![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-415x249.jpg)
Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ
Team Udayavani, May 16, 2024, 11:38 AM IST
![Head Coach; ರಾಹುಲ್ ದ್ರಾವಿಡ್ ಬಳಿಕ ಕೋಚ್ ಹುದ್ದೆ ನಿರಾಕರಿಸಿದ ಟೀಂ ಇಂಡಿಯಾ ದಿಗ್ಗಜ](https://www.udayavani.com/wp-content/uploads/2024/05/coach-620x342.jpg)
ಮುಂಬೈ: ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗಾಗಿ ಬಿಸಿಸಿಐ ಹುಡುಕಾಟ ಆರಂಭಿಸಿದೆ. ಮುಂಬರುವ ಟಿ20 ವಿಶ್ವಕಪ್ ಬಳಿಕ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಅಂತ್ಯವಾಗುವ ಕಾರಣದಿಂದ ಹೊಸ ಕೋಚ್ ಆಯ್ಕೆಗೆ ಬಿಸಿಸಿಐ ಮುಂದಾಗಿದೆ.
ಬಿಸಿಸಿಐ ಜಾಹೀರಾತಿನ ಪ್ರಕಾರ, ಜುಲೈ 1 ರೊಳಗೆ ಹೊಸ ಕೋಚ್ ಅಧಿಕಾರ ವಹಿಸಿಕೊಳ್ಳಲು ಯೋಜಿಸಿದೆ. ಹೊಸ ಕೋಚ್ 2027 ರ ಅಂತ್ಯದವರೆಗೆ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. 2025 ರ ಚಾಂಪಿಯನ್ಸ್ ಟ್ರೋಫಿ ಮತ್ತು ಮತ್ತು 2027ರ ಏಕದಿನ ವಿಶ್ವಕಪ್ ತಂಡವನ್ನು ಮಾರ್ಗದರ್ಶನ ಮಾಡುವ ಜವಾಬ್ದಾರಿಯು ಅವರ ಮೇಲಿರುತ್ತದೆ.
ವರದಿಗಳ ಪ್ರಕಾರ ಭಾರತೀಯ ಕ್ರಿಕೆಟ್ ತಂಡವು ಬಹಳ ಸಮಯದ ನಂತರ ವಿದೇಶದಲ್ಲಿ ಕೋಚ್ ನ್ನು ಹೊಂದಬಹುದು.
2023ರ ಏಕದಿನ ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ಅವರ ಮೊದಲ ಅವಧಿ ಅಂತ್ಯವಾಗಿತ್ತು. ಆದರೆ ಬಿಸಿಸಿಐ ಕೋರಿಕೆಯ ಮೇರೆಗೆ ಮತ್ತೆ ಒಂದು ವರ್ಷ ಮುಂದುವರಿದಿದ್ದರು. ಟಿ20 ವಿಶ್ವಕಪ್ ಅವರ ಕೊನೆಯ ಯೋಜನೆಯಾಗಿರಲಿದೆ. ವೈಯಕ್ತಿಕ ಕಾರಣದಿಂದ ರಾಹುಲ್ ಅವರು ಕೋಚ್ ಹುದ್ದೆಯಲ್ಲಿ ಮುಂದುವರಿಯಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಕೆಲವು ಹಿರಿಯರು ಟೆಸ್ಟ್ ತಂಡದಲ್ಲಿ ಮುಂದುವರಿಯುವಂತೆ ಮನವಿ ಮಾಡಿದರು, ಆದರೆ ಅವರು ನಿರಾಕರಿಸಿದರು ಎಂದು ವರದಿಯಾಗಿದೆ.
🚨 News 🚨
The Board of Control for Cricket in India (BCCI) invites applications for the position of Head Coach (Senior Men)
Read More 🔽 #TeamIndiahttps://t.co/5GNlQwgWu0 pic.twitter.com/KY0WKXnrsK
— BCCI (@BCCI) May 13, 2024
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರು ಮುಂದಿನ ಕೋಚ್ ಆಗಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರು ಕೂಡಾ ನಿರಾಕರಿಸಿದ್ದಾರೆ ಎನ್ನಲಾಗಿದೆ.
ನ್ಯೂಜಿಲ್ಯಾಂಡ್ ನ ಮಾಜಿ ನಾಯಕ, ಚೆನ್ನೈ ಸೂಪರ್ ಕಿಂಗ್ಸ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರು ಭಾರತ ತಂಡದ ಮುಖ್ಯ ಕೋಚ್ ಹುದ್ದೆಯ ರೇಸ್ ನಲ್ಲಿದ್ದಾರೆ ಎನ್ನಲಾಗಿದೆ. ಫ್ಲೆಮಿಂಗ್ ಅವರ ಮ್ಯಾನೇಜ್ಮೆಂಟ್ ಕೌಶಲ್ಯ ಕಾರಣದಿಂದ ಬಿಸಿಸಿಐ ಅವರನ್ನು ‘ಸೂಕ್ತ ಅಭ್ಯರ್ಥಿ’ ಎಂದು ಪರಿಗಣಿಸುತ್ತದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಆದರೆ ಸಿಎಸ್ ಕೆ ಫ್ರಾಂಚೈಸಿ ಅಂತಹ ಯಾವುದೇ ವದಂತಿಗಳನ್ನು ನಿರಾಕರಿಸಿದೆ. ಸಿಇಒ ಕಾಸಿ ವಿಶ್ವನಾಥನ್ ಅವರು ಫ್ಲೆಮಿಂಗ್ ಮತ್ತು ಫ್ರಾಂಚೈಸಿ ನಡುವೆ ಯಾವುದೇ ರೀತಿಯ ಸಂವಹನ ನಡೆದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ](https://www.udayavani.com/wp-content/uploads/2024/06/SHIVA-150x90.jpg)
Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ
![1-qeqewqe](https://www.udayavani.com/wp-content/uploads/2024/06/1-qeqewqe-150x87.jpg)
Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ
![Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ](https://www.udayavani.com/wp-content/uploads/2024/06/Young-Farmer-1-150x86.jpg)
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
![1-eqwwewq](https://www.udayavani.com/wp-content/uploads/2024/06/1-eqwwewq-150x101.jpg)
Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್
![Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ](https://www.udayavani.com/wp-content/uploads/2024/06/ag-1-150x93.jpg)
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.