Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ
Team Udayavani, May 16, 2024, 1:30 PM IST
ಹೊಸದಿಲ್ಲಿ: ಈ ಬಾರಿ ನೈಋತ್ಯ ಮುಂಗಾರು ನಿಗದಿತ ಸಮಯಕ್ಕೆ ಕೇರಳಕ್ಕೆ ಆಗಮಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಂಎಡಿ) ಬುಧವಾರ ಹೇಳಿದೆ. ಮೇ 31ಕ್ಕೆ ಮುಂಗಾರು ಭಾರತ ಪ್ರವೇಶಿಸಲಿದ್ದು, ಈ ವರ್ಷ ಭಾರತದ ಕೃಷಿ ಚಟುವಟಿಕೆಗಳಿಗೆ ನೆರವಾಗಲಿದೆ ಎಂದು ಇಲಾಖೆ ಹೇಳಿದೆ.
ಈ ಬಾರಿ ಮುಂಚಿತವಾಗಿ ಮುಂಗಾರು ಭಾರತ ಪ್ರವೇಶಿಸುತ್ತಿಲ್ಲ. ಜೂ.1 ಮುಂಗಾರು ಭಾರತ ಪ್ರವೇಶಿಸುವ ದಿನವಾಗಿದೆ. ಕೆಲವೊಮ್ಮೆ ಇದು 7 ದಿನಗಳ ಕಾಲ ತಡವಾಗುವ ಸಾಧ್ಯತೆಯೂ ಇತ್ತು. ಆದರೆ ಈ ವರ್ಷ ನಿಗದಿತ ಸಮಯಕ್ಕೆ ಮಳೆ ಬೀಳಲಿದೆ. ಈ ಬಾರಿ ಹೆಚ್ಚೆಂದರೆ 4 ದಿನಗಳ ವ್ಯತ್ಯಾಸವಾಗಬಹುದು ಎಂದು ಐಎಂಡಿ ನಿರ್ದೇಶಕ ಮೃತ್ಯುಂಜಯ್ ಮಹೋಪಾತ್ರ ಹೇಳಿದ್ದಾರೆ. ಈ ಭಾರಿ ಭಾರತದಲ್ಲಿ ಮುಂಗಾರಿನ ಪ್ರಭಾವದಿಂದ ಸಾಮಾನ್ಯಕ್ಕಿಂತ ಅಧಿಕ ಮಳೆಯಾಗಲಿದೆ. ಜೂನ್ನಿಂದ ಸೆಪ್ಟಂಬರ್ವರೆಗೆ ಮಳೆ ಅಧಿಕವಾಗಿರಲಿದೆ ಎಂದು ಇಲಾಖೆ ಕಳೆದ ತಿಂಗಳು ಹೇಳಿತ್ತು. ಭಾರತದ ಕೃಷಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಗಮನಿಸಿದರೆ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಬೀಳುವ ಮಳೆ ಅತ್ಯಂತ ಪ್ರಮುಖವಾಗಿದೆ.
ಇದನ್ನೂ ಓದಿ: Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.