Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

ಕಾರ್ಯಾಚರಣೆ ವೇಳೆ ಆರೋಪಿಗಳಿಂದ 2.74 ಕೋಟಿ ರೂ. ಮಾದಕ ವಸ್ತು ಜಪ್ತಿ

Team Udayavani, May 16, 2024, 2:50 PM IST

6-bng-crime

ಬೆಂಗಳೂರು: ಸಿಸಿಬಿಯ ಮಾದಕ ದ್ರವ್ಯನಿಗ್ರಹ ದಳದ ಅಧಿಕಾರಿಗಳು ಸಂಪಿಗೆಹಳ್ಳಿ, ವಿ.ವಿ. ಪುರಂ, ಕಾಟನ್‌ಪೇಟೆ ಹಾಗೂ ಕೊತ್ತನೂರು ಠಾಣೆ ವ್ಯಾಪ್ತಿಯ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಡ್ರಗ್ಸ್‌ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ.

ನೈಜಿರಿಯಾದ ಆಗಸ್ಟಿನ್‌ ನಾನ್ಸೋ (39), ಉದ್ರಿಕ್‌ ಫೆಡಲೀಸ್‌ (34), ಎರೆಮನ್‌ ಸ್ಮಾರ್ಟ್‌ (40) ಹಾಗೂ ಸ್ಥಳೀಯ ಆರು ಮಂದಿ ಸೇರಿದಂತೆ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ.

ಬಂಧಿತರಿಂದ 2.74 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಂಧಿತರ ಪೈಕಿ ಮೂವರು ವಿದೇಶಿ ಪ್ರಜೆಗಳು ಸಂಪಿಗೆಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಎಂಡಿ ಎಂಎ ಕ್ರಿಸ್ಟಲ್‌, ಕೊಕೇನ್‌ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ 50 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿ, ಮೂವರನ್ನು ಬಂಧಿಸಲಾಗಿದೆ.

ಆರೋಪಿಗಳು ಬ್ಯುಸಿನೆಸ್‌ ಹಾಗೂ ಮೆಡಿಕಲ್‌ ವೀಸಾ ಪಡೆದು ಭಾರತಕ್ಕೆ ಬಂದಿದ್ದಾರೆ. ಗೋವಾ, ಮುಂಬೈ ಹಾಗೂ ದೆಹಲಿಯಲ್ಲಿ ನೆಲೆಸಿದ್ದ ನೈಜೀರಿಯಾದ ಪ್ರಜೆಗಳಿಂದ ಮಾದಕ ವಸ್ತುಗಳನ್ನು ತಂದು ಬೆಂಗಳೂರಿನ ನಿರ್ದಿಷ್ಟ ಗ್ರಾಹಕರಿಗೆ ಪೂರೈಸುತ್ತಿದ್ದರು. ಎಂಡಿಎಂಎ ಕ್ರಿಸ್ಟಲ್‌ ಹಾಗೂ ಕೋಕೆನ್‌ನ್ನು 1 ಗ್ರಾಂಗೆ 10 ಸಾವಿರದಿಂದ 12 ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಬಂದ ಹಣದಿಂದ ಮೋಜಿನ ಜೀವನ ನಡೆಸುತ್ತಿದ್ದರು. ಆರೋಪಿಗಳ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎನ್‌ ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ಈ ಮೂವರ ಪೈಕಿ ಒಬ್ಬನ ವಿರುದ್ಧ ಸೈಬರ್‌ ಕ್ರೈಂ ಠಾಣೆಯಲ್ಲಿ ವಂಚನೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 28 ಐಟಿ ಕಾಯ್ದೆ ಅಡಿ ಕೇಸ್‌ ದಾಖಲಾಗಿವೆ ಎಂದು ಪೊಲೀಸ್‌ ಆಯುಕ್ತರು ಹೇಳಿದರು. ವಿವಿ ಪುರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಒಬ್ಬ ಡ್ರಗ್‌ ಪೆಡ್ಲರ್‌ ಬಂಧಿಸಲಾಗಿದೆ.

ಈತನಿಂದ 10 ಲಕ್ಷ ರೂ. ಮೌಲ್ಯದ 5 ಕೆಜಿ ಗಾಂಜಾ, 7 ಎಲ್‌ಎಸ್‌ಟಿ ಸ್ಟ್ರಿಪ್ಸ್‌, 25 ಗ್ರಾಂ ಚರಸ್‌, 1 ಮೊಬೈಲ್‌ ಹಾಗೂ ಒಂದು ಕಾರನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಕಾಟನ್‌ ಪೇಟೆ ಠಾಣೆ ವ್ಯಾಪ್ತಿಯಲ್ಲಿ ಮತ್ತೂಬ್ಬ ಪೆಡ್ಲರ್‌ ಬಂಧಿಸಿದ್ದು, ಆತನಿಂದ 14 ಲಕ್ಷ ರೂ. ಮೌಲ್ಯದ 7 ಕೆ.ಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಕೊತ್ತನೂರು ಠಾಣಾ ವ್ಯಾಪ್ತಿಯಲ್ಲಿ ಇನ್ನೊಬ್ಬ ಡ್ರಗ್ಸ್‌ ಪೆಡ್ಲರ್‌ ಬಂಧಿಸಿ, 2 ಕೋಟಿ ರೂ. ಮೌಲ್ಯದ 2 ಕೆ.ಜಿ ಹ್ಯಾಶಿಸ್‌ ಆಯಿಲ್, 716 ಚರಸ್‌ ಹಾಗೂ ಒಂದು ಮೊಬೈಲ್‌ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಆಯುಕ್ತರು ಹೇಳಿದರು.

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಯುವತಿಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.