ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ


Team Udayavani, May 17, 2024, 1:11 PM IST

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ತೆಲಂಗಾಣದಲ್ಲಿ 10 ದಿನಗಳ ಕಾಲ 400ಕ್ಕೂ ಹೆಚ್ಚು ಚಿತ್ರಮಂದಿರಗಳು ತನ್ನ ಪ್ರದರ್ಶನವನ್ನು ಸ್ಥಗಿತಗೊಳಿಸಲು ನಿರ್ಧರಿಸಿವೆ. ಅದಕ್ಕೆ ಕಾರಣ ಸಿನಿಮಾ ಕೊರತೆ. ಸದ್ಯಕ್ಕೆ ತೆಲುಗು ಚಿತ್ರರಂಗದಲ್ಲೂ ಯಾವ ದೊಡ್ಡ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಜೊತೆಗೆ ಐಪಿಎಲ್‌, ಚುನಾವಣೆ ಎಂದು ಜನ ಚಿತ್ರಮಂದಿರಕ್ಕೂ ಬರುತ್ತಿಲ್ಲ… ಸುಖಾಸುಮ್ಮನೆ ಥಿಯೇಟರ್‌ ನಡೆಸಿದರೆ ಖರ್ಚು ಭರಿಸುವುದು ಕಷ್ಟ ಎಂಬ ಕಾರಣಕ್ಕೆ ಅಲ್ಲಿನ ಪ್ರದರ್ಶಕರ ಸಂಘ ಈ ನಿರ್ಧಾರಕ್ಕೆ ಬಂದೇ ಬಿಟ್ಟಿದೆ.

ಇದು ತೆಲಂಗಾಣದಲ್ಲಿ ತಾನೇ ಎಂದು ಕನ್ನಡ ಚಿತ್ರರಂಗ ಅಸಡ್ಡೆ ತೋರಿಸುವಂತಿಲ್ಲ. ಮುಂದೊಂದು ದಿನ ಕರ್ನಾಟಕದಲ್ಲೂ ಈ ಪರಿಸ್ಥಿತಿ ತಲೆದೋರಿದರೂ ಅಚ್ಚರಿ ಇಲ್ಲ. ಇವತ್ತು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳನ್ನು ನಡೆಸುವುದು ಸವಾಲಿನ ಕೆಲಸ. ಈ ನಡುವೆ ಚಿತ್ರರಂಗದಿಂದ ಸಿನಿಮಾಗಳು ಪೂರೈಕೆಯಾಗದೇ ಇದ್ದಾಗ ಚಿತ್ರಮಂದಿರ ನಡೆಸುವುದು ಕಷ್ಟದ ಕೆಲಸ. ಇದೇ ಕಾರಣದಿಂದ ಇವತ್ತು ಅನೇಕ ಚಿತ್ರಮಂದಿರಗಳು ಶಾಶ್ವತವಾಗಿ ಮುಚ್ಚುತ್ತಿವೆ.

ತಾತ್ಕಾಲಿಕ ಸ್ಥಗಿತ

ಕರ್ನಾಟಕದಲ್ಲಿ 550ಕ್ಕೂ ಹೆಚ್ಚು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳಿವೆ. ಆದರೆ, ಪ್ರಸ್ತುತ ಇದರಲ್ಲಿ ಎಷ್ಟು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನ ಕಾಣುತ್ತಿವೆ ಎಂದರೆ ಬರುವ ಉತ್ತರ 300 ಪ್ಲಸ್‌. ಅದಕ್ಕೆ ಕಾರಣ ಕನ್ನಡ ಚಿತ್ರರಂಗದಲ್ಲಿನ ಸಿನಿಮಾಗಳ ಕೊರತೆ. ನಗರದೊಳಗಿನ ಚಿತ್ರಮಂದಿರಗಳು ಕೆಲವು ಶೋಗಳೊಂದಿಗೆ ಚಿತ್ರಮಂದಿರ ನಡೆಸುತ್ತಿದ್ದರೆ, ತಾಲೂಕು, ಜಿಲ್ಲಾ ಕೇಂದ್ರಗಳ ಅದೆಷ್ಟೋ ಚಿತ್ರಮಂದಿರಗಳು ಸದ್ಯಕ್ಕೆ ತಾತ್ಕಾಲಿಕವಾಗಿ ಶೋ ನಿಲ್ಲಿಸಿವೆ. ಈ ಮೂಲಕ ಅನವಶ್ಯಕ ವೆಚ್ಚವನ್ನು ತಪ್ಪಿಸುತ್ತಿವೆ.

ಈ ಕುರಿತು ಮಾತನಾಡುವ ವೀರೇಶ್‌ ಚಿತ್ರಮಂದಿರದ ಮಾಲೀಕರು ಹಾಗೂ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ.ಚಂದ್ರಶೇಖರ್‌, “ತೆಲಂಗಾಣದ ಚಿತ್ರಮಂದಿರಗಳ ಸ್ಥಿತಿ ಬಗ್ಗೆ ನಾವು ಮಾತನಾಡುತ್ತೇವೆ. ಆದರೆ, ನಮ್ಮಲ್ಲಿ ಈಗಾಗಲೇ 200ರಿಂದ 250 ಚಿತ್ರಮಂದಿರಗಳು ಪ್ರದರ್ಶನ ನಿಲ್ಲಿಸಿವೆ. ಉಳಿದ ಚಿತ್ರಮಂದಿರಗಳಲ್ಲೂ ಪೂರ್ಣ ಪ್ರಮಾಣದಲ್ಲಿ ಶೋಗಳು ನಡೆಯುತ್ತಿಲ್ಲ. ಅದಕ್ಕೆ ಕಾರಣ ಸಿನಿಮಾದ ಕೊರತೆ. ಇವತ್ತು ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರ ನಡೆಸುವುದು ಕಷ್ಟವಿದೆ. ಇಂತಹ ಸಮಯದಲ್ಲಿ ಶೋ ನಡೆಸುವ ಬದಲು ಸ್ಥಗಿತಗೊಳಿಸುವುದೇ ಉತ್ತಮ ಎಂಬ ನಿರ್ಧಾರಕ್ಕೆ ಕೆಲವು ಚಿತ್ರಮಂದಿರಗಳು ಬಂದಿವೆ’ ಎನ್ನುತ್ತಾರೆ.

