![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್ ಕುಣಿಕೆ ಬಿಗಿದು ಸಾವು
Team Udayavani, May 17, 2024, 12:28 PM IST
![Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್ ಕುಣಿಕೆ ಬಿಗಿದು ಸಾವು](https://www.udayavani.com/wp-content/uploads/2024/05/14-13-620x372.jpg)
ಬೆಂಗಳೂರು: ಪದೇ ಪದೆ ತವರು ಮನೆಗೆ ಹೋಗುವುದು, ಸ್ನೇಹಿತರ ಜತೆ ಫೋನ್ನಲ್ಲಿ ಹೆಚ್ಚು ಮಾತನಾ ಡುತ್ತಿದ್ದಕ್ಕೆ ಬೇಸರಗೊಂಡ ಜಿಮ್ ತರಬೇತುದಾರನೊಬ್ಬ, ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಳ್ಳುತ್ತೇನೆ ಎಂದು ಬೆದರಿಸಲು ಯತ್ನಿಸಿ ಕೊನೆಗೆ ಅದೇ ನೇಣು ಕುಣಿಕೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿ ರುವ ಘಟನೆ ಬಾಗಲಗುಂಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಹಾರ ಮೂಲದ ಅಮಿತ್ ಕುಮಾರ್ ಸಾಹು(28) ಮೃತ ದುರ್ದೈವಿ. ಕೆಲ ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿರುವ ಅಮಿತ್ ಕುಮಾರ್ ಸಾಹು, ದಾಸರಹಳ್ಳಿಯಲ್ಲಿರುವ ಜಿಮ್ವೊಂದರಲ್ಲಿ ತರಬೇತುದಾರನಾಗಿದ್ದ. ಒಂದು ವರ್ಷದ ಹಿಂದೆ ದಾಸರಹಳ್ಳಿ ನಿವಾಸಿ ಯುವತಿಯನ್ನು ಪ್ರೀತಿಸಿ, ಆಕೆಯ ಪೋಷಕರ ವಿರೋಧದ ನಡುವೆಯೇ ಮದುವೆಯಾಗಿದ್ದ. ದಂಪತಿ ಆರಂಭದಲ್ಲಿ ಚೆನ್ನಾಗಿಯೇ ಇದ್ದರು. ಈ ಮಧ್ಯೆ ನರ್ಸಿಂಗ್ ಕೋರ್ಸ್ಗೆ ಸೇರಿದ್ದ ಪತ್ನಿ ತನಗೆ ಸಮಯ ನೀಡುತ್ತಿಲ್ಲ. ಸೇಹಿತರೊಂದಿಗೆ ಹೆಚ್ಚು ಮಾತನಾಡುತ್ತಿದ್ದಳು ಎಂದು ಪತಿ ಸಾಹು, ಆಕೆ ಜತೆ ಗಲಾಟೆ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಮೊದಲಿನಿಂದಲೂ ಬ್ಲ್ಯಾಕ್ವೆುàಲ್: ಪತಿಯ ವರ್ತನೆಯಿಂದ ಬೇಸತ್ತಿದ್ದ ಪತ್ನಿ ಸಮೀಪದಲ್ಲಿರುವ ತವರು ಮನೆಗೆ ಹೆಚ್ಚು ಹೋಗುತ್ತಿದ್ದಳು. ಅದರಿಂದ ತನ್ನೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ಸಮಯ ಕೂಡ ಕೊಡುತ್ತಿರಲಿಲ್ಲ ಎಂದು ಕೋಪಗೊಂಡಿದ್ದ ಅಮಿತ್ ಕುಮಾರ್, ಪತ್ನಿ ತವರು ಮನೆಗೆ ಹೋದಾಗಲೆಲ್ಲ, ಆಕೆಗೆ ವಿಡಿಯೋ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬ್ಲ್ಯಾಕ್ವೆುàಲ್ ಮಾಡಿ, ಮನೆಗೆ ಕರೆಸಿಕೊಳ್ಳುತ್ತಿದ್ದ. ಬುಧವಾರ ಕೂಡ ತವರು ಮನೆಗೆ ಹೋಗಿದ್ದ ಪತ್ನಿಗೆ ನಾಲ್ಕೈದು ಬಾರಿ ಕರೆ ಮಾಡಿದ್ದಾನೆ. ಆದರೆ, ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ. ಬಳಿಕ ವಿಡಿಯೋ ಕಾಲ್ ಮಾಡಿ, ಕೂಡಲೇ ಮನೆಗೆ ಬಾರದಿದ್ದರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ, ಹಗ್ಗವನ್ನು ಫ್ಯಾನ್ಗೆ ಹಾಕಿಕೊಂಡು ನೇಣು ಕುಣಿಕೆಗೆ ಕೊರಳು ಹಾಕಿಕೊಂಡು ಹೆದರಿಸಿದ್ದಾನೆ. ಅದರಿಂದ ಗಾಬರಿಗೊಂಡ ಪತ್ನಿ ಕೂಡಲೇ ಮನೆ ಬಳಿ ಬಂದಾಗ ಕೋಣೆಯೊಂದರ ಬಾಗಿಲನ್ನು ಒಳಭಾಗದಿಂದ ಅಮಿತ್ ಕುಮಾರ್ ಸಾಹು, ಲಾಕ್ ಮಾಡಿಕೊಂಡಿರುವುದು ಗೊತ್ತಾಗಿದೆ. ಎಷ್ಟೇ ಬಾಗಿಲು ಬಡಿದರೂ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಸ್ಥಳೀಯರ ನೆರವು ಪಡೆದು ಬಾಗಿಲು ಒಡೆದು ನೋಡಿದಾಗ ಅಮಿತ್ ಕುಮಾರ್ ಸಾಹು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ವೈದ್ಯರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾಗಿ ಎಂದು ಪೊಲೀಸರು ಮಾಹಿತಿ ನೀಡಿದರು.
