27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಅಂತರ್ಯುದ್ಧದಲ್ಲಿ ಪ್ರಾಣ ಕಳೆದುಕೊಂಡಿದ್ದ ಎಂದು ಭಾವಿಸಿದ್ದರು..

Team Udayavani, May 16, 2024, 5:00 PM IST

1-aaaa

ಅಲ್ಜೀರಿಯಾ: 26 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹದಿಹರೆಯದ ತರುಣನನ್ನು ಆತನ ಮನೆಯಿಂದ ಕೇವಲ 100 ಮೀಟರ್ ದೂರದ ನೆರೆಮನೆಯ ನೆಲಮಾಳಿಗೆಯಿಂದ ರಕ್ಷಿಸಲಾಗಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

ನ್ಯೂಯಾರ್ಕ್ ಪೋಸ್ಟ್ ಪ್ರಕಾರ, 1998 ರಲ್ಲಿ ಒಮರ್ ಬಿನ್ ಒಮ್ರಾನ್ 17 ನೇ ವಯಸ್ಸಿನಲ್ಲಿ ಶಾಲೆಗೆ ಹೋಗುತ್ತಿದ್ದಾಗ ಅಪಹರಣಕ್ಕೊಳಗಾಗಿದ್ದ.ಅಲ್ಜೀರಿಯಾದಲ್ಲಿನ ತನ್ನ ನಿವಾಸದಿಂದ ಕೇವಲ 100 ಮೀಟರ್ ದೂರದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾನೆ. ಈಗ 45 ವರ್ಷ ವಯಸ್ಸಿನ ಒಮರ್ ಅವರನ್ನು ನೆರೆಮನೆಯವನೇ ಅಪಹರಿಸಿ ಮನೆಯಲ್ಲಿ ನೆಲಮಾಳಿಗೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿದ್ದ. ಒಂಟಿಯಾಗಿ ವಾಸಿಸುತ್ತಿದ್ದ 61 ವರ್ಷದ ವೃದ್ದನೇ ಅಪಹರಿಸಿದ್ದು ಆತನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.ಈ ಘೋರ ಅಪರಾಧ ಎಸಗಿದ ಅಪರಾಧಿಗೆ ಕಠಿನ ಶಿಕ್ಷೆ ವಿಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಭದ್ರತಾ ಪಡೆಗಳು ಒಮರ್‌ನನ್ನು ರಕ್ಷಿಸಿದ ಕ್ಷಣದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉದ್ದನೆಯ ಗಡ್ಡವನ್ನು ಹೊಂದಿರುವ ಒಮರ್ ನೆಲಮಾಳಿಗೆಯಿಂದ ಹೊರಬರಲು ಸಹಾಯ ಪಡೆದಿದ್ದು ನಡುಗುತ್ತಿರುವುದನ್ನು ಕಾಣಬಹುದಾಗಿದೆ.

ತನ್ನ ಸಹೋದರನೇ ಅಪಹರಣದಲ್ಲಿ ಭಾಗಿಯಾಗಿದ್ದಾನೆ ಎಂದು ಅಪಹರಣಗೈದವನ ಒಡಹುಟ್ಟಿದವ ಸಾಮಾಜಿಕ ಮಾಧ್ಯಮದಲ್ಲಿ ಬಹಿರಂಗಪಡಿಸಿದ ನಂತರ ಪೊಲೀಸರಿಗೆ ಮಾಹಿತಿ ಲಭ್ಯವಾಯಿತು. ಪಿತ್ರಾರ್ಜಿತ ಅಸ್ತಿ ವಿವಾದದಲ್ಲಿ ಸಹೋದರರ ಜಗಳ ಮಾಹಿತಿ ಬಹಿರಂಗಕ್ಕೆ ಕಾರಣವಾಯಿತು.

ಅಧಿಕಾರಿಗಳು ಮನೆಗೆ ನುಗ್ಗಿ ಹುಡುಕಿದಾಗ, ನೆಲದ ಮೇಲೆ ಹುಲ್ಲು ಹಾಸಿನ ಕೆಳಗೆ ಟ್ರ್ಯಾಪ್ಡೋರ್ ಕಂಡುಕೊಂಡಿದ್ದು ಒಳ ಪ್ರವೇಶಿಸಿ ರಕ್ಷಣೆ ನಡೆಸಿದ್ದಾರೆ. ಅಪಹರಣಕಾರನ ಮೇಲೆ ಒಮರ್‌ನ ನಾಯಿಯನ್ನು ಕೊಂದ ಆರೋಪವೂ ಇದೆ. ರಕ್ಷಿಸಿದ ನಂತರ ಒಮರ್‌ನನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

1990 ರ ದಶಕದಲ್ಲಿ ದೇಶದ ಅಂತರ್ಯುದ್ಧದ ಸಮಯದಲ್ಲಿ ಒಮರ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕುಟುಂಬದ ಇತರ ಸದಸ್ಯರು ಭಾವಿಸಿದ್ದರು. ಆದರೆ ತಾಯಿ ಮಾತ್ರ ಮಗನನ್ನು ಹುಡುಕುತ್ತಲೇ ಇದ್ದರು. ಆಕೆ 2013 ರಲ್ಲಿ ನೋವಿನಲ್ಲೇ ನಿಧನ ಹೊಂದಿದ್ದಳು. ”ಕಿಟಕಿಯ ಮೂಲಕ ಅಪಹರಣಕಾರನ ಮನೆಯಲ್ಲಿರುವುದನ್ನು ನಾವು ನೋಡಿದ್ದೆವು ಆದರೆ ಮಾತನಾಡಿಸಲು ಅಥವಾ ಕರೆಯಲು ಸಾಧ್ಯವಾಗಲಿಲ್ಲ” ಎಂದು ಒಮರ್ ಕುಟುಂಬ ಸದಸ್ಯರು ಹೇಳಿರುವುದಾಗಿ ಅಲ್ಜೀರಿಯಾದ ಸುದ್ದಿವಾಹಿನಿಗಳು ವರದಿ ಮಾಡಿವೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ

Bangla-Yunus

National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್‌ ಸ್ಮರಣೆಗೆ ಸರಕಾರ ಕೊಕ್‌

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.