Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್


Team Udayavani, May 15, 2024, 4:41 PM IST

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

ಹೈದರಾಬಾದ್:‌ ಐಪಿಎಲ್‌, ಎಲೆಕ್ಷನ್‌ ಭರಾಟೆ ನಡುವೆ ದಕ್ಷಿಣ ಸಿನಿಮಾರಂಗ ಸಪ್ಪೆಯಾಗಿದೆ. ಮಾಲಿವುಡ್‌ ನಲ್ಲಿ ಮಾತ್ರ ಸಿನಿಮಾಗಳು ರಿಲೀಸ್‌ ಆಗುತ್ತಿದೆ. ಅದು ಬಿಟ್ಟರೆ ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲೂ ಕೈಲೆಕ್ಕದಷ್ಟು ಸಿನಿಮಾ ರಿಲೀಸ್‌ ಆಗುತ್ತಿದೆ.

ಓಟಿಟಿ, ಪ್ಯಾನ್‌ ಇಂಡಿಯಾ ಜಮಾನ ಬಂದ ಬಳಿಕ ಈಗೀಗ ಮೊದಲಿನ ಹಾಗೆ ಸ್ಟಾರ್‌ ನಟರ ಸಿನಿಮಾಗಳು ತಿಂಗಳಿಗೊಮ್ಮೆ ಅಥವಾ ವಾರದಲ್ಲಿ ಒಂದಾದರೂ ಬರುವುದಿಲ್ಲ. ಸ್ಟಾರ್‌ ನಟರು ಪ್ಯಾನ್‌ ಇಂಡಿಯಾ ರಿಲೀಸ್‌ ಗಾಗಿ ವರ್ಷದಲ್ಲಿ ಅಥವಾ ಎರಡು ವರ್ಷಕ್ಕೊಂದು ಸಿನಿಮಾಗಳನ್ನು ರಿಲೀಸ್‌ ಮಾಡುತ್ತಿದ್ದಾರೆ. ಆ ಸಿನಿಮಾಗಳು ರಿಲೀಸ್‌ ಆದ ವೇಳೆ ಹೆಚ್ಚಾಗಿ ಮಲ್ಟಿಫ್ಲೆಕ್ಸ್‌ ಗಳೇ ಹೌಸ್‌ ಫುಲ್‌ ಆಗುತ್ತದೆ ವಿನಃ ಸಿಂಗಲ್‌ ಸ್ಕ್ರೀನ್‌ ಗಳತ್ತ ಜನ ಬರುವುದೇ ಕಡಿಮೆ.

ಇತ್ತೀಚೆಗೆ ಸಿಂಗಲ್‌ ಸ್ಕ್ರೀನ್‌ ಥಿಯೇಟರ್‌ ಗೆ ಪ್ರೇಕ್ಷಕರ ಬರ ಉಂಟಾಗಿದೆ. ಈ ಕಾರಣದಿಂದ ಅನೇಕ ಸಿಂಗಲ್‌ ಸ್ಕ್ರೀನ್‌ ಥಿಯೇಟರ್‌ ಗಳು ಕಳೆದ ಕೆಲ ವರ್ಷಗಳಿಂದ ಬಾಗಿಲು ಮುಚ್ಚುತ್ತಿವೆ. ಕರ್ನಾಟಕ ಹೆಚ್ಚಾಗಿ ಬೆಂಗಳೂರಿನಲ್ಲಿ ಕಳೆದ ಎರಡು – ಮೂರು ವರ್ಷಗಳಿಂದ ಅನೇಕ ವರ್ಷ ಇತಿಹಾಸವುಳ್ಳ ಥಿಯೇಟರ್‌ ಗಳು ಪ್ರೇಕ್ಷಕರ ಕೊರತೆಯಿಂದ ಬಂದ್‌ ಆಗಿವೆ.

ಟಾಲಿವುಡ್‌ ಚಿತ್ರರಂಗದಲ್ಲೂ ಪ್ರೇಕ್ಷಕರ ಕೊರತೆ ಉಂಟಾಗಿದೆ. ಈ ಕಾರಣದಿಂದ ಥಿಯೇಟರ್ ಗಳು ಬಂದ್‌ ಆಗುವ ದಿನ ಬಂದಿದೆ.

ತೆಲಂಗಾಣ ಸ್ಟೇಟ್ ಸಿಂಗಲ್ ಥಿಯೇಟರ್ ಅಸೋಸಿಯೇಷನ್ ​​ಹತ್ತು ದಿನಗಳ ಕಾಲ ರಾಜ್ಯದಾದ್ಯಂತ ಸಿಂಗಲ್‌ ಸ್ಕ್ರೀನ್ ಚಿತ್ರಮಂದಿರಗಳನ್ನು ಮುಚ್ಚಲು ನಿರ್ಧರಿಸಿರುವುದಾಗಿ ವರದಿಯಾಗಿದೆ.

