Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು
Team Udayavani, May 16, 2024, 1:27 PM IST
ಹುಬ್ಬಳ್ಳಿ: ಅಮಾನುಷ, ನಿರ್ಭಯವಾಗಿ ಕೊಲೆ ಮಾಡಿದ್ದಾನೆ ಎಂದರೆ ನೆಲದ ಕಾನೂನು ಬಗ್ಗೆ ಅಪರಾಧಿಗಳಿಗೆ ಭಯವಿಲ್ಲವಾಗಿದೆ. ಜನ ಸಾಮಾನ್ಯರಲ್ಲಿ ಭಯದ ವಾತಾವರಣದ ನಿರ್ಮಾಣವಾಗಿದೆ. ನೆಲದ ಕಾನೂನಿಗೆ ಗೌರವ ದೊರೆಯಬೇಕಾದರೆ ಸರ್ಕಾರ ಆರೋಪಿ ವಿರುದ್ಧ ನಿದ್ರಾಕ್ಷಿಣ್ಯವಾಗಿ ಸೂಕ್ತ ಕ್ರಮ ಕೈಗೊಂಡು ಬದ್ಧತೆ ತೋರಬೇಕು ಎಂದು ಮೂರುಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮೀಜಿ ಹೇಳಿದರು.
ಹತ್ಯೆಯಾದ ಅಂಜಲಿ ಅಂಬಿಗೇರ ನಿವಾಸಕ್ಕೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಇಂತಹ ಕೃತ್ಯಗಳಿಂದ ಜನರಿಗೆ ಸುರಕ್ಷತೆ ಇಲ್ಲವೆಂಬ ಭಾವ ಮೂಡಿದೆ. ಈ ಪರಿಸ್ಥಿತಿಯಲ್ಲಿ ಇಡೀ ಸಮಾಜ ಹತ್ಯೆಗೊಳಗಾದವರ ಕುಟುಂಬದ ಪರವಾಗಿ ನಿಂತು ನ್ಯಾಯ ದೊರಕಿಸಲು ಹೋರಾಡುತ್ತಿರುವುದು ನೋಡಿದರೆ ಇನ್ನೂ ಸಮಾಜದಲ್ಲಿ ದಯೆ ಇರುವುದನ್ನು ತೋರಿಸುತ್ತದೆ ಎಂದರು.
ನೇಹಾ ಮತ್ತು ಅಂಜಲಿಯಂತಹ ಕೃತ್ಯಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಅಂಜಲಿ ಹಂತಕನಿಗೆ ನೇಹಾ ಕೊಲೆ ಪ್ರೇರಣೆ ಆಗಿರಬಹುದು. ಈ ನೆಲದಲ್ಲಿ ಕಾನೂನಿಗೆ ಬೆಲೆ ಇದೆ ಎಂಬುವುದನ್ನು ಸರ್ಕಾರ ಆದಷ್ಟು ಬೇಗ ತೋರಿಸಬೇಕು ಎಂದರು.
ಮೃತ ಅಂಜಲಿ ಸಹೋದರಿಯರು ಶಿಕ್ಷಣ ಪಡೆಯಲು ಇಚ್ಛಿಸಿದರೆ ಮೂರು ಸಾವಿರ ಮಠದ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ಶಿಕ್ಷಣ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್
Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್
Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.