ಕೋಟ: ಕೋಡಿ ಬೆಂಗ್ರೆಗೆ ಸರಕಾರಿ ಬಸ್‌ ಓಡಿಸಲು ಮೀನಮೇಷ


Team Udayavani, May 15, 2024, 6:17 PM IST

ಕೋಟ: ಕೋಡಿ ಬೆಂಗ್ರೆಗೆ ಸರಕಾರಿ ಬಸ್‌ ಓಡಿಸಲು ಮೀನಮೇಷ

ಕೋಟ: ಪರಿಶೀಲಿಸಿ ಕ್ರಮ ಕೋಡಿ ಗ್ರಾ.ಪಂ. ವ್ಯಾಪ್ತಿಯ ದ್ವೀಪ ಪ್ರದೇಶವಾದ ಕೋಡಿಬೆಂಗ್ರೆ ಭಾಗಕ್ಕೆ ಸರಕಾರಿ ಬಸ್ಸು ಸೌಲಭ್ಯ ಒದಗಿಸಬೇಕು ಎನ್ನುವ ಬೇಡಿಕೆ ಸ್ಥಳೀಯರಲ್ಲಿ ಹಲವು ವರ್ಷಗಳಿಂದ ಇದೆ. ಇಲ್ಲಿನ ನಿವಾಸಿಗಳು ಉದ್ಯೋಗ, ಮೀನು ಗಾರಿಕೆ ಮುಂತಾದ ಕಾರ್ಯ ಚಟುವಟಿಕೆಗಳಿಗಾಗಿ ಉಡುಪಿ, ಮಲ್ಪೆ, ಸಂತೆಕಟ್ಟೆಗೆ ತೆರಳಲು ಬಸ್ಸುಗಳನ್ನು ಅವಲಂಬಿಸಿಕೊಂಡಿದ್ದಾರೆ.ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಕೂಡ ದೂರದೂರಿಗೆ ತೆರಳಬೇಕಿದ್ದು ಬಸ್ಸು ಸಮಸ್ಯೆ ಇದೆ.

2 ಗಂಟೆಗೊಮ್ಮೆ ಬಸ್‌
ಇಲ್ಲಿನ ಕೆಮ್ಮಣ್ಣು ಹೂಡೆ ತನಕ ಸರಕಾರಿ ಬಸ್‌, ಖಾಸಗಿ ಬಸ್‌ ವ್ಯವಸ್ಥೆ ಇದೆ. ಆದರೆ ಪಡುತೋನ್ಸೆ ಬೆಂಗ್ರೆ, ಕೋಡಿ ಬೆಂಗ್ರೆಗೆ ಕೇವಲ ಎರಡು ಖಾಸಗಿ ಬಸ್‌ಗಳು ಎರಡು ಗಂಟೆಗೊಮ್ಮೆ ಸಂಚರಿಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ, ಮೀನುಗಾರರಿಗೆ, ಹಿರಿಯ ನಾಗರಿಕರಿಗೆ ಹಾಗೂ ಪ್ರವಾಸಿಗರಿಗೆ ತುಂಬಾ ಸಮಸ್ಯೆಯಾಗುತ್ತಿದೆ. ಆದ್ದರಿಂದ ಹೂಡೆ ತನಕ ಬರುವ ಸರಕಾರಿ ಬಸ್ಸನ್ನು ಪಡುತೋನ್ಸೆ ಬೆಂಗ್ರೆ ಮತ್ತು ಕೋಡಿ ಬೆಂಗ್ರೆಯವರೆಗೆ ವಿಸ್ತರಿಸಬೇಕು ಎನ್ನುವುದು ಇಲ್ಲಿನ ನಿವಾಸಿಗಳ ಬೇಡಿಕೆಯಾಗಿತ್ತು.

ಜಿಲ್ಲಾಧಿಕಾರಿಗಳಿಗೆ ಮನವಿ
ಈ ಬಗ್ಗೆ ಸ್ಥಳೀಯರು ಬ್ರಹ್ಮಾವರದಲ್ಲಿ ಫೆ.7 2024ರಂದು ನಡೆದ ಜನತಾದರ್ಶನದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಇದು ಸಾರಿಗೆ ಇಲಾಖೆಯ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಲುಪಿ ಕೆಲವೇ ದಿನದಲ್ಲಿ ಕೆಮ್ಮಣ್ಣು ಹೂಡೆ ನಡುವೆ
ಸಂಚಾರವಿರುವ ಸರಕಾರಿ ಬಸ್ಸನ್ನು ಪಡುತೋನ್ಸೆ ಬೆಂಗ್ರೆ, ಕೋಡಿ ಬೆಂಗ್ರೆ ತನಕ ವಿಸ್ತರಿಸುವುದಾಗಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಆದೇಶ ಹೊರಡಿಸಿದ್ದರು. ಆದರೆ ಆದೇಶ ಇದುವರೆಗೂ ಅನುಷ್ಠಾನವಾಗಿಲ್ಲ.

ಶೀಘ್ರ ಅನುಷ್ಠಾನವಾಗಲಿ
ಕೋಡಿ ಬೆಂಗ್ರೆ ಭಾಗಕ್ಕೆ ಸರಕಾರಿ ಬಸ್‌ ಸೇವೆ ಅಗತ್ಯವಾಗಿ ಬೇಕಿದ್ದು ಈ ಹಿಂದೆ ಗ್ರಾಮಸ್ಥರು ಸಲ್ಲಿಸಿದ ಮನವಿಯಂತೆ ಬಸ್ಸು ಸಂಚಾರಕ್ಕೆ ಆದೇಶವಾಗಿದೆ. ಆದರೆ ಇದುವರೆಗೂ ಅನುಷ್ಠಾನ ನಡೆದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ತುರ್ತು ಕ್ರಮಕೈಗೊಳ್ಳಬೇಕಿದೆ.
*ಪ್ರಸಾದ್‌ ತಿಂಗಳಾಯ
ಕೋಡಿಬೆಂಗ್ರೆ, ಸ್ಥಳೀಯರು

ಪರಿಶೀಲಿಸಿ ಕ್ರಮ
ಗ್ರಾಮಸ್ಥರ ಮನವಿಯಂತೆ ಪರಿಶೀಲಿಸಿ ಮಾರ್ಗ ವಿಸ್ತರಣೆಗೆ ಲಿಖಿತವಾಗಿ ಭರವಸೆ ನೀಡಲಾಗಿದೆ. ಚುನಾವಣೆ ಘೋಷಣೆಯಾದ್ದರಿಂದ ಸ್ವಲ್ಪ ಹಿನ್ನಡೆಯಾಗಿದ್ದು, ಶೀಘ್ರ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು.
*ಕಮಲ್‌ ಕುಮಾರ್‌, ಡಿ.ಟಿ.ಒ.,
ಕೆ.ಎಸ್‌.ಆರ್‌.ಟಿ.ಸಿ. ಮಂಗಳೂರು ವಿಭಾಗ

ಟಾಪ್ ನ್ಯೂಸ್

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.