Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ


Team Udayavani, May 15, 2024, 10:09 PM IST

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

ದಾವಣಗೆರೆ: ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ ಸಾವಿರಾರು ಮೀನುಗಳು ಸತ್ತಿರುವ ಘಟನೆ ನಡೆದಿದೆ.

ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ ಹೊಂದಿ ಕೊಂಡಿರುವ ಭದ್ರಾ ಕಾಲುವೆ ಆಶ್ರಿತವಾಗಿರುವ ಸುಮಾರು 126 ಎಕರೆ ವಿಸ್ತೀರ್ಣದ ಬೇತೂರು ಕೆರೆಯಲ್ಲಿ ಈ ಬರದಲ್ಲಿ ಸುಮಾರು 60 ಎಕರೆಯಷ್ಟು ನೀರು ಸಂಗ್ರಹವಿದ್ದು, ಕೆರೆ ಅಂಗಳದಲ್ಲಿ ಸುಮಾರು 20 ಅಡಿಗಳಷ್ಟು ಆಳದ ಗುಂಡಿಗಳಲ್ಲಿ 8-10 ಕೆಜಿ ತೂಕದ ಭಾರೀ ಮೀನುಗಳ ಮಾರಣ ಹೋಮ ನಡೆಸಲಾಗಿದೆ.

ಎಲೆಬೇತೂರು ಗ್ರಾಮದ ಮಂಜಪ್ಪ ಬಾರಿಕೇರ, ಸಿದ್ದಪ್ಪ ಬಾರಿಕರ, ಹನುಮಂತಪ್ಪ ಜಕ್ಕಾವರು ಸೇರಿಕೊಂಡು ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಪಡೆದು, ಸುಮಾರು 8 ಲಕ್ಷ ಮೀನು ಮರಿಗಳನ್ನು ಬಿಟ್ಟಿದ್ದರು. 5 ವರ್ಷಗಳ ಹಿಂದೆ ಬಿಟ್ಟಿದ್ದ ಮೀನುಗಳ ಸಂತತಿ ಹೆಚ್ಚಾಗಿತ್ತು. ರವೂ, ಕಾಟ್ಲಾ, ಗೌರಿ, ಮಿರಗಲ್‌, ಬ್ಲಾಕ್ ಶಾರ್ಪ್‌ ಹೀಗೆ ನಾನಾ ಮೀನುಗಳ ಮರಿಗಳನ್ನು ಬಿಡಲಾಗಿತ್ತು.

ಎಲೆಬೇತೂರು ಕೆರೆಯ 126 ಎಕರೆ ಪೈಕಿ ಅರ್ಧದಷ್ಟು ನೀರು ಸಂಗ್ರಹ ಇತ್ತು. ಸಹಜವಾಗಿಯೇ ಮೀನುಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿತ್ತು. ಬುಧವಾರ ಬೆಳಿಗ್ಗೆಯಿಂದಲೇ ಗ್ರಾಮಸ್ಥರು, ಸುತ್ತಮುತ್ತಲಿನ ಊರಿನವರು ಮೀನುಗಳನ್ನು ಹಿಡಿದುಕೊಂಡು ಹೋದ ಸುದ್ದಿ ಗೊತ್ತಾಗಿ ಮಂಜಪ್ಪ, ಹನುಮಂತಪ್ಪ, ಸಿದ್ದಪ್ಪ ಕೆರೆ ಬಳಿ ಬಂದಿದ್ದರು. ಸುಮಾರು 3 ಕ್ವಿಂಟಾಲ್ ಮೀನುಗಳನ್ನು ಹಿಡಿದು, 100 ರು.ಗೆ ಕೆಜಿಯಂತೆ ಮಾರಿದರೂ ಮೀನುಗಳ ಮಾರಣ ಹೋಮ ಮಾತ್ರ ತಡೆಯಲಾಗಿಲ್ಲ.

ಬೇತೂರು ಕೆರೆಯಲ್ಲಿ ಮೀನುಗಳು ಸತ್ತು ತೇಲುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆ ಎಲೆಬೇತೂರು, ನಾಗರಕಟ್ಟೆ, ಬಿ.ಚಿತ್ತಾನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಜಮಾಯಿಸಿದರು.

ಮೀನುಗಾರಿಕೆಗೆ ಟೆಂಡರ್ ಹಾಕಿದ್ದೆವು. ಈಗ ಇನ್ನೇನು ನಮ್ಮ ಬಾಯಿಗೆ ತುತ್ತು ಬರುತ್ತಿದೆಯೆಂಬ ಕಾಲಕ್ಕೆ ಕಾಣದ ಕೈಗಳು ನಮ್ಮ ತುತ್ತಿಗೆ ವಿಷ ಇಕ್ಕಿವೆ. ನಮ್ಮ ಅನ್ನಕ್ಕೆ ಯಾರು ಕಲ್ಲು ಹಾಕಿದ್ದಾರೋ ಗೊತ್ತಾಗುತ್ತಿಲ್ಲ. ಯಾರೋ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿರುವ ಸಾಧ್ಯತೆ ಇದೆ. ಕೆರೆ ಬಳಿ ವಿಷದ ಬಾಟಲು ಪತ್ತೆಯಾಗಿದೆ. ಸುಮಾರು 5 ಟನ್‌ನಷ್ಟು ಮೀನುಗಳು ಸಾವನ್ನಪ್ಪಿವೆ. 2ರಿಂದ 10 ಕೆಜಿವರೆಗಿನ ಮೀನು ಸತ್ತಿವೆ ಎಂದು ತಿಳಿಸಿದರು.

ಕಳೆದ 5 ವರ್ಷದಿಂದ ಸಾಕಿದ್ದ ವಿವಿಧ ಜಾತಿಯ ಸುಮಾರು 5 ಟನ್ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪಿವೆ. ವಿಷ ಪ್ರಾಶನದಿಂದ ಮೀನುಗಳು ಸಾಯುತ್ತಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.