Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

ಅಶ್ಲೀಲ ವೀಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ

Team Udayavani, May 15, 2024, 9:56 PM IST

Hassan ಮುಸ್ಸಂಜೆಯಿಂದ ಮುಂಜಾನೆವರೆಗೂ ಎಸ್‌ಐಟಿ ಶೋಧನೆ

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋವುಳ್ಳ ಪೆನ್‌ಡ್ರೆçವ್‌ ಹಂಚಿಕೆ ಪ್ರಕರಣದ ಹಾಸನ ಹಾಗೂ ಜಿಲ್ಲೆಯ 18 ಕಡೆ ಏಕಕಾಲದಲ್ಲಿ ಎಸ್‌ಐಟಿ ತಂಡ ಮಂಗಳವಾರ ಸಂಜೆಯಿಂದ ಬುಧವಾರ ಮುಂಜಾನೆ 3.30ರ ವರೆಗೂ ಶೋಧ ಕಾರ್ಯ ನಡೆಸಿದೆ.

ಬೆಂಗಳೂರಿನಿಂದ ಆಗಮಿಸಿದ್ದ ಎಸ್‌ಐಟಿ ಟೀಂಗಳು ಹಾಸನ, ಬೇಲೂರು, ಸಕಲೇಶಪುರ, ಚನ್ನರಾಯಪಟ್ಟಣ, ಹೊಳೆನರಸೀಪುರ ಸೇರಿದಂತೆ ಹದಿನೆಂಟು ಕಡೆಗಳಲ್ಲಿ ದಾಳಿ ನಡೆಸಿ ಕೂಲಂಕಷ ಪರಿಶೀಲನೆ ನಡೆಸಿದವು.
ಮಾಜಿ ಶಾಸಕ ಪ್ರೀತಂ ಗೌಡ ಅವರ ಆಪ್ತರಾದ ಕ್ವಾಲಿಟಿ ಬಾರ್‌ನ ಶರತ್‌, ಪುನೀತ್‌, ಎಚ್‌.ಪಿ. ಕಿರಣ್‌, ಕಾಂಗ್ರೆಸ್‌ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ ಗೌಡ, ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌, ಶಶಿಧರ್‌, ಚೇತನ್‌ ಗೌಡ ಹಾಗೂ ವಕೀಲ ಮತ್ತು ಬಿಜೆಪಿ ಮುಖಂಡ ದೇವರಾಜೇಗೌಡ ಮೊದಲಾದವರ ನಿವಾಸ, ಕಚೇರಿ, ರೆಸ್ಟೋರೆಂಟ್‌, ಹೊಟೇಲ್‌ ಮೊದಲಾದ ಕಡೆಗಳಲ್ಲಿ ಎಸ್‌ಐಟಿ ಶೋಧ ಕಾರ್ಯ ನಡೆಸಿತು.

ಇದಕ್ಕೂ ಮುನ್ನ ಕ್ವಾಲಿಟಿ ಬಾರ್‌ನ ಶರತ್‌ ಅವರ ಬೆಂಗಳೂರಿನ ಗೋಪಾಲನಗರದ ಶೋಭಾ ಅಪಾರ್ಟ್‌ಮೆಂಟ್‌ನಲ್ಲಿರುವ ನಿವಾಸದ ಮೇಲೂ ಎಸ್‌ಐಟಿ ತಂಡ ದಾಳಿ ಮಾಡಿ ಐಫೋನ್‌ ವಶಪಡಿಸಿಕೊಂಡಿದೆ ಎನ್ನಲಾಗಿದೆ. ಜತೆಗೆ ಹಲವು ಮಹತ್ವದ ಸಾಕ್ಷ್ಯ ಹಾಗೂ ದಾಖಲೆಗಳನ್ನೂ ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಒಟ್ಟಿನಲ್ಲಿ ಪೆನ್‌ಡ್ರೆçವ್‌ ಹಂಚಿಕೆಯ ಮೂಲ ಪತ್ತೆ ಹಚ್ಚಲು ಎಸ್‌ಐಟಿ ತಂಡ ತನಿಖೆ ತೀವ್ರಗೊಳಿಸಿದೆ.

ಷಡ್ಯಂತ್ರದ ಆರೋಪ
ಮುಖ್ಯವಾಗಿ ಪ್ರೀತಂ ಗೌಡ ಅವರ ಆಪ್ತರ ಒಡೆತನದ ಬಾರ್‌ ಹಾಗೂ ಹೊಟೇಲ್‌, ಕಚೇರಿ ಮೊದಲಾದ ಕಡೆಗಳಲ್ಲಿ ಎಸ್‌ಐಟಿ ದಾಳಿ ನಡೆಸಿ ಶೋಧಿಸಿದ ವೇಳೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ತಪಾಸಣೆ ವೇಳೆ ಕಂಪ್ಯೂಟರ್‌ ಮಾನಿಟರ್‌, ಹಾರ್ಡ್‌ ಡಿಸ್ಕ್ ಪರಿಶೀಲಿಸಿದಾಗ ಯಾವ ಸಾಕ್ಷಿಯೂ ದೊರಕಲಿಲ್ಲ ಎನ್ನಲಾಗಿದೆ. ಈ ನಡುವೆ ಮಂಗಳವಾರ ಎಸ್‌ಐಟಿ ದಾಳಿ ವೇಳೆ ಪ್ರೀತಂ ಗೌಡರ ಆಪ್ತ ಬಳಗವನ್ನೇ ಟಾರ್ಗೆಟ್‌ ಮಾಡಲಾಗಿದೆ. ಇದೆಲ್ಲಾ ರಾಜಕೀಯ ಷಡ್ಯಂತ್ರ ಎಂದು ಬಿಜೆಪಿಯ ಹಲವರು ದೂರಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.