Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ
Team Udayavani, May 17, 2024, 10:39 AM IST
ಉಡುಪಿ: ಕುಂದಾಪುರ ತಾ|ನ ಸ್ಫೂರ್ತಿಧಾಮ ಸಂಸ್ಥೆಯ ಪುನರ್ವಸತಿಯಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ 2ನೇ ಆರೋಪಿ ಕೇಶವ ಕೋಟೇಶ್ವರ ಅವರನ್ನು ಬಿಡುಗಡೆಗೊಳಿಸಿ ಉಡುಪಿ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.
ಸಂಸ್ಥೆಯ ಕಾರ್ಯದರ್ಶಿ ಕೇಶವ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪವಿತ್ತು. ಘಟನೆಯ ಬಗ್ಗೆ ಗೊತ್ತಿದ್ದರೂ ದೂರು ದಾಖಲಿಸಲು ವಿಫಲವಾಗಿರುವ ಕೇಶವ ಕೋಟೇಶ್ವರಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ನೀಡುವಂತೆ ನ್ಯಾಯಾಲಯ ಆದೇಶಿಸಿತ್ತು. ಆದರೆ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಕಾಲಾವಧಿಯನ್ನು ಪರಿಗಣಿಸಿ ಕೇಶವರಿಗೆ ವಿಧಿಸಿದ 1 ವರ್ಷದ ಶಿಕ್ಷೆ ಕಡಿತಗೊಳಿಸಿ ಬಿಡುಗಡೆ ಮಾಡಲಾಗಿದೆ. ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ತೀರ್ಪು ನೀಡಿದ್ದು, ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.