Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ನೀರು ಕಡಿಮೆ ಆದ ಹಿನ್ನಲೆಯಲ್ಲಿ ಗೋಚರಿಸುತ್ತಿರುವ ಹುದುಗಿ ಹೋಗಿದ್ದ ದೇವಾಲಯ

Team Udayavani, May 16, 2024, 6:49 PM IST

1-qweqwewqe

ರಬಕವಿ-ಬನಹಟ್ಟಿ: ಪ್ರಪಂಚದಲ್ಲಿ ಅದೆಷ್ಟೋ ಕೌತುಕದ ಸಂಗತಿಗಳು ನಮಗೆ ಗೊತ್ತೇಇರದ ವಿಚಾರಗಳು ಇರುತ್ತವೆ. ಅವುಗಳ ಬಗ್ಗೆ ತಿಳಿದು ಕೊಂಡಾಗ ಅಚ್ಚರಿಯಾಗುವುದಂತು ಸತ್ಯ. ಅಂತೆಯೇ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದ ಕೃಷ್ಣಾ ನದಿಯ ಒಡಲಿನಲ್ಲಿ ಹುದುಗಿ ಹೋಗಿದ್ದ ಪುರಾತನ ದೇವಸ್ಥಾನವೊಂದು ನೀರು ಕಡಿಮೆ ಆದ ಹಿನ್ನಲೆಯಲ್ಲಿ ಇದೀಗ ಗೋಚರಿಸುತ್ತಿದೆ.

ಆದರೆ ಶತಮಾನದ ಇತಿಹಾಸ ಹೊಂದಿರುವ ದೇವಸ್ಥಾನ ಯಾವುದೇ ಪ್ರವಾಹಕ್ಕೂ ದಕ್ಕೆ ಯಾಗದೇ ಹಾಗೇ ನದಿಯ ಮಧ್ಯದಲ್ಲಿ ನಿಂತಿತ್ತು ಆದರೆ ಇತ್ತೀಚಿಗೆ ಸೇತುವೆ ನಿರ್ಮಾಣ ಕಾರ್ಯ ಮಡುತ್ತಿದ್ದು ಅಲ್ಲಿ ರಸ್ತೆ ನಿರ್ಮಾಣ ಮಾಡಿಕೊಂಡು ಕಾಮಗಾರಿ ಮಾಡುತ್ತಿರುವುದರಿಂದ ಶತಮಾನದ ದೇವಸ್ಥಾನಕ್ಕೆ ದಕ್ಕೆ ಯಾಗುವಂತಾಗಿದೆ.

ರಬಕವಿಯ ಬಾಳಪ್ಪ ಮರೆಗುದ್ದಿಯವರು ಸುಮಾರು 1912ರ ಸುಮಾರಿಗೆ ತಾವು ಕೂಡಿಸಿದ ಹಣದಿಂದ ನದಿ ತೀರದಲ್ಲಿ ಜನರಿಗೆ ಅನುಕೂಲವಾಗಲೆಂದು ಈಶ್ವರ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದರು.

ಈ ಮೊದಲು ನದಿಯ ವ್ಯಾಪ್ತಿ ಬಹಳ ಕಡಿಮೆ ಇದ್ದ ಕಾರಣ ದೇವಾಲಯ ನದಿಯ ದಡದಲ್ಲಿ ಇತ್ತು. ಆದರೆ 1971ರಲ್ಲಿ ವಿರೇಂದ್ರ ಪಾಟೀಲ ಸರ್ಕಾರ ರಬಕವಿ-ಬನಹಟ್ಟಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರಿನ ಸಲುವಾಗಿ ಬ್ಯಾರೇಜ ನಿರ್ಮಿಸಲು ಅನುಮತಿ ನೀಡಿದರೆ, 1973ರಲ್ಲಿ ದೇವರಾಜ ಅರಸು ಸರ್ಕಾರವಿದ್ದಾಗ ಪ್ರಥಮ ಬಾರಿಗೆ ನೀರನ್ನು ತಡೆ ಹಿಡಿಯಲಾಯಿತು. ಕಾರಣ ದೇವಾಲಯ ನೀರೊಳಗೆ ಮುಳುಗಿ ಹೋಯಿತು. ಈಗ ಅದೇ ನದಿಯ ಮಧ್ಯ ಭಾಗವಾಯಿತು. ನಿಜಕ್ಕೂ ಒಂದು ಅಪರೂಪದ ದೇವಸ್ಥಾನವಾಗಿರುವ ಇದು ಶತಮಾನಗಳು ಕಳೆದರೂ ಯಾವುದೇ ನೀರಿಗೂ ಗರ್ಭಗುಡಿಯಲ್ಲಿರುವ ಮೂರ್ತಿಗಳು ಜಗ್ಗದೇ ಆಲುಗಾಡದೇ ಹಾಗೇ ನಿಂತಿರುವುದು ವಿಶೇಷವಾಗಿದೆ.