ಕಳೆದ ಕೆಲ ವಾರಗಳಿಂದ ಟಾಲಿವುಡ್‌ ನಲ್ಲಿ ಯಾವ ಪ್ರಮುಖ ಸಿನಿಮಾಗಳು ರಿಲೀಸ್‌ ಆಗುತ್ತಿಲ್ಲ. ರಿಲೀಸ್ ಆದರೂ ಅದಕ್ಕೆ ಪ್ರೇಕ್ಷಕರು ಬರುವುದು ಕಡಿಮೆಯಾಗಿದೆ. ಪ್ರತಿ ವರ್ಷ ಏಪ್ರಿಲ್‌ – ಮೇ ತಿಂಗಳಿನಲ್ಲಿ ಸ್ಟಾರ್‌ ನಟರ ಸಿನಿಮಾಗಳು ರಿಲೀಸ್‌ ಆಗುತ್ತಿತ್ತು. ಈ ಬಾರಿ ಐಪಿಎಲ್‌ ಹಾಗೂ ಎಲೆಕ್ಷನ್‌ ಜೊತೆಯಾಗಿ ಬಂದಿರುವುದರಿಂದ ಹತ್ತಾರು ಚಿತ್ರತಂಡಗಳು ಈ ಸಮಯದಲ್ಲಿ ಸಿನಿಮಾ ರಿಲೀಸ್‌ ಮಾಡುವ ಸಾಹಸಕ್ಕೆ ಮುಂದಾಗುತ್ತಿಲ್ಲ.

ತೆಲಂಗಾಣದಲ್ಲಿ ಸುಮಾರು 400 ಕ್ಕೂ ಅಧಿಕ ಥಿಯೇಟರ್‌ ಗಳಿವೆ. ಇದೇ ಶುಕ್ರವಾರ(ಮೇ.17 ರಿಂದ)  ಸಿಂಗಲ್‌ ಸ್ಕ್ರೀನ್‌ ಥಿಯೇಟರ್ ಗಳನ್ನು ಬಂದ್‌ ಮಾಡಲಾಗುತ್ತಿದೆ. ಸದ್ಯ ರಿಲೀಸ್‌ ಆಗಿರುವ ಸಿನಿಮಾಗಳನ್ನು ನೋಡಲು ಪ್ರೇಕ್ಷಕರು ಬರುತ್ತಿಲ್ಲ ಹಾಗಾಗಿ ಮಾಲೀಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ.

ಥಿಯೇಟರ್‌ ನಲ್ಲಿ ದುಡಿಯುವ ಕೆಲಸಗಾರರಿಗೆ ಸಂಬಳ, ಕರೆಂಟ್‌ ಬಿಲ್‌ ಗೆ ಸೇರಿದಂತೆ ಪ್ರತಿಯೊಂದಕ್ಕೂ ಹಣ ವ್ಯಯಿಸಬೇಕಿದೆ. ಇದು ಸದ್ಯದ ಪರಿಸ್ಥಿತಿಯಲ್ಲಿ ಕಷ್ಟವಾಗುತ್ತಿರುವುದರಿಂದ ಸಿಂಗಲ್‌ ಸ್ಕ್ರೀನ್ ಥಿಯೇಟರ್‌ ಮಾಲೀಕರು ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಮೇ.17 ರಿಂದ 25 ರವರೆಗೆ ಥಿಯೇಟರ್‌ ಗಳನ್ನು ಬಂದ್‌ ಮಾಡಲಾಗುತ್ತಿದೆ. ಮೇ.26 ರಂದು ಥಿಯೇಟರ್‌ ಓಪನ್‌ ಆಗಲಿದೆ. “ಲವ್ ಮಿ,” “ಗ್ಯಾಂಗ್ಸ್ ಆಫ್ ಗೋದಾವರಿ”, “ಹರೋಮ್ ಹರಾ,”, “ಸತ್ಯಭಾಮಾ” ಸೇರಿದಂತೆ ತಿಂಗಳಾಂತ್ಯದಲ್ಲಿ ಕೆಲ ಸಿನಿಮಾಗಳು ರಿಲೀಸ್‌ ಆಗಲಿದೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

8

Oscars 2025: ಆಸ್ಕರ್‌ ರೇಸ್‌ನಲ್ಲಿ ʼಕಲ್ಕಿ 2898 ಎಡಿʼ?: ಪೋಸ್ಟ್‌ ವೈರಲ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.