![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, May 16, 2024, 1:27 PM IST
ಹುಬ್ಬಳ್ಳಿ: ಅಮಾನುಷ, ನಿರ್ಭಯವಾಗಿ ಕೊಲೆ ಮಾಡಿದ್ದಾನೆ ಎಂದರೆ ನೆಲದ ಕಾನೂನು ಬಗ್ಗೆ ಅಪರಾಧಿಗಳಿಗೆ ಭಯವಿಲ್ಲವಾಗಿದೆ. ಜನ ಸಾಮಾನ್ಯರಲ್ಲಿ ಭಯದ ವಾತಾವರಣದ ನಿರ್ಮಾಣವಾಗಿದೆ. ನೆಲದ ಕಾನೂನಿಗೆ ಗೌರವ ದೊರೆಯಬೇಕಾದರೆ ಸರ್ಕಾರ ಆರೋಪಿ ವಿರುದ್ಧ ನಿದ್ರಾಕ್ಷಿಣ್ಯವಾಗಿ ಸೂಕ್ತ ಕ್ರಮ ಕೈಗೊಂಡು ಬದ್ಧತೆ ತೋರಬೇಕು ಎಂದು ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ ಹೇಳಿದರು.
ಹತ್ಯೆಯಾದ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಇಂತಹ ಕೃತ್ಯಗಳಿಂದ ಜನರಿಗೆ ಸುರಕ್ಷತೆ ಇಲ್ಲವೆಂಬ ಭಾವ ಮೂಡಿದೆ. ಈ ಪರಿಸ್ಥಿತಿಯಲ್ಲಿ ಇಡೀ ಸಮಾಜ ಹತ್ಯೆಗೊಳಗಾದವರ ಕುಟುಂಬದ ಪರವಾಗಿ ನಿಂತು ನ್ಯಾಯ ದೊರಕಿಸಲು ಹೋರಾಡುತ್ತಿರುವುದು ನೋಡಿದರೆ ಇನ್ನೂ ಸಮಾಜದಲ್ಲಿ ದಯೆ ಇರುವುದನ್ನು ತೋರಿಸುತ್ತದೆ ಎಂದರು.
ನೇಹಾ ಮತ್ತು ಅಂಜಲಿಯಂತಹ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಂಜಲಿ ಹಂತಕನಿಗೆ ನೇಹಾ ಕೊಲೆ ಪ್ರೇರಣೆ ಆಗಿರಬಹುದು. ಈ ನೆಲದಲ್ಲಿ ಕಾನೂನಿಗೆ ಬೆಲೆ ಇದೆ ಎಂಬುವುದನ್ನು ಸರ್ಕಾರ ಆದಷ್ಟು ಬೇಗ ತೋರಿಸಬೇಕು ಎಂದರು.
ಮೃತ ಅಂಜಲಿ ಸಹೋದರಿಯರು ಶಿಕ್ಷಣ ಪಡೆಯಲು ಇಚ್ಛಿಸಿದರೆ ಮೂರು ಸಾವಿರ ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡಲಾಗುವುದು ಎಂದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.