ಮಳೆಯ ಕೊರತೆಯಿಂದಾಗಿ ಈ ಬಾರಿಯೂ ಕೂಡಾ ದೇವಸ್ಥಾನ ಸಂಪೂರ್ಣವಾಗಿ ತೆಗೆದುಕೊಂಡಿದೆ. ಸದ್ಯ ದೇವಸ್ಥಾನಕ್ಕೆ ಸೇತುವೆ ನಿರ್ಮಾಣದಿಂದ ತೊಂದರೆಯಾಗಿದೆ.

ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಬೆಳೆಸುವ ನಿಟ್ಟಿನಲ್ಲಿ ಕೃಷ್ಣಾ ನದಿಗೆ ಸೇತುವೆಯನ್ನು ನಿರ್ಮಾಣ ಮಾಡುವ ಕಾಮಗಾರಿ ನಡೆದಿದೆ. ಸದ್ಯ ನದಿಯ ಮಧ್ಯ ಭಾಗದಲ್ಲಿ ಕಂಬಗಳನ್ನು ನಿಲ್ಲಿಸುವ ಕಾಮಗಾರಿ ನಡೆದಿದೆ. ನದಿಯ ಮಧ್ಯ ಭಾಗದಕ್ಕೆ ತೆರಳಲು ರಸ್ತೆ ಮಾಡಲಾಗಿದೆ.

ಈಗ ದೇವಸ್ಥಾನ ರಸ್ತೆಯ ಕೆಳಗಡೆ ಬಂದಿದ್ದು, ದೇವಸ್ಥಾನದ ಸುತ್ತ ಮುತ್ತ ಬೃಹತ್ ಕಲ್ಲುಗಳು ಬಿದ್ದಿವೆ. ಇನ್ನೂ ಕೆಲವು ಕಲ್ಲುಗಳು ದೇವಸ್ಥಾನದ ಒಳಗಡೆ ಕೂಡಾ ಬಿದ್ದಿವೆ. ಮುಂದಿನ ದಿನಗಳಲ್ಲಿ ಕಲ್ಲು ಮಣ್ಣಿನಿಂದ ದೇವಸ್ಥಾನ ಮುಚ್ಚುವ ಪರಿಸ್ಥಿತಿ ಉಂಟಾಗಬಹುದಾಗಿದೆ. ಇದರಿಂದ ದೇವಸ್ಥಾನಕ್ಕೆ ಧಕ್ಕೆಯಾಗಲಿದೆ.

ನಮ್ಮ ಭಾರತೀಯ ನದಿಗಳು ನಾಗರೀಕತೆಯ ಮೆಟ್ಟಿಲುಗಳಾಗಿದ್ದು, ಅವುಗಳಲ್ಲಿ ಒಂದೊಂದು ವಿಶೇಷತೆಯನ್ನು ಒಳಗೊಂಡಿವೆ. ಸದ್ಯ ಒಂದು ಶತಮಾನದಷ್ಟು ಹಳೆಯದಾದ ಈ ದೇವಾಲಯ ಅನೇಕ ಬರಗಾಲ ಹಾಗೂ ಪ್ರವಾಹಗಳಿಗೆ ಮೂಖ ಸಾಕ್ಷಿಯಾಗಿ ನಿಂತಿದ್ದು, ಸೇತುವೆ ನಿರ್ಮಾಣ ಮಾಡುತ್ತಿರುವ ಗುತ್ತಿಗೆದಾರರು ದೇವಸ್ಥಾನಕ್ಕೆ ಯಾವುದೆ ರೀತಿಯ ಧಕ್ಕೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕಾಗಿದೆ. ಶತಮಾನಗಳಷ್ಟು ಹಿಂದಿನ ಇತಿಹಾಸ ಹೇಳುವ ದೇವಸ್ಥಾನವನ್ನು ಉಳಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣ ಮಾಡುತ್ತಿರುವವರು ಗಮನ ನೀಡಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಾ ಇತ್ತ ಗಮನ ನೀಡಬೇಕಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಕೂಡಾ ಇತ್ತ ಗಮನ ನೀಡಬೇಕು ಎಂದು ದಿನನಿತ್ಯ ನದಿ ಸ್ನಾನಕ್ಕೆ ಹೋಗುವ ಅರವಿಂದ ಪತ್ತಾರ, ವೀರೂಪಾಕ್ಷಯ್ಯ ಮಠದ, ಶಾಂತೇಶ ಬಳಗಾರ, ಪಂಚಯ್ಯ ಮಠದ, ಮಹಾದೇವ ಸನ್ಮನಿ ಮತ್ತು ಈಶ್ವರ ಜವಳಗಿ ಆಗ್ರಹಿಸಿದ್ದಾರೆ.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.