3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

ಇ.ಡಿ. ವಶವಾದ ಹಣ ಬಡವರಿಗೆ ಹಂಚಲು ನ್ಯಾಯ ಸಂಹಿತೆಯಲ್ಲಿ ಅವಕಾಶ!

Team Udayavani, May 17, 2024, 6:55 AM IST

Modi 2

ಹೊಸದಿಲ್ಲಿ: ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಮೊದಲ 100 ದಿನಗಳಲ್ಲಿ ಏನೇನು ಮಾಡಬೇಕು ಎಂಬ ಬಗ್ಗೆ ರೂಪುರೇಷೆ ಸಿದ್ಧವಾಗಿದೆ. ಜತೆಗೆ ದೇಶದ ಯುವ ಜನತೆಯನ್ನು ಗಮನದಲ್ಲಿ ಇರಿಸಿಕೊಂಡು ಮತ್ತೆ 25 ದಿನಗಳ ಯೋಜನೆ ಸೇರ್ಪಡೆಗೊಳಿಸಲು ಚಿಂತಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದ ರ್ಶನದಲ್ಲಿ ಈ ವಿಷಯ ತಿಳಿಸಿರುವ ಅವರು, ಚುನಾ ವಣ ಪ್ರಚಾರದ ವೇಳೆ ಮೊದಲ ಬಾರಿಯ ಮತದಾರರು ಮತ್ತು ಯುವ ಜನರ ಉತ್ಸಾಹವನ್ನು ಕಂಡ ಬಳಿಕ ಮೊದಲ 100 ದಿನಗಳ ರೂಪುರೇಷೆಗೆ ಮತ್ತೆ 25 ದಿನಗಳನ್ನು ಸೇರಿಸುವ ಅಗತ್ಯ ಉಂಟಾಯಿತು ಎಂದಿದ್ದಾರೆ.

ನಾನು ಯವ ಜನರ ಸ್ಫೂರ್ತಿಯನ್ನು ಬಲ್ಲೆ. ಆದ್ದರಿಂದಲೇ ನಾನು 125 ದಿನಗಳ ಯೋಜನೆಯನ್ನು ಸಿದ್ಧಪಡಿಸಬೇಕಾಯಿತು.

2047ರ ವಿಕಸಿತ ಭಾರತದ ಪಯಣದಲ್ಲಿ ದೇಶದ ಜನರು ತಮ್ಮ ಆಲೋಚನೆಗಳನ್ನು ಹೇಳಬೇಕು ಮತ್ತು ತಮ್ಮ ಆದ್ಯತೆಗಳನ್ನು ತಿಳಿಸಬೇಕು. ಅಭಿವೃದ್ಧಿಯ ಪಯಣದಲ್ಲಿ ಯುವ ಜನತೆ ಭಾಗೀದಾರರಾಗಬೇಕು ಎಂದು ನಾನು ಬಯಸುತ್ತೇನೆ ಎಂದರು.

2014ರಲ್ಲಿ 5 ವರ್ಷಗಳಿಗಾಗಿ ನಾನು ಚುನಾವಣ ಪ್ರಣಾಳಿಕೆ ರೂಪಿ ಸಿದ್ದೆ. 2019ರಲ್ಲಿ ನಾನು ಜಗತ್ತಿನ ಗಮನ ಸೆಳೆದೆ. 2024ರಲ್ಲಿ ನನ್ನ ಯೋಜನೆ ಸ್ವಲ್ಪ ದೊಡ್ಡದು ಮತ್ತು ದೀರ್ಘಾವಧಿಗೆ ಸಂಬಂಧಿಸಿದ್ದಾಗಿದೆ. ಇದಕ್ಕಾಗಿ 5 ವರ್ಷಗಳಿಂದ ನಾನು ಕೆಲಸ ಮಾಡುತ್ತಿದ್ದೇನೆ. ಇದಕ್ಕಾಗಿ ಕೆಲಸ ಮಾಡುತ್ತ ಎರಡು ತಲೆಮಾರಿನ ಅಧಿಕಾರಿಗಳು ನಿವೃತ್ತರಾಗಿದ್ದಾರೆ ಮತ್ತು ಅನೇಕ ಹೊಸ ಅಧಿಕಾರಿಗಳು ಜತೆಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೆಲಸಕ್ಕೆ ಬಾರದಂತಿದ್ದ ಇ.ಡಿ.!
2014ಕ್ಕಿಂತ ಹಿಂದೆ ಜಾರಿ ನಿರ್ದೇಶ ನಾಲಯ (ಇ.ಡಿ.) ಕೆಲಸಕ್ಕೆ ಬಾರದ ಸಂಸ್ಥೆಯಂತಿತ್ತು. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಅದು ತನ್ನ ನೈಜ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಮೋದಿ ಹೇಳಿದರು. 2004ರಿಂದ 2014ರ ವರೆಗೂ ಅದೇ ಇ.ಡಿ., ಅದೇ ಕಾನೂನು ಇತ್ತು ಅಲ್ಲವೇ? ನಾನೇನು ಹೊಸ ಕಾನೂನು ಮಾಡಿಲ್ಲ. ಅಷ್ಟೇ ಯಾಕೆ, ಇ.ಡಿ. ಕೂಡ ನಾನು ರಚಿಸಿದ್ದಲ್ಲ. ಆಗ ಅದು ಕೇವಲ 34ರಿಂದ 35 ಲಕ್ಷ ರೂ.ಗಳನ್ನಷ್ಟೇ ವಶಕ್ಕೆ ಪಡೆದಿತ್ತು. ನಾವು ವಿಪಕ್ಷವಾಗಿದ್ದಾಗ, ಇ.ಡಿ. ಬಳಕೆ ಮಾಡದಂತೆ ಅವರನ್ನು (ವಿಪಕ್ಷಗಳು) ಯಾರಾದರೂ ತಡೆದಿದ್ದರೇ ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತದಲ್ಲೇ ಚುನಾವಣ ಆಯೋಗ ಸ್ವತಂತ್ರ
ಕಾಂಗ್ರೆಸ್‌ ಆಡಳಿತದಲ್ಲಿ ಚುನಾವಣ ಆಯೋಗ ಸರಕಾರದ ಅಧೀನದಲ್ಲಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಆಯೋಗವು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮೋದಿ ಹೇಳಿದರು. 50ರಿಂದ 60 ವರ್ಷ ಆಯೋಗ ಒಬ್ಬರೇ ಸದಸ್ಯರನ್ನು ಹೊಂದಿತ್ತು. ಬಳಿಕ ಆಯೋಗದಿಂದ ಹೊರ ಬಂದವರು ರಾಜ್ಯಪಾಲರು ಆಗುತ್ತಿದ್ದರು ಇಲ್ಲವೇ ಸಂಸದರಾಗುತ್ತಿದ್ದರು ಇಲ್ಲವೇ ಎಲ್‌.ಕೆ. ಆಡ್ವಾಣಿ ವಿರುದ್ಧ ಸ್ಪರ್ಧಿಸುತ್ತಿದ್ದರು. ಅಂದಿನ ಕಾಲದ ಚುನಾವಣ ಆಯುಕ್ತರು ಈಗಲೂ ಕಾಂಗ್ರೆಸ್‌ ಪಕ್ಷದ ಸಿದ್ಧಾಂತ ವನ್ನು ಟ್ವೀಟ್‌ ಮಾಡುತ್ತಾರೆ ಮತ್ತು ಲೇಖನಗಳನ್ನು ಬರೆಯುತ್ತಾರೆ. ಇದನ್ನೆಲ್ಲ ಗಮನಿಸಿದರೆ ಈಗ ಚು. ಆಯೋಗವು ಸಂಪೂರ್ಣ ಸ್ವತಂತ್ರವಾಗಿದೆ ಎಂದರು.

