Belagavi: ಇರಿದು ಯುವಕನ ಕೊಲೆ; ಆರೋಪಿಯ ಸೋದರಿಯನ್ನು ಪ್ರೀತಿಸುತ್ತಿದ್ದುದು ಕಾರಣ
Team Udayavani, May 16, 2024, 11:12 PM IST
ಬೆಳಗಾವಿ: ದ್ವಿಚಕ್ರ ವಾಹನದ ಮೇಲೆ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ಯುವಕನನ್ನು ಯುವತಿಯ ಸಹೋದರ ಸೂð ಡ್ರೈವರ್ನಿಂದ ಚುಚ್ಚಿ ಕೊಲೆ ಮಾಡಿರುವ ಘಟನೆ ಇಲ್ಲಿನ ಮಹಾಂತೇಶ ನಗರದ ರಾಷ್ಟ್ರೀಯ ಹೆದ್ದಾರಿ ಸೇತುವೆ ಬಳಿ ಕನಕದಾಸ ವೃತ್ತದಲ್ಲಿ ಗುರುವಾರ ನಡೆದಿದೆ.
ಗಾಂ ಧಿ ನಗರದಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದ ಯುವಕ ಇಬ್ರಾಹಿಂ ಗೌಸ್(22) ಕೊಲೆಗೀಡಾಗಿದ್ದು, ಇದೇ ಪರಿಸರದ ಬೈಕ್ ಮೆಕ್ಯಾನಿಕ್ ಮುಜಮಿಲ್ ಸತ್ತಿಗೇರಿ (23) ಆರೋಪಿ. ಈತನನ್ನು ಪೊಲೀಸರು ಬಂಧಿ ಸಿದ್ದಾರೆ. ಇಬ್ರಾಹಿಂ ಗೌಸ್ ಹಾಗೂ ಮುಜಮ್ಮಿಲ್ನ ಸಹೋದರಿ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ವಿವಾಹ ಮಾಡಿಕೊಡುವಂತೆ ಯುವಕನ ಕಡೆಯವರು ಯುವತಿ ಮನೆಯವರ ಜತೆ ಮಾತುಕತೆ ನಡೆಸಿದ್ದರು.
ಆದರೆ ಮದುವೆಗೆ ಯುವತಿ ಮನೆಯವರು ನಿರಾಕರಿಸಿದ್ದರು. ಪ್ರೀತಿ-ಪ್ರೇಮ ಬಿಟ್ಟು ದೂರ ಇರುವಂತೆ ಇಬ್ಬರಿಗೂ ತಾಕೀತು ಮಾಡಿದ್ದರು. ಆದರೆ ಯುವಕ-ಯುವತಿ ಇಬ್ಬರೂ ಕದ್ದು ಮುಚ್ಚಿ ಪ್ರೀತಿಸುತ್ತಿರುವುದು ಯುವತಿಯ ಸಹೋದರ ಮುಜಮ್ಮಿಲ್ಗೆ ಗೊತ್ತಿತ್ತು. ಇಬ್ರಾಹಿಂ ಗೌಸ್ ಯುವತಿಯನ್ನು ಕರೆದುಕೊಂಡು ಗುರುವಾರ ಬೈಕ್ ಮೇಲೆ ತೆರಳುತ್ತಿದ್ದ. ಇದನ್ನು ಗಮನಿಸಿದ ಮುಜಮ್ಮಿಲ್ ಬೈಕ್ ನಿಲ್ಲಿಸಿ ತಕರಾರು ತೆಗೆದಿದ್ದಾನೆ.
ಸಹೋದರಿಯನ್ನು ಮನೆಗೆ ಬರುವಂತೆ ಹೇಳಿದ್ದಾನೆ. ಆದರೆ ಇದಕ್ಕೆ ಯುವತಿ ಒಪ್ಪಿಲ್ಲ. ಆಗ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ವಿಕೋಪಕ್ಕೆ ತಿರುಗಿದೆ. ಮುಜಮ್ಮಿಲ್ ತನ್ನಲ್ಲಿದ್ದ ಸೂðಡ್ರೈವರ್ನಿಂದ ಇಬ್ರಾಹಿಂನ ಹೊಟ್ಟೆಗೆ ಚುಚ್ಚಿದ್ದಾನೆ. ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಯುವಕನನ್ನು ಸಂಚಾರ ಠಾಣೆ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಜೀವ ಉಳಿಸಲಾಗಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.