ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ನೀಲಿನಕ್ಷೆ ಧಾರ್ಮಿಕ ದತ್ತಿ ಇಲಾಖೆ ಕಮಿಷನರ್‌ ಅವರಿಗೆ ಕಳುಹಿಸಲಾಗಿದೆ.

Team Udayavani, May 15, 2024, 5:15 PM IST

ಕೊಲ್ಲೂರು: ದಿನೇ ದಿನೆ ಹೆಚ್ಚುತ್ತಿದೆ‌ ಟ್ರಾಫಿಕ್‌ ಜಾಮ್‌ ಕಿರಿಕಿರಿ…

ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ಧ ಕ್ಷೇತ್ರಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲ ಪರಿಸರದಲ್ಲಿ ವಾಹನ ನಿಲುಗಡೆ ಹಾಗೂ ಸಂಚಾರ ವ್ಯವಸ್ಥೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಬಹುತೇಕ ದಿನಗಳಲ್ಲಿ ಟ್ರಾಫಿಕ್‌ ಜಾಮ್‌
ನಿಂದಾಗಿ ಯಾತ್ರಾರ್ಥಿಗಳು ಹಾಗೂ ಗ್ರಾಮಸ್ಥರು ಕಿರಿಕಿರಿ ಅನುಭವಿಸುತ್ತಿದ್ದಾರೆ.

ತೀರ್ಥ ಕ್ಷೇತ್ರಗಳಲ್ಲಿ ದಿನೇದಿನೆ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದಂತೆ ವಾಹನ ನಿಲುಗಡೆ ಹಾಗೂ ಸಂಚಾರ ವ್ಯವಸ್ಥೆ ಕೂಡ ಅಸ್ತವ್ಯಸ್ತಗೊಳ್ಳುವುದು ಸಹಜ. ಆದರೆ ಅದಕ್ಕೊಂದು ಪರ್ಯಾಯ ವ್ಯವಸ್ಥೆ ಒದಗಿಸುವುದು ದೇಗುಲ ಆಡಳಿತ ವ್ಯವಸ್ಥೆಯ ಜವಾಬ್ದಾರಿಯಾಗಿದ್ದು, ಪೊಲೀಸ್‌ ಇಲಾಖೆ ಕೂಡ ಕೈಜೋಡಿಸಬೇಕಾದ ಅಗತ್ಯತೆ ಇದೆ. ಈ ದಿಸೆಯಲ್ಲಿ ಮಲ್ಟಿ ಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆ ಕಂಡುಕೊಂಡಲ್ಲಿ ಎದುರಾಗುವ ಟ್ರಾಫಿಕ್‌ ಜಾಮ್‌ಗೊಂದು ಶಾಶ್ವತ ಪರಿಹಾರ ಒದಗಿಸಬಹುದಾಗಿದೆ.

ಕಮಿಷನರ್‌ ಕಚೇರಿಯಲ್ಲಿ ಧೂಳು ಹಿಡಿದ ಕಡತಗಳು

ಆಡಳಿತ ಮಂಡಳಿ, ಗ್ರಾ.ಪಂ., ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಿರ್ಣಯ ಕೈಗೊಂಡು ಬಹುಮಹಡಿ ವಾಹನ ನಿಲ್ದಾಣದ ಅಗತ್ಯತೆಯ ಬಗ್ಗೆ ಧಾರ್ಮಿಕ ದತ್ತಿ ಇಲಾಖೆ ಮೂಲಕ ಸಚಿವರು ಹಾಗೂ ಇಲಾಖೆಯ ಕಮೀಷನರ್‌ ಅವರಿಗೆ ಮನವಿ ಕಳುಹಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು. ಒಂದು ಹಂತದಲ್ಲಿ ದೇಗುಲದ ಸನಿಹ ಬಳಕೆಯಲ್ಲಿರುವ ವಾಹನ ನಿಲುಗಡೆ ಜಾಗವನ್ನು ಮಲ್ಟಿಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆಗಾಗಿ ಬಳಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು.