ಇ.ಡಿ. ವಶವಾದ ಹಣ ಬಡವರಿಗೆ ಹಂಚಲು ನ್ಯಾಯ ಸಂಹಿತೆಯಲ್ಲಿ ಅವಕಾಶ!
ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೆಲವರು ಜನರ ಹಣವನ್ನು ಲೂಟಿ ಮಾಡಿದ್ದಾರೆ. ಅದೇ ಹಣವನ್ನು ವಾಪಸ್‌ ಜನರಿಗೆ ನೀಡುತ್ತೇನೆ. ಇ.ಡಿ. ಸಹಿತ ಸರಕಾರಿ ತನಿಖಾ ಸಂಸ್ಥೆಗಳು ಸುಮಾರು 1.25 ಲಕ್ಷ ಕೋ.ರೂ. ಜಪ್ತಿ ಮಾಡಿವೆ. ಈ ಹಣವನ್ನು ಬಡವರಿಗೆ ನೀಡುವ ಸಂಬಂಧ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದೇನೆ. ಅಗತ್ಯ ಬಿದ್ದರೆ ಇದಕ್ಕಾಗಿ ನ್ಯಾಯ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವೆ. ಅಲ್ಲದೆ ಭಾರತೀಯ ದಂಡ ಸಂಹಿತೆಯ ಬದಲಾಗಿ ಜಾರಿಗೆ ಬಂದಿರುವ ಹೊಸ ನ್ಯಾಯ ಸಂಹಿತೆಯಲ್ಲಿ ಬಡವರಿಗೆ ಹಣ ಹಂಚುವ ಕುರಿತು ಕೆಲವು ವಿಧಿಗಳಲ್ಲಿ ಅವಕಾಶ ಕಲ್ಪಿಸುತ್ತೇವೆ ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdadsad

Technical Error; ಬಾಹ್ಯಾಕಾಶದಲ್ಲೇ ಬಾಕಿ ಆಗಲಿದ್ದಾರಾ ಸುನೀತಾ?

arrest-25

Hooch: ತಮಿಳುನಾಡಲ್ಲಿ ಇನ್ನು ಜೀವಾವಧಿ ಶಿಕ್ಷೆ!

1-dsadsad

CJI ಡಿ.ವೈ. ಚಂದ್ರಚೂಡ್‌: ಕೋರ್ಟ್‌ ದೇಗುಲವಲ್ಲ, ಜಡ್ಜ್ ದೇವರಲ್ಲ

Exam

NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

1-mncji

Bihar ಸೇತುವೆಗಳ ಕುಸಿತದಲ್ಲಿ ಸಂಚು: ಕೇಂದ್ರ ಸಚಿವ ಮಾಂಜಿ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

6-health

AUB: ಗರ್ಭಕೋಶದ ಅಸಹಜ ರಕ್ತಸ್ರಾವ; ಅಬ್ನಾರ್ಮಲ್‌ ಯುಟರೈನ್‌ ಬ್ಲೀಡಿಂಗ್‌ (ಎಯುಬಿ)

1

T20 world cup: ವಿಶ್ವಕಪ್‌ ದಿಗ್ವಿಜಯ… ಅಂದು – ಇಂದು 

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.