲಿದೆ. ಬಹು ಸಮಯದ ಬಳಿಕ ವ್ಯಕ್ತಿಯೊಬ್ಬ ಹುಟ್ಟೂರಿಗೆ ಬಂದಾಗ ಏನೆಲ್ಲ ಆಗುತ್ತದೆ ಎನ್ನುವುದರ ಸುತ್ತ ಸಿನಿಮಾದ ಕಥೆ ಸಾಗುತ್ತದೆ.

ಶೇಮ್‌ ಲೆಸ್:‌ (ನಿರ್ದೇಶನ – ನಿರ್ದೇಶನ – ಕಾನ್ಸ್ಟಾಂಟಿನ್ ಬೊಜಾನೋವ್) ಈ ಸಿನಿಮಾವನ್ನು ಈ ಸಿನಿಮಾವನ್ನು ನೇಪಾಳ ಹಾಗೂ ಭಾರತದಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದ ಕಥೆಯು ದೆಹಲಿಯ ವೇಶ್ಯಾಗೃಹದಲ್ಲಿ ಪೋಲೀಸರನ್ನು ಕೊಂದ ನಂತರ ಉತ್ತರ ಭಾರತದ ಲೈಂಗಿಕ ಕಾರ್ಮಿಕರ ಸಮುದಾಯದಲ್ಲಿ ಆಶ್ರಯ ಪಡೆಯುವ ರೇಣುಕಾ ಅವರ ಸುತ್ತ ಸುತ್ತುತ್ತದೆ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.