ಕೋಟ್ಯಂತರ ರೂ. ವೆಚ್ಚದ ಕಾಮಗಾರಿಯ ಈ ವ್ಯವಸ್ಥೆಯಿಂದ ಏಕಕಾಲದಲ್ಲಿ ಕನಿಷ್ಠ 300ರಿಂದ 400 ವಾಹನಗಳನ್ನು ನಿಲುಗಡೆಗೊಳಿಸಲು ಸಾಧ್ಯವೆಂದು ಅಂದಾಜಿಸಲಾಗಿದೆ. ಆದರೆ ಪ್ರಕ್ರಿಯೆಗೆ ಚಾಲನೆ ನೀಡದ ಕಾರಣ ಕಡತಗಳು ಬೆಂಗಳೂರಿನಲ್ಲಿರುವ ಕಮಿಷನರ್‌ ಕಚೇರಿಯಲ್ಲಿ ಉಳಿದಿದೆ.

ಗಗನ ಕುಸುಮವಾದ ಬೈಪಾಸ್‌ ರಸ್ತೆ ಬಳಕೆ
ಮಾರಿಗುಡಿಯಿಂದ ಎಡಕ್ಕೆ ಸಾಗುವ ರಸ್ತೆಯ ಮೂಲಕ ರಿಂಗ್‌ ರೋಡ್‌ ಮಾದರಿಯಲ್ಲಿ ಬೈಪಾಸ್‌ ರಸ್ತೆ ನಿರ್ಮಿಸಿ ಲಲಿತಾಂಬಿಕಾ ಗೆಸ್ಟ್‌ ಹೌಸ್‌ ತನಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಮಾರ್ಗೋಪಾಯ ಗುರುತಿಸಲಾಗಿದ್ದರೂ, ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಟ್ರಾಫಿಕ್‌ ಜಾಮ್‌ ಗೊಂದಲ ನಿತ್ಯ ನಿರಂತರವಾಗಿ ಮುಂದುವರಿಯುತ್ತಿದೆ.

ಸಾವಿರಾರು ಭಕ್ತರು
ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಪ್ರತಿದಿನ ಕನಿಷ್ಠ 8ರಿಂದ 10 ಸಾವಿರ ಭಕ್ತರು ಶ್ರೀ ದೇವಿ ದರ್ಶನಕ್ಕೆ ಕೊಲ್ಲೂರಿಗೆ ಆಗಮಿಸುತ್ತಾರೆ. ಮಳೆಗಾಲದಲ್ಲಿ ಒಂದಿಷ್ಟು ಭಕ್ತರ ಸಂಖ್ಯೆ ಕಡಿಮೆಯಾದೀತು. ಆದರೆ ಮಿಕ್ಕುಳಿದ ಋತುಗಳಲ್ಲಿ ದಾಖಲೆಯ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವುದರಿಂದ ವಾಹನ ಸಂಚಾರ ನಿಲುಗಡೆ ಗೊಂದಲ ನಿವಾರಿಸಲು ಶಾಶ್ವತ ನೆಲೆಯಲ್ಲಿ ಪರ್ಯಾಯ ವ್ಯವಸ್ಥೆ ರೂಪಿಸಿ, ಅನುಷ್ಠಾನಗೊಳಿಸತಕ್ಕದ್ದು. ವ್ಯವಸ್ಥೆಗಳಿಗೆ ಅನುಕೂಲಕರವಾದ ವಾತಾವರಣವಿದ್ದರೂ
ಇಚ್ಛಾಶಕ್ತಿಯ ಕೊರತೆಯಿಂದ ಪರ್ಯಾಯ ವ್ಯವಸ್ಥೆ ರೂಪಿಸುವಲ್ಲಿ ವಿಫಲವಾಗುತ್ತಿದೆಯೇ ಎಂಬ ಪ್ರಶ್ನೆ ಗ್ರಾಮಸ್ಥರು ಹಾಗೂ ಭಕ್ತರನ್ನು ಕಾಡುತ್ತಿದೆ.