ಬದ್ಧತೆಯ ಕೊರತೆ

ಒಂದು ಸಮಯದಲ್ಲಿ ವೈಭವದಲ್ಲಿ ಮೆರೆದ ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳ ಇವತ್ತಿನ ಈ ಸ್ಥಿತಿಗೆ ಕಾರಣವೇನು ಎಂದರೆ, ಬದ್ಧತೆಯ ಕೊರತೆ ಎಂಬ ಉತ್ತರ ಚಂದ್ರ ಶೇಖರ್‌ ಅವರಿಂದ ಬರುತ್ತದೆ. “ಇವತ್ತು ಚಿತ್ರರಂಗದಲ್ಲಿ ಬದ್ಧತೆ ಕಡಿಮೆಯಾಗಿದೆ. ನಾನು ಯಾವುದೇ ಒಂದು ವಿಭಾಗದ ಬಗ್ಗೆ ಹೇಳುತ್ತಿಲ್ಲ. ಚಿತ್ರರಂಗವೆಂದರೆ ಅದೊಂದು ಕುಟುಂಬ. ಒಂದು ಸಿನಿಮಾ ಹೊರಬರ ಬೇಕಾ ದರೆ ಅಲ್ಲಿ ಎಲ್ಲಾ ವಿಭಾಗಗಳು ಭಾಗಗಳು ಬದ್ಧತೆಯಿಂದ ಕೆಲಸ ಮಾಡ ಬೇಕಾಗುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಆ ಬದ್ಧತೆ ಕಡಿಮೆಯಾಗಿದೆ’ ಎನ್ನುತ್ತಾರೆ.

ರೆಗ್ಯುಲರ್‌ ನಿರ್ಮಾಪಕರು ದೂರ

ಅದೊಂದು ಸಮಯವಿತ್ತು. ಕನ್ನಡ ಚಿತ್ರರಂಗದಲ್ಲಿ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ವರ್ಷಕ್ಕೆ ಎರಡು ಮೂರು ಸ್ಟಾರ್‌ ಸಿನಿಮಾಗಳನ್ನು ಮಾಡುತ್ತಿದ್ದವು. ಸ್ಟಾರ್‌ಗಳು ಕೂಡಾ ಆ ನಿರ್ಮಾಪಕರ ಜೊತೆ ಅನ್ಯೋನ್ಯವಾಗಿದ್ದು, ಸಿನಿಮಾ ಮುಗಿಸಿಕೊಡುತ್ತಿದ್ದರು. ಆದರೆ, ಕಳೆದ ಒಂದಷ್ಟು ವರ್ಷಗಳಿಂದ ರೆಗ್ಯುಲರ್‌ ನಿರ್ಮಾಪಕರೆನಿಸಿಕೊಂಡವರು ಸಿನಿಮಾರಂಗದಿಂದ ದೂರವಾಗುತ್ತಿದ್ದಾರೆ.

ಇದು ಕೂಡಾ ಇವತ್ತಿನ ಚಿತ್ರರಂಗದ ಸ್ಥಿತಿಗೆ ಕಾರಣ. ಈ ಕುರಿತು ಮಾತನಾಡುವ ಚಂದ್ರಶೇಖರ್‌, “ನೀವೇ ಸೂಕ್ಷ್ಮವಾಗಿ ಗಮನಿಸಿ ಮೂರ್‍ನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದ ರೆಗ್ಯುಲರ್‌ ನಿರ್ಮಾಪಕರೆನಿಸಿಕೊಂಡಿದ್ದವರು ಈಗ ಸಿನಿಮಾರಂಗದಿಂದ ದೂರವಾಗಿದ್ದಾರೆ. ಇವತ್ತಿನ ವ್ಯವಸ್ಥೆಯಲ್ಲಿ ಸಿನಿಮಾ ಮಾಡೋದು ಕಷ್ಟ ಎಂಬ ಭಾವನೆ ಅವರಲ್ಲಿದೆ’ ಎನ್ನುತ್ತಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

bigg

BBK11 ಬಿಗ್ ಬಾಸ್ ಮನೆಯಲ್ಲಿ ಸದ್ದು ಮಾಡಿದ 5 ಕೋಟಿ ಲಂಚ, ರೋಲ್ ಕಾಲ್ ಲಾಯರ್..

Komal Kumar’s Yala kunni ready to release

Komal Kumar: ತೆರೆಗೆ ಬರಲು ಸಿದ್ದವಾಯ್ತು ʼಯಲಾ ಕುನ್ನಿʼ

Arjun Sarja announces new film Seetha Payana

Seetha Payana: ಅರ್ಜುನ್‌ ಸರ್ಜಾ ನಿರ್ದೇಶನದಲ್ಲಿ ʼಸೀತಾ ಪಯಣʼ; ನಿರಂಜನ್‌ ಹೀರೋ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.