ಅಚಾನಕ್ ಆಗಿ ಸಾವು: ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸುವ ವೇಳೆ ಮೊಬೈಲ್ ಕೈ ಜಾರಿ ಬಿದ್ದಿದ್ದು, ಅದನ್ನು ಹಿಡಿಯಲು ಹೋದಾಗ ಅಚಾನಕ್ ಆಗಿ ನೇಣು ಕುಣಿಕೆಯಲ್ಲಿದ್ದ ಕೊರಳಿಗೆ ಉರುಳು ಬಿಗಿದುಕೊಂಡು ಅಮಿತ್ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ಸದ್ಯ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಮೃತರು ಮತ್ತು ಆತನ ಪತ್ನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಈ ಘಟನೆ ಅಚಾತುರ್ಯ ಅಥವಾ ಅಚಾನಕ್ ಆಗಿ ಸಾವು ಸಂಭವಿಸಿದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ. ಆದರೆ ಆತ ಮೊದಲೇ ರೂಮ್ ಬಾಗಿಲನ್ನು ಒಳಗಿನಿಂದ ಲಾಕ್ ಮಾಡಿಕೊಂಡಿದ್ದ. ಪ್ರಾಥಮಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಹೆಚ್ಚಿನ ತನಿಖೆ ಬಳಿಕ ನಿಖರ ಕಾರಣ ತಿಳಿಯಲಿದೆ. –ಸೈದುಲು ಅದಾವತ್, ಉತ್ತರ ವಿಭಾಗದ ಡಿಸಿಪಿ
ಟಾಪ್ ನ್ಯೂಸ್
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು](https://www.udayavani.com/wp-content/uploads/2024/07/7-150x90.jpg)
Road mishap: ವಿಶ್ವಕಪ್ ಜೋಶ್ನಲ್ಲಿ ಬೈಕ್ ಓಡಿಸಿ ಡಿವೈಡರ್ಗೆ ಢಿಕ್ಕಿ; ಸವಾರನ ಸಾವು
![6](https://www.udayavani.com/wp-content/uploads/2024/07/6-150x90.jpg)
Bengaluru: ರಸ್ತೆ ಬದಿ ನಿಂತಿದ್ದ ಲಾರಿಗೆಬೈಕ್ ಡಿಕ್ಕಿ: ದುರ್ಮರಣ
![4](https://www.udayavani.com/wp-content/uploads/2024/07/4-150x90.jpg)
ಸಾಲ ಪಡೆದು ವಂಚನೆ ಮಾಡಿದ್ದ ಯುವಕನ ಅಪಹರಣ: ಫಾರ್ಮ್ ಹೌಸ್ ನಲ್ಲಿರಿಸಿ ಹಲ್ಲೆ
![Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್ ](https://www.udayavani.com/wp-content/uploads/2024/07/5-150x90.jpg)
Kidnap: ಮಹಿಳೆಯರಿಂದಲೇ ಯುವಕನ ಕಿಡ್ನ್ಯಾಪ್; 6 ಮಂದಿ ವಿರುದ್ಧ ಕೇಸ್
![2](https://www.udayavani.com/wp-content/uploads/2024/07/2-150x90.jpg)
Disease: ಡೆಂಘೀ ಜತೆ ಮಕ್ಕಳ ಕಾಡುತ್ತಿದೆ ಕಾಲು ಬಾಯಿ ರೋಗ!
MUST WATCH
ಹೊಸ ಸೇರ್ಪಡೆ
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-150x83.jpg)
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
![basavaraj rayareddy](https://www.udayavani.com/wp-content/uploads/2024/07/rayareddy-150x83.jpg)
Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ
![ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್](https://www.udayavani.com/wp-content/uploads/2024/07/virat-150x83.jpg)
Virat Kohli; ದಾಖಲೆ ಬರೆಯಿತು ವಿರಾಟ್ ಕೊಹ್ಲಿ ಅವರ ಈ ಇನ್ಸ್ಟಾಗ್ರಾಮ್ ಪೋಸ್ಟ್
![rohit sharma](https://www.udayavani.com/wp-content/uploads/2024/07/rohit-150x83.jpg)
Team India; ಟಿ20 ಗೆ ವಿದಾಯ ಹೇಳುವ ಯೋಚನೆ ಇರಲಿಲ್ಲ, ಆದರೆ…: ರೋಹಿತ್ ಶರ್ಮಾ
![Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…](https://www.udayavani.com/wp-content/uploads/2024/07/11-150x90.jpg)
Trekking tips: ಟ್ರೆಕ್ಕಿಂಗ್ ಹೋಗ್ತಾ ಇದ್ದೀರಾ?: ನಾವ್ ಹೇಳ್ಳೋದ್ ಸ್ವಲ್ಪ ಕೇಳ್ರಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.