ವಿಸ್ತರಣೆಗೊಂಡ ರಸ್ತೆ: ಇಕ್ಕೆಲಗಳಲ್ಲಿ ವಾಹನ ನಿಲುಗಡೆ ಒಂದೆಡೆ ಮುಖ್ಯ ರಸ್ತೆಯ ಸಂಪೂರ್ಣ ಡಾಮರೀಕರಣವಾಗಿರುವುದು ಗ್ರಾಮಸ್ಥರಿಗೆ ಖುಷಿಕೊಟ್ಟರೆ ಇನ್ನೊಂದೆಡೆ ವಿಸ್ತರಣೆಗೊಂಡ ರಸ್ತೆಯ ಇಕ್ಕೆಲಗಳ ಬಹುತೇಕ ಕಡೆ ಗಂಟೆಗಟ್ಟಲೇ ವಾಹನ ನಿಲುಗಡೆಗೊಳಿಸುತ್ತಿರುವ ಯಾತ್ರಾರ್ಥಿಗಳ ಅಸಹಕಾರ ಮತ್ತೆ ಕಿರಿಕಿರಿ ಉಂಟುಮಾಡಿದ್ದು, ಸುಗಮ ವಾಹನ ಸಂಚಾರಕ್ಕೆ ತಡೆ ಒಡ್ಡಿದ್ದು, ಪ್ರತಿದಿನ ಟ್ರಾಫಿಕ್‌ ಜಾಮ್‌ ಕಂಡುಬರುತ್ತಿದೆ.

ಅನುಮತಿಗಾಗಿ ಕಾಯುತ್ತಿದ್ದೇವೆ
ಕೊಲ್ಲೂರಿನಲ್ಲಿ ಏಕಕಾಲದಲ್ಲಿ ನೂರಾರು ವಾಹನ ನಿಲುಗಡೆಗೆ ಮಲ್ಟಿಲೆವೆಲ್‌ ಪಾರ್ಕಿಂಗ್‌ ವ್ಯವಸ್ಥೆಗಾಗಿ ಅಂದಾಜು ವೆಚ್ಚ ಸುಮಾರು 60 ಕೋಟಿ ರೂ. ನ ನೀಲಿನಕ್ಷೆ ಧಾರ್ಮಿಕ ದತ್ತಿ ಇಲಾಖೆ ಕಮಿಷನರ್‌ ಅವರಿಗೆ ಕಳುಹಿಸಲಾಗಿದೆ. ಅನುಮತಿಗಾಗಿ ಕಾಯುತ್ತಿದ್ದೇವೆ.
* ಪ್ರಶಾಂತ ಕುಮಾರ್‌ ಶೆಟ್ಟಿ,
ಕಾರ್ಯನಿರ್ವಹಣಾಧಿಕಾರಿಗಳು, ಕೊಲ್ಲೂರು ಶ್ರೀಮೂಕಾಂಬಿಕಾ ದೇಗುಲ

*ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

Shiroor : ಗಾಳಿ ಮಳೆಗೆ ಹಾರಿ ಹೋದ ಹೊಟೇಲ್‌ ಮೇಲ್ಛಾವಣಿ

ಗಂಗೊಳ್ಳಿ: ಕೋಡಿ ಬ್ರೇಕ್‌ವಾಟರ್‌ ಬಳಿಕ ಗಂಗೊಳ್ಳಿ ಸರದಿ

ಗಂಗೊಳ್ಳಿ: ಕೋಡಿ ಬ್ರೇಕ್‌ವಾಟರ್‌ ಬಳಿಕ ಗಂಗೊಳ್ಳಿ ಸರದಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.